ರಾತ್ರಿ ಬೆಳೆ ತಿಂದು ಜಮೀನಿನಲ್ಲೇ ಬೀಡು ಬಿಟ್ಟ ಕಾಡಾನೆಗಳು


Team Udayavani, Nov 19, 2021, 2:42 PM IST

ಕಾಡಾನೆ ಹಳ್ಳಿಗೆ

ಹುಣಸೂರು: ನಾಗರಹೊಳೆ ಉದ್ಯಾನದಿಂದ ಮೇವನ್ನರಸಿ ಹೊರಬಂದಿದ್ದ 6 ಆನೆಗಳ ಹಿಂಡು ಗುರುಪುರ ಸುತ್ತಮುತ್ತಲ ಗ್ರಾಮದಲ್ಲಿ ಸಾಕಷ್ಟು ಬೆಳೆ ತಿಂದು-ತುಳಿದು ನಾಶಪಡಿಸಿ, ಜನರ ಕಾಟದಿಂದ ಹೈರಾಣಾಗಿ ಕೊನೆಗೂ ಕುರುಚಲ ಕಾಡಿನಲ್ಲಿ ಆಶ್ರಯ ಪಡೆದಿದೆ.

ನಾಗರಹೊಳೆ ಉದ್ಯಾನದಿಂದ ನಾಡಿಗೆ ಬಂದಿದ್ದ ಆರು ಕಾಡಾನೆಗಳ ಹಿಂಡು ಬುಧವಾರ ರಾತ್ರಿ ಗುರುಪುರ ಟಿಬೇಟ್‌ ಕ್ಯಾಂಪ್‌ ಬಳಿಯ ಕುಂಟೇರಿ ಪಾರೆಕಡೆಯಿಂದ ದಾಟಿ ಬಂದು ಸಾಕಷ್ಟು ಬೆಳೆ ನಾಶ ಮಾಡಿ, ಗುರುವಾರ ಬೆಳಗ್ಗೆಯಾದರೂ ಹೊಸೂರು, ಕಾಳೇನಹಳ್ಳಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡಿವೆ. ಗ್ರಾಮದಲ್ಲಿ ಈ ಸುದ್ದಿ ಹಬ್ಬಿ ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿ ಕಾಡಾನೆಗಳನ್ನು ಕಾಡಿಗಟ್ಟಲು ಹರಸಾಹಸ ಪಟ್ಟರು.

ದನಗಳಂತೆ ಅಟ್ಟಾಡಿದರು: ಆನೆಗಳ ಹಿಂಡು ಜಮೀನಿನಲ್ಲಿ ಬೀಡು ಬಿಟ್ಟಿದ್ದ ವೇಳೆ ಹುಚ್ಚೆದ್ದ ಯುವ ಪಡೆ ಆನೆಗಳಿಗೆ ಕಲ್ಲು ಹೊಡೆಯುತ್ತಾ, ಕೇಕೆ ಹಾಕುತ್ತಾ ಅತ್ತಿಂದಿತ್ತ ಅಟ್ಟಾಡಿಸಿದರು. ಗಾಬರಿಗೊಂಡ ಆನೆಗಳು ಕೊನೆಗೆ ಬೆಳಗ್ಗೆ 11ರ ವೇಳೆಗೆ ಗುರುಪುರ ಬಳಿಯ ಹುಣಸೇಕಟ್ಟೆ ಹಳ್ಳದ ಪ್ಲಾಂಟೇಷನ್‌ನಲ್ಲಿ ಸೇರಿಕೊಂಡು ಆಶ್ರಯ ಪಡೆದವು.

