30 ವಾರ್ಡ್‌ಗಳಿಗೆ ಇ-ಆಸ್ತಿ ತಂತ್ರಾಂಶ ವಿಸ್ತರಣೆ

ಎಲ್ಲಾ ವಾರ್ಡ್‌ಗಳಲ್ಲೂ ತಂತ್ರಾಂಶ ಅಳವಡಿಕೆಗೆ ಮಹಾನಗರ ಪಾಲಿಕೆ ಚಿಂತನೆ

Team Udayavani, Nov 19, 2021, 12:29 PM IST

ಬೆಂಗಳೂರು ಪಾಲಿಕೆ

ಬೆಂಗಳೂರು: ಬಿಬಿಎಂಪಿ ಕಂದಾಯ ಇಲಾಖೆ ತನ್ನ ಸೇವೆಗಳನ್ನು ಸರಳೀಕರಣ ಗೊಳಿಸಿ ಕ್ಲುಪ್ತ ಅವಧಿಯಲ್ಲಿ ವಿಲೇವಾರಿ ಮಾಡುವ ಉದ್ದೇಶ ದಿಂದ ಈಗಾಗಲೇ “ಇ-ಆಸ್ತಿ, ತಂತ್ರಾಂಶ’ವನ್ನು ಈಗಗಾಲೇ ಕೆಲವು ವಾರ್ಡ್‌ಗಳಲ್ಲಿ ವಿಸ್ತರಣೆ ಮಾಡಿದ್ದು ಇದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ.ಆ ಹಿನ್ನೆಲೆಯಲ್ಲಿ ಎರಡನೇ ಹಂತದಲ್ಲಿ ಬಿಬಿಎಂಪಿ ಪೂರ್ವ ವಲಯ ವ್ಯಾಪ್ತಿಯ 30 ವಾರ್ಡ್‌ಗಳಿಗೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.

ಹೆಬ್ಟಾಳ ಕ್ಷೇತ್ರ ವ್ಯಾಪ್ತಿಯ ಜೆಸಿನಗರ ಉಪ ವಿಭಾಗದ ಗಂಗೇನಹಳ್ಳಿ, ಜಯಚಾಮ ರಾಜೇಂದ್ರ ನಗರ, ಮನೋರಾಯನಪಾಳ್ಯ ವಿಶ್ವನಾಥ ನಾಗೇನಹಳ್ಳಿ ಹಾಗೂ ಹೆಬ್ಟಾಳ ಉಪ ವಿಭಾಗದ ಗಂಗಾನಗರ, ರಾಧಾಕೃಷ್ಣ ದೇವಸ್ಥಾನ ಮತ್ತು ಸಂಜಯನಗರ ವಾರ್ಡ್ ಗಳಿಗೆ ಸೇವೆ ವಿಸ್ತರಿಸಲಾಗಿದೆ.

ಶಿವಾಜಿನಗರ ಉಪವಿಭಾಗದ ಭಾರತಿ ನಗರ, ಶಿವಾಜಿನಗರ, ಅಲಸೂರು ವಸಂತನಗರ ಉಪ ವಿಭಾಗದ ಜಯ ಮಹಲ್‌, ರಾಮಸ್ವಾಮಿ ಪಾಳ್ಯ, ಸಂಪಂಗಿ ರಾಮನಗರ, ವಸಂತನಗರ ಪಾರ್ಡ್‌ಗಳಲ್ಲೂ ಇ-ಆಸ್ತಿ ತಂತ್ರಾಂಶ ಜಾರಿಗೊಳಿಸಲಾಗಿದೆ. ಪುಲಕೇಶಿ ನಗರ ಕ್ಷೇತ್ರದ ಪುಲಕೇಶಿನಗರ ಉಪವಿಭಾಗದ ದೇವರಜೀವನಹಳ್ಳಿ, ಪುಲಕೇಶಿನಗರ, ಎಸ್‌.ಕೆ.ಗಾರ್ಡನ್‌, ಕೆ.ಜೆ. ಹಳ್ಳಿ ಉಪವಿಭಾಗದ ಕಾವಲ್‌ ಭೈರಸಂದ್ರ, ಕುಶಾಲನಗರ, ಮುನೇಶ್ವರನಗರ, ಸಗಾಯ್‌ ಪುರಂ ವಾಡ್‌ಗಳಲ್ಲಿ ವಿಸ್ತರಿಸಲಾಗಿದೆ.

ಇದನ್ನೂ ಓದಿ:- ಅದೃಷ್ಟಕ್ಕಿಂತ ಪರಿಶ್ರಮ ನಂಬಿ: ಪುತ್ರರಿಗೆ ರವಿಚಂದ್ರನ್‌ ಕಿವಿಮಾತು

ಸರ್ವಜ್ಞನಗರ ಕ್ಷೇತ್ರ ವ್ಯಾಪ್ತಿಯ ಮಾರುತಿ ಸೇವಾನಗರದ ಬಾಣಸವಾಡಿ, ಕಮ್ಮನಹಳ್ಳಿ, ಲಿಂಗರಾಜಪುರಂ, ಮಾರುತಿ ಸೇವಾನಗರ, ಎಚ್‌.ಬಿ.ಆರ್‌. ಲೇಔಟ್‌ ಉಪವಿಭಾಗದ ಕಾಚರಕನಹಳ್ಳಿ, ಕಾಡುಗೊಂಡನಹಳ್ಳಿ, ನಾಗವಾರ ವಾರ್ಡ್‌ಗಳಿಗೂ ವಿಸ್ತರಣೆ ಮಾಡಲಾಗಿದೆ.

