ಆರ್ಥಿಕ ಸ್ವಾಯತ್ತತೆಗೆ ಬಜೆಟ್‌ನಲ್ಲಿ ಹಣ ಮೀಸಲಿಗೆ ಹೊರಟ್ಟಿ ಮನವಿ


Team Udayavani, Nov 18, 2021, 9:00 PM IST

ಆರ್ಥಿಕ ಸ್ವಾಯತ್ತತೆಗೆ ಬಜೆಟ್‌ನಲ್ಲಿ ಹಣ ಮೀಸಲಿಗೆ ಹೊರಟ್ಟಿ ಮನವಿ

ಶಿಮ್ಲಾ: ವಿಧಾನ ಮಂಡಲಗಳ ಸ್ವತಂತ್ರ ನಿರ್ವಹಣೆ ಹಾಗೂ ಪûಾತೀತ ಕಾರ್ಯನಿರ್ವಹಣೆ ದೃಷ್ಟಿಯಿಂದ ಆರ್ಥಿಕ ಸ್ವಾಯತ್ತತೆ ನೀಡುವುದು ಅಗತ್ಯವಾಗಿದ್ದು, ಬಜೆಟ್‌ನಲ್ಲಿ ಪ್ರತ್ಯೇಕ ಹಣ ಮೀಸಲಿಡಬೇಕೆಂದು ಕರ್ನಾಟಕ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮನವಿ ಮಾಡಿದರು.

ಶಿಮ್ಲಾದಲ್ಲಿ ನಡೆದ ಎರಡು ದಿನಗಳ 82ನೇ ಅಖೀಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ ಮತ್ತು ಶತಮಾನೋತ್ಸವ ಸಮಾರಂಭದಲ್ಲಿ ಸಮ್ಮೇಳನದ ನಿರ್ಣಯ ಕುರಿತ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ವಿಧಾನ ಮಂಡಲದ ಸಚಿವಾಲಯಕ್ಕೆ ಆರ್ಥಿಕ ಸ್ವಾಯತ್ತತೆ ನೀಡುವ ಕುರಿತು ಸಮ್ಮೇಳನ ಪೂರಕ ನಿರ್ಣಯ ಸ್ವೀಕರಿಸಿ, ಸದನಗಳ ಗೌರವ, ಘನತೆ ಹಾಗೂ ಪ್ರಾಮುಖ್ಯತೆ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಲೋಕಸಭಾಧ್ಯಕ್ಷರು ನಿರ್ಣಯ ಅಂಗೀಕರಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ, ಕೂಡಲೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡುವುದಾಗಿ ಭರವಸೆ ನೀಡಿದರು.

ಇ- ವಿಧಾನ್‌ ತಂತ್ರಜ್ಞಾನ ಅಳವಡಿಕೆಗೆ ಮನವಿ:
ವಿಧಾನ ಮಂಡಲದ ದೈನಂದಿನ ಕಾರ್ಯಚಟುವಟಿಕೆ ಹಾಗೂ ಆಡಳಿತವನ್ನು ಕಾಗದ ರಹಿತವನ್ನಾಗಿಸಲು ಇ-ವಿಧಾನ್‌ ತಂತ್ರಜ್ಞಾನವನ್ನು ಕೂಡ ಅಳವಡಿಸಿಕೊಳ್ಳುವುದು ಪ್ರಸ್ತುತ ಎಂದು ಹೇಳಿದರು. ಇದಕ್ಕೆ ಸ್ಪಂದಿಸಿದ ಸಭೆ, ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಿತು.

ವಿಧಾನ ಮಂಡಲಗಳ ಸ್ವತಂತ್ರ ನಿರ್ವಹಣೆ ಹಾಗೂ ಪಕ್ಷಾತೀತ ಕಾರ್ಯನಿರ್ವಹಣೆ ದೃಷ್ಟಿಯಿಂದ ಆರ್ಥಿಕ ಸ್ವಾಯತ್ತತೆ ನೀಡುವುದು ಮತ್ತು ಎರಡು ದಿನಗಳ ಸಮ್ಮೇಳನದ ಎಲ್ಲಾ ನಿರ್ಣಯಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ಮನವಿ ಮಾಡಿದರು.

ಸಭಾಪತಿಗಳ ಮನವಿಗೆ ಸಹಮತ ವ್ಯಕ್ತಪಡಿಸಿದ ಓಂ ಬಿರ್ಲಾ, ದೇಶದ ಎಲ್ಲಾ ವಿಧಾನ ಮಂಡಲಗಳಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ, ಪಾರದರ್ಶಕ ಹಾಗೂ ಸುಗಮ ಕಲಾಪಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ರಾಜ್ಯಸಭೆಯ ಉಪಸಭಾಪತಿ ಹರಿವಂಶ್‌ ನಾರಾಯಣ ಸಿಂಗ್‌ ಮಾತನಾಡಿ, ಮೊದಲ ಪೀಠಾಸೀನಾಧಿಕಾರಿಗಳ ಸಮ್ಮೇಳನ 1921ರಲ್ಲಿ ಮತ್ತು ಶತಮಾನತದ ಸಮ್ಮೇಳನ ಎರಡೂ ಕೂಡ ಹಿಮಾಚಲ ಪ್ರದೇಶದಲ್ಲಿಯೇ ನಡೆಯುತ್ತಿರುವುದು ಸಂತಸದ ಸಂಗತಿ ಎಂದರು.

ಇದನ್ನೂ ಓದಿ : ಭಾರಿ ಮಳೆ ಸಾಧ್ಯತೆ :ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೆಕರ್, ಎರಡು ದಿನಗಳ ಸಮ್ಮೇಳನ ಫ‌ಲಪ್ರದವಾಗಿದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸಿ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕರ್ನಾಟಕ ವಿಧಾನಸಭಾ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಹಿಮಾಚಲ ಪ್ರದೇಶದ ವಿಧಾನಸಭಾ ಸ್ಪೀಕರ್‌ ವಿಪಿನ್‌ ಸಿಂಗ್‌ ಪರಮಾರ್‌ ಸೇರಿದಂತೆ ವಿವಿಧ ರಾಜ್ಯಗಳ ವಿಧಾನ ಸಭಾಧ್ಯಕ್ಷರು ಹಾಗೂ ಸಭಾಪತಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.