ಪೊಲೀಸ್‌-ಅರಣ್ಯ ಸಿಬ್ಬಂದಿ ಹರಸಾಹಸ; ಆನೆಗಳನ್ನು ನೋಡಲು- ಅಟ್ಟಾಡಿಸಲು ಜಮಾಯಿಸಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು-ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ಜನರನ್ನು ನಿಯಂತ್ರಿಸಿ, ಆನೆಗಳನ್ನು ಕಾಡಿಗಟ್ಟಲು ಸಿಬ್ಬಂದಿ ಶ್ರಮಪಟ್ಟರಾದರೂ ಜನರ ಕೂಗಾಟದಿಂದ ಬೆದರಿ ಹುಣಸೇಕಟ್ಟೆ ಹಳ್ಳ ಸೇರಿಕೊಂಡು ಜನರ ಕಾಟದಿಂದ ತಪ್ಪಿಸಿಕೊಂಡವು.

ಗಾಳಿಯಲ್ಲಿ ಗುಂಡು-ಪಟಾಕಿ ಸಿಡಿಸಿದರು: ಜಮೀನಿನಲ್ಲಿ ಬೀಡು ಬಿಟ್ಟಿದ್ದ ಆನೆಗಳ ಹಿಂಡನ್ನು ಕಾಡಿಗಟ್ಟಲು ಸಾಕಷ್ಟು ಪಟಾಕಿ ಸಿಡಿಸಿದರು. ಗಾಳಿಯಲ್ಲಿ ಗುಂಡು ಹಾರಿಸಲಾಯಿತಾದರೂ ಆನೆಗಳು ಕಾಡಿಗೆ ಮರಳಲಿಲ್ಲ. ಕೊನೆಗೆ ರಾತ್ರಿವೇಳೆ ಕಾಡಿಗಟ್ಟಲು ತೀರ್ಮಾನಿಸಿ, ಹುಣಸೂರು-ಎಚ್‌.ಡಿ.ಕೋಟೆ ಮುಖ್ಯ ರಸ್ತೆಯಲ್ಲಿ ಬೀಡುಬಿಟ್ಟು ಆನೆಗಳು ಹಳ್ಳದಿಂದ ಹೊರಬಾರದಂತೆ ಕಾವಲು ಕಾಯ್ದರು.

ಸಾಕಷ್ಟು ಬೆಳೆ ನಷ್ಟ: ರಾತ್ರಿ ಇಡೀ ಬೆಳೆ ತಿಂದು ಹಾಕಿದ್ದ ಆನೆಗಳ ಹಿಂಡು, ಕಾಳೇನಹಳ್ಳಿ, ಹೊಸೂರು ಮತ್ತಿತರ ಗ್ರಾಮಗಳಲ್ಲಿ ಜಮೀನಿಲ್ಲಿ ಬೆಳೆದಿದ್ದ ರಾಗಿ, ಜೋಳ, ಹುರಳಿ, ಅವರೆ ಮತ್ತಿತರ ಬೆಳೆಗಳನ್ನು ತಿಂದು-ತುಳಿದು ನಾಶ ಪಡಿಸಿವೆ.

ರೈಲ್ವೆ ಹಳಿ ಬೇಲಿ ಇಲ್ಲ: ನಾಗರಹೊಳೆ ಉದ್ಯಾ ನದ ವೀರನಹೊಸಹಳ್ಳಿ ವಲಯಕ್ಕೆ ಸೊಳ್ಳೆಪುರ ಅರಣ್ಯ ಪ್ರದೇಶ ಸೇರಿದ್ದು, ಈ ಭಾಗದಲ್ಲಿ ರೈಲ್ವೆ ಹಳಿ ತಡೆಗೋಡೆ ನಿರ್ಮಿಸದೆ ಅರಣ್ಯದಿಂದ ಆನೆಗಳು ಹೊರಬರುತ್ತಿರುವುದೇ ಕಾರಣವಾ ಗಿದ್ದು, ಮತ್ತೂಂದೆಡೆ ಕೆಲ ಚಾಲಕಿ ಆನೆಗಳು ರೈಲ್ವೆ ಹಳಿ ತಡೆಗೋಡೆಯನ್ನೇ ದಾಟಿ ಹೊರಬರುತ್ತಿ ರುವುದು ರೈತರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.