ಜಲಪಾತದಂತೆ ಮೈದುಂಬಿ ಹರಿದ ಕುದೂರಿನ ಕೆರೆ


Team Udayavani, Nov 19, 2021, 6:20 PM IST

lake water falls as a waterfalls

ಕುದೂರು: ಕಳೆದ ಕೆಲ ದಿನಗಳಿಂದ ಕುದೂರು ಸುತ್ತಮುತ್ತ ಭರ್ಜರಿ ಮಳೆಗೆ ಕುದೂರು ಹೋಬಳಿಯ ಕೆರೆಗಳು ಭರ್ತಿಯಾಗಿದ್ದು ಕೋಡಿ ಹರಿದಿದೆ. ಜಲಪಾತಗಳಂತೆ ಹರಿಯುತ್ತಿರುವ ನೀರು ಹರಿಯುವುದನ್ನು ನೋಡಲು ಕುದೂರು ಸುತ್ತಮುತ್ತಲಿನ ಜನರು ಸಾಗರೋಪಾದಿಯಲ್ಲಿ ಕೋಡಿ ಬಿದ್ದ ಕೆರೆ ಬಳಿಗೆ ಕುಟುಂಬದ ಸದಸ್ಯರ ಜೊತೆ ಹಾಗೂ ಸ್ನೇಹಿತರೊಡನೆ ತೆರಳುತ್ತಿದ್ದು, ಕೆಲವು ಕೆರೆಗಳೀಗ ಮಳೆಗಾಲದ ಪ್ರವಾಸಿ ತಾಣಗಳಾಗಿ ಮಾರ್ಪಟ್ಟಿವೆ.

ಮಲ್ಲಪ್ಪನಹಳ್ಳಿ ಕೆರೆ ಬಳಿ ಜಮಾವಣೆ: ಕುದೂರು ಹೋಬಳಿಯ ಶ್ರೀಗಿರಿಪುರ ಗ್ರಾಪಂ ವ್ಯಾಪ್ತಿಯ ಮಲ್ಲಪ್ಪನಹಳ್ಳಿ ಕೆರೆ ಕೋಡಿ ಹರಿದಿದ್ದು ಇದನ್ನು ವೀಕ್ಷಿಸಲು ಕುದೂರು ಹಾಗೂ ಸುತ್ತಮುತ್ತಲಿನ ಜನರು ಪ್ರವಾಸಿ ತಾಣವನ್ನು ವೀಕ್ಷಿಸಲು ಬರುವ ಪ್ರವಾಸಿಗರಂತೆ ನಿತ್ಯ ಜನರು ತಮ್ಮ ಕುಟುಂಬದೊಂದಿಗೆ ಹಾಗೂ ಸ್ನೇಹಿತರೊಡೆನೇ ತೆರಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು, ವಿಡಿಯೋ ಮಾಡುವುದು ಹಾಗೂ ನೀರಿನಲ್ಲಿ ಒಂದೆರಡು ತಾಸು ಕಾಲ ಕಳೆದು ತಮ್ಮ ಮೊಬೈಲ್‌ಗ‌ಳಲ್ಲಿ ಪೋಟೋ ಸೆರೆ ಹಿಡಿದು ತಮ್ಮ ಜಾಲತಾಣಗಳ ಖಾತೆಗಳಲ್ಲಿ ಶೇರ್‌ ಮಾಡುವ ಮೂಲಕ ತಮ್ಮ ಸಂತಸದ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಬಹುತೇಕ ಕೆರೆಗಳು ಭರ್ತಿ: ಕಳೆದ 15 ದಿನಗಳಿಂದ ಬೀಳುತ್ತಿರುವ ಮಳೆಗೆ ಕೆಂಚನಪುರ ಕೆರೆ ಕೋಡಿಯಾಗಿ ನೀರು ತೊರೆಗಳ ಮೂಲಕ ತಗ್ಗು ಪ್ರದೇಶಗಳಲ್ಲಿರುವ ರೈತರ ಜಮೀನು ಹಾಗೂ ತೋಟಗಳಿಗೆ ನುಗ್ಗುತ್ತಿದೆ. ಉಳಿದಂತೆ ವೀರಸಾಗರ ಕೆರೆ, ಶ್ರೀಗಿರಿಪುರ ಕೆರೆ, ಮಲ್ಲಪ್ಪನ ಹಳ್ಳಿಕೆರೆಗಳು ಕೋಡಿ ಹರಿದಿದ್ದು ಜನರ ಕಣ್ಮನ ಸೆಳೆಯುತ್ತಿದೆ.

