ವ್ಯಾಪಕ ವಿರೋಧ: ಶ್ರೀತಾಳೆ ಮರದ ರಕ್ಷಣೆ
Team Udayavani, Nov 21, 2021, 12:21 PM IST
ವೇಣೂರು: ತೆರವುಗೊಳಿಸಲು ಉದ್ದೇಶಿಸಲಾಗಿದ್ದ ವೇಣೂರು ಸನಿಹದ ಕರಿಮಣೇಲುವಿನಲ್ಲಿದ್ದ ಬಹುಅಪರೂಪದ ಶ್ರೀತಾಳೆ ಮರಕ್ಕೆ ರವಿವಾರ ಧಾರ್ಮಿಕ ವಿಧಿವಿಧಾನ ನೆರವೇರಿಸಿ ಮರವನ್ನು ಸಂರಕ್ಷಿಸಲಾಗಿದೆ.
ಶ್ರೀತಾಳೆ ಮರ ಹೂ ಬಿಟ್ಟರೆ ಊರಿಗೆ ಅಥವಾ ಮನೆ ಯಜಮಾನನಿಗೆ ಅನಿಷ್ಠ ಎಂಬ ನಂಬಿಕೆಯಿಂದ ವಿಧಿವಿಧಾನಗಳೊಂದಿಗೆ ಕಡಿಯಲು ಮುಹೂರ್ತ ನಿಗಧಿಯಾಗಿತ್ತು. ಇದು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಉಡುಪಿ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರದ ನಿರ್ದೇಶಕ ಪ್ರೊ| ಎಸ್.ಎ. ಕೃಷ್ಣಯ್ಯ ಅವರು ಮೂಡಬಿದಿರೆ ಜೈನಮಠದ ಸ್ವಾಮೀಜಿಯವರನ್ನು ಭೇಟಿಯಾಗಿ ಜನರಲ್ಲಿ ಅರಿವು ಮೂಡಿಸುವ ಮೂಲಕ ಈ ಮರವನ್ನು ಸಂರಕ್ಷಿಸಬೇಕು ಎಂದಿದ್ದರು. ಕರಿಮಣೇಲು ಜಾಗದ ಮಾಲಿಕರ ಜತೆಯೂ ದೂರವಾಣಿಯಲ್ಲಿ ಮಾತನಾಡಿದ್ದ ಅವರು ಮರವನ್ನು ಕಡಿಯದಿರುವಂತೆ ವಿನಂತಿಸಿದ್ದರು. ಅಲ್ಲದೇ ಶನಿವಾರ ಉಡುಪಿಯಲ್ಲಿ ಪತ್ರಿಕಾಗೋಷ್ಠಿಯನ್ನೂ ಕರೆದು ಮರವನ್ನು ಸಂರಕ್ಷಿಸುವಂತೆ ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