ಕಸಾಪ: ಮಹೇಶ್ ಜೋಶಿ ಪರ ರುದ್ರೇಶ್ವರ ಪ್ರಚಾರ
Team Udayavani, Nov 20, 2021, 3:53 PM IST
ರಾಮನಗರ: ಕಸಾಪ ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡಲು ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ನಾಡೋಜ ಡಾ.ಮಹೇಶ್ ಜೋಶಿ ಅವರಿಗೆ ಕಸಾಪ ಸದಸ್ಯರು ಮತ ನೀಡಬೇಕು ಎಂದು ಲೇಖಕ ಎಸ್. ರುದ್ರೇಶ್ವರ ತಿಳಿಸಿದರು.
ತಾಲೂಕಿನ ಬಿಡದಿಯಲ್ಲಿ ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ನಾಡೋಜ ಡಾ.ಮಹೇಶ್ ಜೋಶಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡಿ, 21ರಂದು ನಡೆಯುವ ಕಸಾಪ ಚುನಾವಣೆಯಲ್ಲಿ ಮಹೇಶ್ ಜೋಶಿ ಅವರನ್ನು ಬೆಂಬಲಿಸಬೇಕು. ಈ ನಾಡಿನ ಸಾಹಿತ್ಯ- ಸಂಸ್ಕೃತಿ, ನಾಡು-ನುಡಿ, ನೆಲ-ಜಲದ ಪ್ರಾಮಾ ಣಿಕ ಸೇವೆಗಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಗಡಿನಾಡಿನ ಸಮಸ್ಯೆ ಬಗ್ಗೆ ಅರಿವಿದೆ
ಗಡಿನಾಡಿನ ಸಮಸ್ಯೆ ಗಳ ಬಗ್ಗೆ ಅದರಲ್ಲೂ ಕನ್ನಡ ಶಾಲೆಗಳ ಸ್ಥಿತಿ-ಗತಿ ಹಾಗೆಯೇ ಕನ್ನಡಿಗರಿಗೆ ಇರುವ ಉದ್ಯೋಗದ ಸಮಸ್ಯೆಗಳ ಬಗ್ಗೆ ಮಹೇಶ್ ಜೋಶಿ ಅವರಿಗೆ ಆಳವಾದ ಅರಿವಿದೆ. ಕನ್ನಡ ಅನ್ನದ ಭಾಷೆ ಆಗಬೇಕು ಎಂಬ ಮಹಾದಾಸೆಯನ್ನು ಅನು ಷ್ಠಾನಗೊಳಿಸಲು ಅವರು ಶ್ರಮಿಸಲಿದ್ದಾರೆ ಹಾಗಾಗಿ ಸದಸ್ಯರು ಮತ ನೀಡುವಂತೆ ಮನವಿ ಮಾಡಿದರು.
ತಂತ್ರಜ್ಞಾನ ಬಳಕೆ
ಕನ್ನಡ ಸಾಹಿತ್ಯ ಪರಿಷತ್ಗೆ ತಂತ್ರಜಾnನ ವನ್ನು ಬಳಸಿಕೊಳ್ಳುವ ಮೂಲಕ ಆಧುನಿಕ ಸ್ಪರ್ಶವನ್ನು ನೀಡಲಿದ್ದಾರೆ ಎಂದು ಹೇಳಿದರು.
ಕನ್ನಡದ ರಾಯಭಾರಿಯಾಗಿ ಕೆಲಸ
ಮೂರು ದಶಕ ಗಳಿಗೂ ಮೀರಿದ ವಿವಿಧ ಹುದ್ದೆಗಳ ಆಡಳಿತಾತ್ಮಕ ಅನು ಭವಗಳಿದ್ದರೂ, ಕನ್ನಡದ ರಾಯಭಾರಿಯಾಗಿ ಕೆಲಸ ಮಾಡಿ ಹೊಸ ದಿಕ್ಕನ್ನು ಸೃಷ್ಠಿಸುವ ಉದ್ದೇಶದಿಂದ ಸ್ಪರ್ಧಿಸಿದ್ದಾರೆ ಎಂದು ತಿಳಿಸಿದರು. ಸ್ಪಂದನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುತ್ತಣ್ಣ, ಅಖೀಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ಕಾರ್ಯ ದರ್ಶಿ ವಿಜಯೇಂದ್ರ, ಮಕ್ಕಳ ಘಟಕ ಪರಿಷತ್ ಜಿಲ್ಲಾ ಪ್ರಮುಖ್ ಮತ್ತು ಘಟಕ ಪ್ರಮುಖ್ ಎಂ.ಎಸ್. ಚನ್ನ ವೀರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು
ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ?
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.