ಪ್ರಧಾನಿ ಮೋದಿಗೆ ಚುನಾವಣೆ ಸೋಲಿನ ಭೀತಿ


Team Udayavani, Nov 21, 2021, 12:36 PM IST

ಪ್ರಧಾನಿ ಮೋದಿಗೆ ಚುನಾವಣೆ ಸೋಲಿನ ಭೀತಿ

ದಾವಣಗೆರೆ: ಪಂಚರಾಜ್ಯಗಳ ಚುನಾವಣಾ ಸೋಲಿನ ಭೀತಿಯಲ್ಲಿ ಪ್ರಧಾನಿ ಮೋದಿ ಅವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದಾರೆಯೇ ವಿನಃ ರೈತರ ಮೇಲಿನ ಗೌರವದಿಂದಲ್ಲ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ್‌ ಅಭಿಪ್ರಾಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಬಡವರು, ಕಾರ್ಮಿಕರು, ಹಿಂದುಳಿದವರ ಬಗ್ಗೆ ಪ್ರಧಾನಿ ಮೋದಿ ಹಾಗೂ ಬಿಜೆಪಿಗೆ ಕನಿಷ್ಟ ಕಾಳಜಿಯೂ ಇಲ್ಲ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆದ ಸೋಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರಿ ಆಘಾತ ನೀಡಿದೆ. ಕೃಷಿ ಕಾಯ್ದೆಗಳು ಹಿಂದಿ ಭಾಷಿಕರ ರಾಜ್ಯಗಳ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯನ್ನು ಗುಪ್ತಚರ ಇಲಾಖೆಗಳ ವರದಿಯಿಂದ ಮನಗಂಡು ನಂತರ ಇದೀಗ ಕೃಷಿ ಕಾಯ್ದೆಗಳನ್ನು ಕೈಬಿಡುವ ನಿರ್ಧಾರ ಪ್ರಕಟಿಸಿದ್ದಾರೆ ಎಂದರು.

ಚಳವಳಿಯಲ್ಲಿ 700ಕ್ಕೂ ಅಧಿಕ ರೈತರು ಹುತಾತ್ಮರಾಗಿದ್ದಾರೆ. ರೈತರ ಬಲಿದಾನದ ಹೊಣೆಯನ್ನು ಮೋದಿ ಸರ್ಕಾರವೇ ಹೊರಬೇಕು. ರೈತ ಕುಟುಂಬಗಳಿಗೆ ಕನಿಷ್ಟ ತಲಾ 25ಲಕ್ಷ ರೂ. ಪರಿಹಾರ ನೀಡಬೇಕು. ಮೃತ ರೈತರ ಕುಟುಂಬಗಳ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ವೈಜ್ಞಾನಿಕವಾಗಿ ನಿಗದಿಪಡಿಸುವ ಶಾಶ್ವತ ಆಯೋಗ ಸರ್ಕಾರ ರಚಿಸಬೇಕು. ಆ ಆಯೋಗದಲ್ಲಿ ರೈತರ ಪ್ರತಿನಿಧಿಗಳು, ಕೃಷಿ ವಿಜ್ಞಾನಿಗಳು, ಕೃಷಿ ಆರ್ಥಿಕ ತಜ್ಞರನ್ನು ಕೃಷಿ ಆಯೋಗದ ಸದಸ್ಯರನ್ನಾಗಿ ನೇಮಿಸಬೇಕು. ಕೃಷಿ ಹಂಗಾಮಿನಲ್ಲಿ ರೈತರ ಬೆಳೆಗಳು ಕಟಾವಿಗೆ ಬರುವ ಮುನ್ನ ಕನಿಷ್ಟ ಬೆಂಬಲ ಬೆಲೆಯನ್ನು ಎಲ್ಲ ರೀತಿಯ ಬೆಳೆಗಳಿಗೆ ದೇಶಾದ್ಯಂತ ಘೋಷಿಸಬೇಕು. ಎಣ್ಣೆ ಕಾಳುಗಳು, ಆಹಾರ ಧಾನ್ಯಗಳು, ಹಣ್ಣು ತರಕಾರಿ, ಕಬ್ಬು, ಭತ್ತ, ತೋಟಗಾರಿಕಾ ಬೆಳೆಗಳು, ಪ್ಲಾಟೇಷನ್‌ ಬೆಳೆಗಳಾದ ಕಾಫಿ, ಯಾಲಕ್ಕಿ, ಸಾಂಬಾರು ಪದಾರ್ಥ ಸೇರಿದಂತೆ ಎಲ್ಲ ಬೆಳೆಗಳನ್ನು ಕನಿಷ್ಟ ಬೆಂಬಲ ಬೆಲೆಯ ಆಯೋಗದ ವ್ಯಾಪ್ತಿಗೆ ತರಬೇಕು. ಶೀಘ್ರವಾಗಿ ಹಾಳಾಗುವ ಹಣ್ಣು, ಟೊಮೊಟೊ, ತರಕಾರಿ ಬೆಳೆಗಳ ಸಂಸ್ಕರಣ ಘಟಕ ಆರಂಭಿಸಿ ಕೃಷಿಕರ ನೆರವಿಗೆ ಬರಬೇಕು. ಇಂತಹ ವೈಜ್ಞಾನಿಕ ಕ್ರಮ ಕೈಗೊಳ್ಳದೇ ಚುನಾವಣಾ ಉದ್ದೇಶದಿಂದ ಗಿಮಿಕ್‌ಗಳ ಮೂಲಕ ಮತದಾರರನ್ನು ಮರಳು ಮಾಡಲು ಹೊರಟರೇ ಬಿಜೆಪಿಯು ಮನೆಗೆ ಹೊಗುವ ಕಾಲ ದೂರವಿಲ್ಲ ಎಂದು ಹೇಳಿದರು.

