ಸ್ಪಷ್ಟ ಬಹುಮತ ಇದ್ದರಷ್ಟೇ ಮಸೂದೆ ಕಾಯ್ದೆಯಾಗಲಿದೆ: ಶೋಭಾ ಕರಂದ್ಲಾಜೆ

ಮಿನಿ ಸಮರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ

Team Udayavani, Nov 20, 2021, 5:23 AM IST

ಸ್ಪಷ್ಟ ಬಹುಮತ ಇದ್ದರಷ್ಟೇ ಮಸೂದೆ ಕಾಯ್ದೆಯಾಗಲಿದೆ: ಶೋಭಾ ಕರಂದ್ಲಾಜೆ

ಉಡುಪಿ: ವಿಧಾನ ಪರಿಷತ್‌ನಲ್ಲಿ ಬಹುಮತ ಇದ್ದಾಗ ಮಾತ್ರ ವಿಧಾನಸಭೆಯಲ್ಲಿ ಅಂಗೀಕೃತಗೊಂಡ ಮಸೂದೆಗಳನ್ನು ಸುಲಭವಾಗಿ ಕಾಯ್ದೆ ರೂಪಕ್ಕೆ ತರಬಹುದು. ಈ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕೇಂದ್ರ ಕೃಷಿ (ರಾಜ್ಯಖಾತೆ) ಸಚಿವೆ ಶೋಭಾ ಕರಂದ್ಲಾಜೆ ಅವರು ಸ್ಥಳೀಯ ಸಂಸ್ಥೆಯ ಬಿಜೆಪಿ ಬೆಂಬಲಿತ ಮತದಾರರಿಗೆ ಕರೆ ನೀಡಿದರು.

ಪುರಭವನದಲ್ಲಿ ಶುಕ್ರವಾರ ನಡೆದ ಜನಸ್ವರಾಜ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಚುನಾವಣೆ ರಾಜ್ಯದ ಮಿನಿ ಸಮರ. ಸರಕಾರದ ಮಸೂದೆಗಳ ಅಂಗೀಕಾರಕ್ಕೆ ಪರಿಷತ್‌ನಲ್ಲೂ ಬಹುಮತ ಬೇಕು. ಬಹುಮತ ಇಲ್ಲದ್ದರಿಂದ ಗೋಹತ್ಯೆ ಮಸೂದೆ ಅಂಗೀಕಾರ ಕಷ್ಟವಾಗಿತ್ತು. ಆದ್ದರಿಂದ ಈ ಚುನಾವಣೆ ಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಈಗ ವಿಶ್ವದ ನಾಯಕರಾಗಿದ್ದಾರೆ. ನುಡಿದಂತೆ ನಡೆಯುತ್ತಿದ್ದಾರೆ. 2023ರಲ್ಲಿ ಕರ್ನಾಟಕ ಹಾಗೂ 2024ರಲ್ಲಿ ಕೇಂದ್ರದಲ್ಲಿ ಪುನಃ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಎಸ್‌.ಟಿ. ಸೋಮಶೇಖರ್‌ ಮಾತನಾಡಿ, ವಿಧಾನ ಪರಿಷತ್‌ ಕಲಾಪದ ಸಂದರ್ಭ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಹೊಸ ಸಚಿವರನ್ನು ಅನೇಕ ಬಾರಿ ರಕ್ಷಣೆ ಮಾಡಿದ್ದರು. ಮಾನಸಿಕ ಒತ್ತಡದಲ್ಲಿದ್ದ ಸಚಿವರು ಕಲಾಪದಲ್ಲಿ ಚೆನ್ನಾಗಿ ನಿರ್ವಹಣೆ ಮಾಡುವಂತೆ ಹುರಿದುಂಬಿಸಿದ್ದರು. ಅವರಿಲ್ಲದ ಪರಿಷತ್‌ ಕಲಾಪ ಉಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಪ್ರತ್ಯೇಕ ತನಿಖೆ
ಎಲ್ಲ ರೀತಿಯ ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ಹಂಚಿಕೆ ಕುರಿತ ತನಿಖೆಯನ್ನು ವಿಧಾನ ಪರಿಷತ್‌ ಚುನಾವಣೆ ಮುಗಿದ ಕೂಡಲೇ ಆರಂಭಿಸಲಿದ್ದೇವೆ. ಇದಕ್ಕಾಗಿ ಉಭಯ ಜಿಲ್ಲೆಗಳಿಗೂ ಪ್ರತ್ಯೇಕ ತಂಡ ರಚನೆ ಮಾಡಲಾಗುತ್ತದೆ. ಪ್ರಸ್ತುತ ಸಹಕಾರ ಸಂಘಗಳಲ್ಲಿ ಕೇಳಿದ ಎಲ್ಲರಿಗೂ ಸಾಲ ಸಿಗುತ್ತಿಲ್ಲ. ಮುಂದೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಸೋಮಶೇಖರ್‌ ಹೇಳಿದರು.

