ಆನೆ ದಾಳಿ: ಅಪಾರ ಪ್ರಮಾಣದ ಬೆಳೆ ಹಾನಿ


Team Udayavani, Nov 18, 2021, 4:34 PM IST

ಬೆಳೆ ನಾಶ – ಆನೆ ದಾಳಿ

ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ದೇವರದೊಡ್ಡಿ ಗ್ರಾಮದಲ್ಲಿ ಆನೆಗಳ ದಾಳಿಗೆ ರಾಗಿ ಹೊಲ, ಟೊಮೆಟೋ ಬೆಳೆ ನಾಶವಾಗಿದೆ.

ಬೆಳೆ ಹಾನಿ: ಐದು ಆನೆಗಳ ಹಿಂಡು ದಾಂಧಲೆ ನಡೆಸಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಮರಿಸ್ವಾಮಯ್ಯ ಅವರಿಗೆ ಸೇರಿದ ಟೊಮೊಟೋ ತೋಟ, ಸಿದ್ದಯ್ಯ, ಚಿಕ್ಕಸ್ವಾಮಯ್ಯ, ಬೋರೇ ಗೌಡ ಎಂಬು ವರುಗೆ ಸೇರಿದ ತೆಂಗಿನ ಮರಗಳು, ರಾಜು, ನಾಗೇಶ್‌ ಎಂಬುವರಿಗೆ ಸೇರಿದ ರಾಗಿ ಹೊಲ ಆನೆಗಳ ದಾಳಿಯಿಂದಾಗಿ ನಾಶವಾಗಿವೆ.

ಗ್ರಾಮಸ್ಥರಿಗೆ ಆತಂಕ: ಹದಿನೈದು ದಿನಗಳಿಂದ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದಲ್ಲೇ ಬೀಡು ಬಿಟ್ಟಿರುವ ಆನೆಗಳು ಪದೇ ಪದೇ ಗ್ರಾಮದ ಕಡೆಗೆ ಬಂದು ತೆಂಗು, ಮಾವು, ಹಲಸು, ಬಾಳೆ, ಭತ್ತದ ಗದ್ದೆ, ರಾಗಿ ಹೊಲವನ್ನು ನಾಶ ಪಡಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಮಳೆ ಜೊತೆಗೆ ಆನೆ ಕಾಟ: ನಿರಂತರ ಮಳೆ ಕಾರಣ ಈಗಾಗಲೆ ತಾವು ಬೆಳೆದ ಬೆಳೆ ನಾಶವಾಗುವ ಆತಂಕದಲ್ಲಿರುವ ತಮಗೆ ಆನೆಗಳ ದಾಳಿ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು. ಆನೆಗಳ ನಿರಂತರ ದಾಳಿಯಿಂದ ಜೀವನ ಕಷ್ಟವಾಗುತ್ತಿದೆ ಎಂದು ರೈತರು ಅಲವತ್ತುಕೊಂಡಿದ್ದಾರೆ.

ಜೀವ ಭಯದಲ್ಲಿ ಗ್ರಾಮಸ್ಥರು: ಬೆಳೆ ನಾಶ ಒಂದು ಕಡೆಯಾದರೆ ಸಂಜೆ ವೇಳೆ ಮನೆಗಳಿಂದ ಹೊರಕ್ಕೆ ಬರಲು ಸಹ ಭಯವಾಗುತ್ತಿದೆ. ವಿಶೇಷವಾಗಿ ತೋಟ, ಗದ್ದೆಗಳ ಪಕ್ಕದಲ್ಲಿರುವ ರಸ್ತೆಗಳು, ಮನೆಗಳ ವಾಸಿಗಳಿಗೆ ತೊಂದರೆಯಾಗು ತ್ತಿದೆ. ರಾತ್ರಿ, ಬೆಳಗ್ಗೆ ಎನ್ನದೇ ಆನೆಗಳ ಭಯ ಕಾಡುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಆಗಿರುವ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. ಆನೆಗಳನ್ನು ಚಿಕ್ಕಮಣ್ಣುಗುಡ್ಡೆ ಅರಣ್ಯ ದಿಂದ ಅವುಗಳ ಸ್ವಸ್ಥಾನ ಸೇರಿಸುವ ಕೆಲಸ ಶೀಘ್ರದಲ್ಲೇ ಮಾಡಬೇಕು ಎಂದು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ತಿಮಸಂದ್ರ ಗ್ರಾಮಕ್ಕೆ ಲಗ್ಗೆಯಿಟ್ಟ ಆನೆ ಹಿಂಡು

 ಚನ್ನಪಟ್ಟಣ: ತಾಲೂಕಿನ ತಿಮ್ಮಸಂದ್ರ ಗ್ರಾಮದ ಹೊರವಲಯದಲ್ಲಿ ಬುಧವಾರ ಐದು ಆನೆಗಳ ತಂಡ ಕಾಣಿಸಿಕೊಂಡು ಆತಂಕವುಂಟು ಮಾಡಿದವು. ಬರುವ ಹಾದಿಯಲ್ಲಿ ರೈತರ ಬೆಳೆಗಳನ್ನು ನಾಶಮಾಡಿದ ಆನೆಗಳು, ಕೆರೆಯಲ್ಲಿ ಬೀಡುಬಿಟ್ಟಿದ್ದವು. ವಿಚಾರ ತಿಳಿದ ಗ್ರಾಮಸ್ಥರು ಆನೆಗಳನ್ನು ನೋಡಲು ಮುಗಿಬಿದ್ದಿದ್ದರು.

ಕೆಲವರು ಆನೆಗಳ ಜತೆಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದುದು ಆತಂಕಕ್ಕೆ ಕಾರಣವಾಯಿತು. ಕೂಗಾಟ ಜೋರಾಗಿದ್ದರಿಂದ ಆನೆಗಳು ಬೆದರಿ ಓಡಿದವು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜನರನ್ನು ಹತ್ತಿರ ಹೋಗದಂತೆ ನೋಡಿಕೊಂಡರು. ಅರಣ್ಯ ಇಲಾಖೆ ಅಧಿಕಾರಿ ದಿನೇಶ್‌ ಅವರು ತಮ್ಮ ಸಿಬ್ಬಂದಿ ಜತೆ ಬಂದು ಆನೆಗಳನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಕಳುಹಿಸಲು ಕ್ರಮ ಕೈಗೊಂಡರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.