ಈ ಹಿಂದೆ ಪಾಲಿಕೆ ಮೊದಲ ಹಂತದಲ್ಲಿ ಪ್ರಯೋಗಿಕವಾಗಿ ಇ-ತಂತ್ರಾಂಶವನ್ನು ಶಾಂತಿನಗರ ಕ್ಷೇತ್ರದ ದೊಮ್ಮಲೂರು ಉಪ ವಿಭಾಗದ ಜೋಗುಪಾಳ್ಯ, ದೊಮ್ಮ ಲೂರು,ಗರಮ್‌, ವನ್ನಾರ ಪೇಟೆಯಲ್ಲಿ ಹಾಗೂ ಸಿ.ವಿ.ರಾಮನ್‌ ನಗರ ಕ್ಷೇತ್ರದ ಬೆನ್ನಿಗಾನಹಳ್ಳಿ, ಸಿ.ವಿ.ರಾಮನ್‌ ನಗರ, ಹೊಸ ತಿಪ್ಪಸಂದ್ರ, ಸರ್ವಜ್ಞನಗರ, ಹೊಯ್ಸಳ ನಗರ, ಜೀವನ್‌ ಭೀಮಾನಗರ, ಕೋನೇನ ಅಗ್ರಹಾರ ವಾರ್ಡ್‌ನಲ್ಲಿ ಜಾರಿಗೊಳಿಸಲಾಗಿತ್ತು. ತೆರಿಗೆದಾರರ ಹಿತ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಪಾಲಿಕೆಯ ಎಲ್ಲಾ ವಾರ್ಡ್‌ ಗಳಲ್ಲೂ ಇ-ಆಸ್ತಿ ತಂತ್ರಾಂಶ ಅಳವಡಿಕೆ ಮಾಡುವ ಉದ್ದೇಶ ಬಿಬಿಎಂಪಿಗೆ ಇದೆ.

ಇ-ಆಸ್ತಿ ತಂತ್ರಾಂಶದಿಂದ ಏನು ಪ್ರಯೋಜನ?

ತಂತ್ರಾಂಶದಿಂದ ವಿತರಿಸಲಾಗುವ ನಮೂನೆ ಎ ಅಥವಾ ಬಿ ಯಲ್ಲಿ ಸ್ವತ್ತಿನ ಮಾಲೀಕರು ಮತ್ತು ಸ್ವತ್ತಿಗೆ ಸಂಬಂಧಪಟ್ಟ 42 ಅಂಶಗಳನ್ನೊಳಗೊಂಡ ಮಾಹಿತಿ ನಮೂದಿಸಿದೆ. ತಂತ್ರಾಂಶದಿಂದ ವಿತರಿಸಲಾಗುವ ದಾಖಲೆಗಳನ್ನು ಯಾವ ಸಮಯದಲ್ಲೂ, ಎಲ್ಲಿಯಾದರೂ ಜಾಲತಾಣಗಳಲ್ಲಿ ವೀಕ್ಷಿಸಬಹುದು.

ತಂತ್ರಾಂಶದಿಂದ ವಿತರಿಸಲಾಗುವ ದಾಖಲೆಗಳಲ್ಲಿ ಡಿಜಿಟಲ್‌ ಸಹಿಯನ್ನು ಅಳವಡಿಸಲಾಗುವುದು. ತಂತ್ರಾಂಶವನ್ನು ಕಾವೇರಿ ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸ್ವತ್ತಿನ ವಹಿವಾಟಾದ ನಂತರ ವಿವಿರಗಳು ಸ್ವಯಂಚಾಲಿತವಾಗಿ ಇ-ಆಸ್ತಿ ತಂತ್ರಾಂಶಕ್ಕೆ ವರ್ಗಾಯಿಸಲಾಗುವುದು.

ಇ-ಆಸ್ತಿ ತಂತ್ರಾಂಶವನ್ನು ಆಸ್ತಿ ತೆರಿಗೆ ತಂತ್ರಾಂಶದೊಂದಿಗೂ ಸಂಯೋಜಿಸಲಾಗಿದ್ದು ಇ-ಆಸ್ತಿ ತಂತ್ರಾಂಶ ಮತ್ತು ಆಸ್ತಿ ತೆರಿಗೆ ತಂತ್ರಾಂಶದ ಸ್ವತ್ತಿನ ಮಾಲೀಕರ ಮತ್ತು ಸ್ವತ್ತಿನ ಆಸ್ತಿ ತೆರಿಗೆ ವಿವರಗಳು ವಿನಿಮಯವಾಗುತ್ತದೆ. ಇ-ಆಸ್ತಿ ತಂತ್ರಾಂಶದಿಂದ ನೀಡಲಾಗುವ ಸೇವೆಗೆ ಸಂಬಂಧಿಸಿದ ಶುಲ್ಕಗಳನ್ನು ಆನ್‌ಲೈನ್‌ ಮೂಲಕ ಅಥವಾ ಚಲನ್‌ ಪಡೆದು ಆಯ್ದ ಬ್ಯಾಂಕ್‌ ಶಾಖೆಗಳಲ್ಲಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.