ಹಾಲು ಉತ್ಪಾದಕರ ಒಕ್ಕೂಟವನ್ನು ಪ್ರತ್ಯೇಕಿಸುವ ಚರ್ಚೆಯೂ ಆರಂಭವಾಗಿದೆ. ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರ ಮೊದಲಾದೆಡೆಗಳಲ್ಲಿ ಪ್ರತ್ಯೇಕ ಹಾಲು ಉತ್ಪಾದಕರ ಒಕ್ಕೂಟ ಮಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ವನಿತಾ ಹಾಕಿ; ರಾಣಿಗೆ ವಿಶ್ರಾಂತಿ ಸವಿತಾ ಪುನಿಯಾ ಭಾರತದ ನಾಯಕಿ

ಸಚಿವ ಎಸ್‌. ಅಂಗಾರ, ಬಿಜೆಪಿ ಸಂಭಾವ್ಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಗೌಡ, ರಾಜ್ಯ ಕಾರ್ಯದರ್ಶಿ ವಿನಯ್‌ ಬಿದರೆ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಶಾಸಕರಾದ ಸುಕುಮಾರ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಲಾಲಾಜಿ ಆರ್‌. ಮೆಂಡನ್‌, ಕೆ. ರಘುಪತಿ ಭಟ್‌, ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ. ಶಂಕರಪ್ಪ, ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ ಉಪಸ್ಥಿತರಿದ್ದರು.

ರಾಷ್ಟ್ರಪತಿ ಆಯ್ಕೆಯಲ್ಲಿ ಸಂಸದರು, ವಿಧಾನ ಪರಿಷತ್‌ ಸದಸ್ಯರ ಆಯ್ಕೆಯಲ್ಲಿ ಶಾಸಕರು ತಪ್ಪು ಮಾಡುತ್ತಾರೆ. (ಅಡ್ಡ ಮತದಾನ). ಆದರೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ತಪ್ಪು ಮಾಡಬಾರದು.
– ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿಗೆ ಮಾನವ ದಿನಗಳ ಸೃಜನೆ ಹೆಚ್ಚಾಗಿದೆ. ಭ್ರಷ್ಟಾ ಚಾರಕ್ಕೆ ಕಡಿವಾಣ ಹಾಕಲಾಗಿದೆ. ಕೇಂದ್ರ ಸರಕಾರದಿಂದ ಬರುವ ಅನುದಾನವೂ ಹೆಚ್ಚಾಗಿದೆ. 2025ಕ್ಕೆ ದೇಶದ ಪ್ರತಿಯೊಬ್ಬರಿಗೂ ಸೂರು ಒದಗಿಸಲು ಸರಕಾರ ಬದ್ಧವಾಗಿದೆ. ಹೊಸ ಶಿಕ್ಷಣ ನೀತಿ ಶೈಕ್ಷಣಿಕ ಹಾಗೂ ಔದ್ಯೋಗಿಕ ರಂಗದಲ್ಲಿ ಹಲವು ಬದಲಾವಣೆ ತರಲಿದೆ.
ಡಿ.ವಿ. ಎಸ್‌. ಮಾಜಿ ಕೇಂದ್ರ ಸಚಿವ

ಚುನಾವಣೆ ಸಂದರ್ಭ ವಿರೋಧಿಗಳು ಆಮಿಷ, ಅಪಪ್ರಚಾರದ ಜತೆಗೆ ಜಾತಿ, ಹಣದ ವಿಚಾರವಾಗಿಯೂ ಆಮಿಷ ಒಡ್ಡುತ್ತಾರೆ. ಗ್ರಾ.ಪಂ. ಸಹಿತವಾಗಿ ಸ್ಥಳೀಯ ಸಂಸ್ಥೆಗಳು ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಹಾಗೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಕಾರ್ಯಕರ್ತರು ಹಲವು ರೀತಿಯಲ್ಲಿ ಶ್ರಮಿಸಿದ್ದಾರೆ. ಅದರ ಫ‌ಲವಾಗಿ ನೀವುಗಳು ಸದಸ್ಯರಾಗಿದ್ದೀರಿ. ಈಗ ನೀವು ಬಿಜೆಪಿ ಅಭ್ಯರ್ಥಿಯನ್ನು ಸ್ಪಷ್ಟ ಬಹುಮತದಿಂದ ಗೆಲ್ಲಿಸಿ, ಕಾರ್ಯಕರ್ತರ ಶ್ರಮಕ್ಕೆ ಇನ್ನಷ್ಟು ಶಕ್ತಿ ತುಂಬಬೇಕು.
– ವಿ. ಸುನಿಲ್‌ ಕುಮಾರ್‌, ಸಚಿವ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.