ಮಳೆಗೆ ಮಕಾಡೆ ಮಲಗಿದ ಭತ್ತ


Team Udayavani, Nov 21, 2021, 3:09 PM IST

18paddy

ಹುಣಸಗಿ: ಈಗಾಗಲೇ ರೈತರು ಬೆವರು ಸುರಿಸಿ ಬೆಳೆದ ಭತ್ತ ಕಟಾವಿಗೆ ಬಂದಿದೆ. ಕೊಯ್ಲು ಮಾಡಿ ಸಂಕಷ್ಟದಿಂದ ದೂರವಾಗಬೇಕೆಂದುಕೊಂಡಿದ್ದ ರೈತರಿಗೆ ಅಕಾಲಿಕ ಮಳೆ ನಿದ್ದೆಗೆಡಿಸಿದೆ.

ಕಳೆದ ವಾರದಿಂದಲೂ ದಟ್ಟವಾದ ಮಂಜಿನ ಹನಿ ಹಾಗೂ ಮಳೆಯಿಂದಾಗಿ ತೆನೆ ಹಿರಿದು ನಿಂತ ಭತ್ತದ ಪೈರು ಇದೀಗ ನೆಲಕ್ಕುರುಳಿ ಹಾಳಾಗಿವೆ. ಹುಣಸಗಿ ವಲಯದಲ್ಲಿ ಭತ್ತ-1450 ಎಕರೆ, ತೊಗರಿ-386 ಎಕರೆ, ಹತ್ತಿ-91 ಎಕರೆ ಹಾಗೂ ಕೊಡೇಕಲ್‌ ವಲಯದಲ್ಲಿ ಭತ್ತ-659 ಎಕರೆ, ತೊಗರಿ-1080, ಹತ್ತಿ-244 ಎಕರೆ ಸೇರಿದಂತೆ ಬೆಳೆಗಳು ಹಾನಿಯಾದ ಬಗ್ಗೆ ಕಂದಾಯ ಇಲಾಖೆ ಅಂದಾಜಿಸಿದೆ.

ಸಾಲ-ಸೂಲ ಮಾಡಿ ಬೆಳೆ ಬೆಳೆದು ಜೋಪಾನ ಮಾಡಿದ್ದ ಅನ್ನದಾತರೀಗ ಮಳೆಯಿಂದ ಅಕ್ಷರಶಃ ನಲುಗಿದ್ದಾರೆ. ಭತ್ತ, ಹತ್ತಿ, ತೊಗರಿ ವರುಣನ ಅರ್ಭಟಕ್ಕೆ ಮಣ್ಣು ಪಾಲಾಗಿವೆ. ಆಗಲೇ ಕಟಾವು ಮಾಡಿದ್ದ ಭತ್ತದ ಧಾನ್ಯ ಒಣಗಿಸಲೂ ಕೂಡ ಮಳೆ ಅಡ್ಡಿಯಾಗಿದೆ. ಹಾಗಾಗಿ ಸಂಗ್ರಹಿಸಿಟ್ಟಲ್ಲಿಯೇ ಮೊಳಕೆ ಒಡೆಯುವ ಹಂತಕ್ಕೆ ಬಂದಿದ್ದರೆ, ಹತ್ತಿಯೂ ಗಿಡದಲ್ಲಿಯೇ ಕೊಳೆಯುತ್ತಿದೆ ಎಂದು ರೈತರು ನೋವು ತೋಡಿಕೊಳ್ಳುತ್ತಿದ್ದಾರೆ.

ಸುರಪುರ-ಹುಣಸಗಿ ಸೇರಿ 54 ಸಾವಿರಕ್ಕಿಂತ ಹೆಚ್ಚು ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಹಾನಿಗೀಡಾದ ಪ್ರದೇಶಕ್ಕೆ ಆಯಾ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಸಮೀಕ್ಷೆ ಕೈಗೊಂಡಿದ್ದಾರೆ. ಈ ಹಿಂದೆ 2019-20ರಲ್ಲಿ ಹಾನಿಯಾದ ಕೆಲ ರೈತರಿಗೆ ಇನ್ನೂ ಪರಿಹಾರ ಬಂದಿಲ್ಲ. ಇದೀಗ ಬೆಳೆ ಹಾನಿಯಾಗಿ ಮತ್ತೆ ರೈತರು ಸರ್ಕಾರದ ಪರಿಹಾರಕ್ಕಾಗಿ ಕಾಯುವಂತಾಗಿದೆ. ಆದರೆ ಹಿಂದಿನ ಪರಿಹಾರವೇ ಇನ್ನೂ ರೈತರ ಕೈ ಸೇರಿಲ್ಲ. ಅಂತಹ ಸಂದರ್ಭದಲ್ಲಿ ಮಳೆರಾಯ ಅನ್ನದಾತನ್ನು ಸಂಕಷ್ಟಕ್ಕೆ ದೂಡಿದ್ದಾನೆ.

