ಶ್ರೀಕಿ ನಾಪತ್ತೆ ವಿಚಾರವನ್ನು ಪೊಲೀಸರು ನೋಡಿಕೊಳ್ಳುತ್ತಾರೆ: ಬೊಮ್ಮಾಯಿ
Team Udayavani, Nov 18, 2021, 2:05 PM IST
ಕೊಪ್ಪಳ: ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀಕಿ ಕಣ್ಮರೆಯಾಗಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅದನ್ನೆಲ್ಲ ಪೊಲೀಸರು ನೋಡ್ಕೊಳ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕೊಪ್ಪಳದ ಏರೋಡ್ರೋಮ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದರು.
ಶ್ರೀಕಿ ಕಣ್ಮರೆಯಾಗಿದ್ದಾರೆ ಎಂಬ ಪ್ರಶ್ನೆಗೆ ನೇರವಾಗಿ ಉತ್ತರಿಸದ ಅವರು, ಅದನ್ನೆಲ್ಲ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳುತ್ತಲೇ ನಡೆದು ಬಿಟ್ಟರು. ಸುದ್ದಿಗಾರರು ಎಷ್ಟೇ ಕರೆದರೂ ಅವರು ಪ್ರತಿಕ್ರಿಯೆ ನೀಡಲಿಲ್ಲ.
ಇದನ್ನೂ ಓದಿ:ಕಾಂಗ್ರೆಸ್ನವರನ್ನೇ ಗುರಿಯಾಗಿಟ್ಟುಕೊಂಡು ಸಿದ್ದರಾಮಯ್ಯ ಆರೋಪ: ಶೆಟ್ಟರ್ ಬಾಂಬ್
ಇದಕ್ಕೂ ಮೊದಲು ಮಾತನಾಡಿದ ಅವರು, ರಾಜ್ಯಾದ್ಯಂತ ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ಅದು ಮುಗಿಯುತ್ತಿದ್ದಂತೆ ಹಣಕಾಸು ಇಲಾಖೆಯೊಂದಿಗೆ ಚರ್ಚೆ ಮಾಡಿ ಪರಿಹಾರ ನೀಡಲಾವುದು ಎಂದರು.
ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿವೆ. ಹೀಗಾಗಿ ಬಿಜೆಪಿ ನಾಲ್ಕು ತಂಡಗಳಲ್ಲಿ ಪ್ರಚಾರಕ್ಕೆ ಸೂಚನೆ ನೀಡಿದೆ. ಹೀಗಾಗಿ ನಾನು ಕೊಪ್ಪಳದಲ್ಲಿ ಚಾಲನೆ ನೀಡುತ್ತಿದ್ದೇನೆ. ಟಿಕೇಟ್ ಯಾರಿಗೆ ನೀಡಬೇಕು ಎಂದು ರಾಜ್ಯದಿಂದ ಪಟ್ಟಿ ಫೈನಲ್ ಮಾಡಿ ಕೇಂದ್ರ ಹೈಕಮಾಂಡ್ ಗೆ ಕಳಿಸಲಾಗಿದೆ. ಅಲ್ಲಿಂದ ಮರಳಿ ಬಂದ ತಕ್ಷಣ ಘೋಷಣೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ
Koppal Lok Sabha Constituency: ಹಿಟ್ನಾಳ್ಗೆ ಹೊಸ ಮುಖ ಡಾ| ಕ್ಯಾವಟರ್ ಸವಾಲು
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