ತಡೆಗೋಡೆ ಕುಸಿತ ಭೀತಿ: ವರ್ಷಪೂರ್ತಿ ಭತ್ತದ ಕೆರೆಯೆಂದೇ ಹೆಸರು ವಾಸಿಯಾಗಿರುವ ಕೆಂಚನ ಪುರ ಕೆರೆ ತುಂಬಿ ಕೋಡಿಯ ಮೂಲಕ ನಿರು ನಿತ್ಯ ರಭಸವಾಗಿ ಹರಿಯುತ್ತಿದ್ದು ಕೆರೆಕೋಡಿಯ ಬಳಿ ಕಟ್ಟಿರುವ ತಡೆಗೋಡೆ ಕುಸಿಯುತ್ತಿದ್ದು ಆ ಭಾಗದ ಜನರಲ್ಲಿ ಅತಂಕ ಶುರುವಾಗಿದೆ. ಇದನ್ನು ತಿಳಿದ ತಾಲೂಕು ಆಡಳಿತ ಮರಳಿನ ಮೂಟೆಗಳನ್ನು ಕೋಡಿಗೆ ಬಿಡುವ ಮೂಲಕ ತಾತ್ಕಾಲಿಕವಾಗಿ ಮುಂದೆ ಆಗಬಹುದಾದ ಅಪಾಯವನ್ನು ತಡೆಯುವ ಕಾರ್ಯ ಮಾಡಿದೆ.

 “ಮಲ್ಲಪ್ಪನಹಳ್ಳಿ ಹಾಗೂ ಶ್ರೀಗಿರಿಪುರ ಕೆರೆ ಕೋಡಿಯಾಗಿದ್ದು ಜಲಪಾತದಂತೆ ಹರಿಯುವ ನೀರನ್ನು ವೀಕ್ಷಿಸಲು ಕುಟುಂಬದ ಸದಸ್ಯರೊಡನೆ ಹಾಗೂ ಸ್ನೇಹಿತರೊಡನೆ ಜೊತೆಗೂಡಿ ಎರಡು ಮೂರು ತಾಸು ಜಲಕ್ರೀಡೆಯಲ್ಲಿ ತೊಡಗಿ ಪ್ರಕೃತಿ ಸೊಬಗನ್ನು ಕಣ್ತುಂಬಿಸಿಕೊಂಡಿದ್ದು ಖುಷಿಯಾಗಿದೆ.” – ಅಭಿಷೇಕ್‌, ಕುದೂರು

 “ಬೇಸಿಗೆಯಲ್ಲಿ ನೀರಿಲ್ಲದೆ ಬಣಗುಡುವ ಕೆರೆಗಳು ಮಳೆ ನೀರಿನಿಂದ ತುಂಬಿ ಕೋಡಿಗಳ ಮೂಲಕ ಹರಿವ ಸುಂದರ ಕ್ಷಣಗಳನ್ನು ವೀಕ್ಷಿಸುವುದು ಹಾಗೂ ಸುಂದರ ಕ್ಷಣಗಳನ್ನು ಕ್ಯಾಮರಗಳ ಮೂಲಕ ಸೆರೆ ಹಿಡಿಯುವುದು ಒಂದು ರೋಮಾಂಚನಕಾರಿ ವಿಷಯ.” – ರಮೇಶ್‌, ಹವ್ಯಾಸಿ ಛಾಯಗ್ರಾಹಕ

ಟಾಪ್ ನ್ಯೂಸ್

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಎನ್‌ಇಪಿ ರದ್ದು, ರಾಜಕೀಯ ಪ್ರೇರಿತ: ಬೊಮ್ಮಾಯಿ

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.