ರೈತ ಕಾಯ್ದೆಗಳ ಹಿಂದೆಗೆತ ಚುನಾವಣ ತಂತ್ರವಾಗದಿರಲಿ


Team Udayavani, Nov 20, 2021, 6:40 AM IST

ರೈತ ಕಾಯ್ದೆಗಳ ಹಿಂದೆಗೆತ ಚುನಾವಣ ತಂತ್ರವಾಗದಿರಲಿ

ಅಂತೂ ರೈತರ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಶುಕ್ರವಾರ ಬೆಳಗ್ಗೆ ಗುರುನಾನಕ್‌ ಜಯಂತಿ ಭಾಷಣದ ವೇಳೆ ಈ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲ, ಒಂದು ವರ್ಗದ ರೈತರ ಮನವೊಲಿಕೆ ಮಾಡುವಲ್ಲಿ ನಾವು ವಿಫ‌ಲರಾಗಿದ್ದೇವೆ ಎಂದಿರುವ ಅವರು ಈ ಕುರಿತಂತೆ ರೈತರ ಕ್ಷಮೆಯನ್ನೂ ಕೇಳಿದ್ದಾರೆ.

ಸರಿಸುಮಾರು ಕಳೆದ ಒಂದು ವರ್ಷದಿಂದಲೂ ಈ ಮೂರು ಕಾಯ್ದೆಗಳನ್ನು ವಿರೋಧಿಸಿ ಉತ್ತರ ಭಾರತದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಯೇ ನಡೆದಿತ್ತು. ಆರಂಭದಲ್ಲಿ ಪಂಜಾಬ್‌ ಮತ್ತು ಹರಿಯಾಣದ ರೈತರು ಈ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ಆರಂಭಿಸಿದ್ದರೆ  ಅನಂತರದಲ್ಲಿ ಇದು ಉತ್ತರ ಪ್ರದೇಶಕ್ಕೂ ವ್ಯಾಪಿಸಿತ್ತು. ಅಲ್ಲದೆ

ಪ್ರತಿಭಟನ ಸ್ಥಳದಲ್ಲಿಯೇ ನೂರಾರು ರೈತರು ಪ್ರಾಣವನ್ನೂ ಕಳೆದುಕೊಳ್ಳುವಂತಾಯಿತು.

ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ಜಾರಿಗೆ ಬಂದ ಈ ಈ ಕೃಷಿ ಕಾಯ್ದೆಗಳ ವಿರುದ್ಧ ನ.25ರಂದು ದಿಲ್ಲಿ ಚಲೋ ಹೆಸರಿನಲ್ಲಿ ಪಂಜಾಬ್‌ ಮತ್ತು ಹರಿಯಾಣದ ರೈತರು ಪ್ರತಿಭಟನೆ ಆರಂಭಿಸಿದ್ದರು. ಅಲ್ಲಿಂದ ಜನವರಿ ವರೆಗೆ ಸುಮಾರು ಏಳು ಸುತ್ತು ಕೇಂದ್ರ ಮತ್ತು ರೈತರ ನಡುವೆ ಮಾತುಕತೆಯೂ ನಡೆದಿತ್ತು. ಇದರ ಮಧ್ಯೆಯೇ ಸುಪ್ರೀಂ ಕೋರ್ಟ್‌ನಲ್ಲೂ ಕಾಯ್ದೆಗಳ ವಿರುದ್ಧ ಅರ್ಜಿ ಹಾಕಲಾಗಿದ್ದು, ಈ ಮೂರನ್ನು ಜಾರಿ ಮಾಡದಂತೆ ಕೋರ್ಟ್‌ ಆದೇಶ ನೀಡಿ, ಸಮಿತಿಯೊಂದನ್ನೂ ರಚಿಸಿತ್ತು.

ಇದನ್ನೂ ಓದಿ:ಸಮಾನ ನಾಗರಿಕ ಸಂಹಿತೆ ಜಾರಿ ಮಾಡಿ: ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ರೈತರ ಪ್ರತಿಭಟನೆ ಆರಂಭವಾಗಿ ಈಗಾಗಲೇ ವರ್ಷ ಕಳೆಯಿತು. ಇಂಥ ಸಮಯದಲ್ಲೇ ಕೇಂದ್ರ ಸರಕಾರ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆದುಕೊಳ್ಳುವ ತೀರ್ಮಾನ ಮಾಡಿದೆ. ತಜ್ಞರು ಹೇಳುವಂತೆ ಈ ಕಾಯ್ದೆಗಳ ವಿಚಾರದಲ್ಲಿ ಕೇಂದ್ರ ಸರಕಾರ ಕೆಲವೊಂದು ತಪ್ಪು ಹೆಜ್ಜೆ ಇಟ್ಟಿತು. ಅಂದರೆ ಈ ಕಾಯ್ದೆಗಳ ಫ‌ಲಾನುಭವಿಗಳು, ಅಂದರೆ ರೈತ ಸಂಘಟನೆಗಳ ಜತೆಗೆ ಮೊದಲು ಮಾತನಾಡಿ ಬಳಿಕ ಇವುಗಳ ಅಂಗೀಕಾರ ಮಾಡಬಹುದಿತ್ತು. ಹಾಗೆಯೇ ಸಂಸತ್‌ನಲ್ಲೂ ಸ್ಥಾಯೀ ಸಮಿತಿಗೆ ಮಸೂದೆಗಳನ್ನು ಕಳುಹಿಸಿ ಒಂದಷ್ಟು ದಿನ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಬಹುದಿತ್ತು.

ಒಂದು ಲೆಕ್ಕಾಚಾರದಲ್ಲಿ ಈ ಮೂರು ಕಾಯ್ದೆಗಳು ರೈತರ ಪರವಾಗಿದ್ದರೂ ಅವಸರ ರೀತಿಯಲ್ಲಿ ಜಾರಿ ಮಾಡಿದ್ದರಿಂದ ರೈತರು ಅನಗತ್ಯ ಗೊಂದಲಕ್ಕೆ ಒಳಗಾದರು. ಹಾಗೆಯೇ ಈ ಕಾಯ್ದೆಗಳಿಂದಾಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸುವಲ್ಲಿ ಕೇಂದ್ರ ಸರಕಾರ ವಿಫ‌ಲವಾಯಿತು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.

ಕಾಯ್ದೆಗಳನ್ನು ವಾಪಸ್‌ ಪಡೆದ ಮೇಲೆ ವಿಪಕ್ಷಗಳ ನಾಯಕರು, ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ  ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅದರಲ್ಲಿಯೂ ಉತ್ತರ ಪ್ರದೇಶ ಮತ್ತು ಪಂಜಾಬ್‌ ಚುನಾವಣೆಯ ಮೇಲೆ ಗಮನ ಇರಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ, ಕೇಂದ್ರ ಸರಕಾರ ಈಗ ತೆಗೆದುಕೊಂಡಿರುವ ನಿರ್ಧಾರ ಚುನಾವಣ ತಂತ್ರವಾಗಬಾರದು. ಇದಕ್ಕೆ ಬದಲಾಗಿ ಮುಂದಿನ ದಿನಗಳಲ್ಲಿ ಭಾಗೀದಾರರು ಮತ್ತು ರಾಜ್ಯ ಸರಕಾರಗಳ ಜತೆ ಮಾತುಕತೆ ನಡೆಸಿ ಕೃಷಿ ಸುಧಾರಣೆಗೆ ಮನಸ್ಸು ಮಾಡಬೇಕು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.