ಮಹಾನಗರ ಪಾಲಿಕೆ ಹಿರಿಯ ಸದಸ್ಯ ಕೆ. ಚಮನಸಾಬ್‌ ಮಾತನಾಡಿ, ಮೋದಿ ಮಿತ್ರರಾದ ಅಂಬಾನಿ, ಆದಾನಿ ತರಹದ ಉದ್ಯಮಿಗಳ ಹಿತಾಸಕ್ತಿಯನ್ನು ಕಾಪಾಡಲು ದೇಶ ವಾಸಿಗಳನ್ನು ಬೆಲೆ ಏರಿಕೆ ಸುಳಿಗೆ ಸಿಲುಕಿಸಿದ್ದ ಮೋದಿ ಅವರಿಗೆ ಚುನಾವಣಾ ಸೋಲಿನ ಭಯ ಕಾಡುತ್ತಿದೆ. ಆದ್ದರಿಂದಲೇ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ನಾಟಕ ಆಡುತ್ತಿದ್ದಾರೆ ಎಂದು ಟೀಕಿಸಿದರು.

ಮಹಾನಗರ ಪಾಲಿಕೆ ಸದಸ್ಯ ಗಡಿಗುಡಾಳ್‌ ಮಂಜುನಾಥ ಮಾತನಾಡಿ, ಕಳೆದ ಏಳು ವರ್ಷಗಳಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೋಟ್‌ ಅಮಾನ್ಯಿàಕರಣ, ಜಿಎಸ್‌ಟಿ, ಕೃಷಿ ಕಾಯ್ದೆಗಳು ಮತ್ತು ಕಾರ್ಮಿಕ ಕಾಯ್ದೆಗಳು ಸೇರಿದಂತೆ ಜಾರಿಗೆ ತಂದ ಎಲ್ಲ ಕಾಯ್ದೆಗಳು ಜನವಿರೋಧಿ ಕಾಯ್ದೆಗಳಾಗಿವೆ. ದೇಶದ ಜನತೆ ಮೋದಿ ಅವರನ್ನು ಅಧಿಕಾರದಿಂದ ಇಳಿಸಿದಾಗ ಮಾತ್ರ ಭಾರತ ದೇಶ ಉದ್ಧಾರವಾಗುತ್ತದೆ ಎಂದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.