ಇದನ್ನೂ ಓದಿ:ಶಂಕರಪುರ ಮಲ್ಲಿಗೆ ಬೆಳೆ ವೀಕ್ಷಣೆ ನಡೆಸಿದ ಬೆಂಗಳೂರಿನ ವಿಜ್ಞಾನಿಗಳ ತಂಡ

ಬೆಲೆ ಕುಸಿತ

ಈ ಬಾರಿಯೂ ಭತ್ತದ ಬೆಲೆ ಕುಸಿತವಾಗಿದೆ. ಗೊಬ್ಬರ-ಕ್ರಿಮಿನಾಶಕ, ಔಷಧಗಳ ಬೆಲೆ ದುಪ್ಪಟ್ಟಾದರೂ ಭತ್ತಕ್ಕೆ ಮಾತ್ರ ಬೆಲೆಯೇ ಇಲ್ಲದಂತಾಗಿದೆ. 72 ಕೆ.ಜಿಗೆ ಸದ್ಯ 1000ರಿಂದ 1100 ರೂ. ಇದೆ. ಸ್ವಾಮಿನಾಥನ್‌ ಆಯೋಗದಂತೆ ಬೆಂಬಲ ಬೆಲೆ ಸೇರಿ ಕ್ವಿಂಟಲ್‌ ಭತಕ್ಕೆ 5000 ರೂ. ದರ ನಿಗ ಪಡಿಸಬೇಕೆಂದು ರೈತರ ಆಗ್ರಹ. ಹತ್ತಿಗೆ ಬೆಲೆ ಇದ್ದರೂ ಪ್ರಕೃತಿ ವಿಕೋಪದಿಂದ ಕೈ ಸುಟ್ಟುಕೊಂಡಿದ್ದೇವೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಾರೆ.

ಖರೀದಿ ಕೇಂದ್ರವೂ ಇಲ್ಲ

ಈ ಭಾಗದಲ್ಲಿ ಭತ್ತವನ್ನೇ ಹೆಚ್ಚು ಬೆಳೆಯಲಾಗುತ್ತಿದ್ದರೂ ಖರೀದಿ ಕೇಂದ್ರ ಮಾತ್ರ ತೆರೆಯಲಾಗಿದೆ. ರೈತರ ಹಿತದೃಷ್ಟಿಯಿಂದ ಆದಷ್ಟು ಶೀಘ್ರ ಭತ್ತ ಖರೀದಿ ಕೇಂದ್ರ ತೆರೆದು ಭತ್ತ ಖರೀದಿಗೆ ಮುಂದಾಗಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸುತ್ತಿವೆ.

ರೈತರ ಬೆಳೆಹಾನಿ ಸಮೀಕ್ಷೆ ಸತ್ಯಾಂಶದಿಂದ ಕೂಡಿರಲಿ. ನೈಜ ರೈತರಿಗೆ ಪರಿಹಾರ ಸಿಗಬೇಕು. ಪರಿಹಾರ ನೀಡುವಲ್ಲಿ ಲೋಪದೋಷ ಆಗದಂತೆ ನೋಡಿಕೊಳ್ಳಬೇಕು. ಈಗಾಗಲೇ ರೈತರು ಸಂಕಷ್ಟದಲ್ಲಿದ್ದಾರೆ. ಭತ್ತ ಖರೀದಿ ಕೇಂದ್ರ ಸ್ಥಾಪಿಸಬೇಕು. ಭತ್ತಕ್ಕೆ ಹೆಚ್ಚಿನ ಬೆಂಬಲ ಬೆಲೆ ಸರ್ಕಾರ ದೊರಕಿಸಲು ಮುಂದಾಗಬೇಕು. ಮೂರು ಕೃಷಿ ಮಸೂದೆ ಹಿಂಪಡೆದಿರುವುದು ಖುಷಿ ತಂದಿದೆ. -ಮಹಾದೇವಿ ಬೇವಿನಾಳಮಠ ರಾಜ್ಯ ರೈತ ಸಂಘ (ಹಸಿರುಸೇನೆ) ಮಹಿಳಾ ರಾಜ್ಯ ಉಪಾಧ್ಯಕ್ಷೆ

ಹುಣಸಗಿ ವಲಯದಲ್ಲಿ 17 ಸಾವಿರ ಹೆಕ್ಟೇರ್‌ಗೂ ಹೆಚ್ಚು ಭತ್ತ ಬೆಳೆಯಲಾಗಿದೆ. ಕೃಷಿ ಹಾಗೂ ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಿದಾಗ ಹಾನಿ ವರದಿ ಹೆಚ್ಚಾಗಬಹುದು. ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಹಾನಿ ವರದಿ ತಯಾರಿಸಲಾಗುವುದು. -ಸಿದ್ದಾರ್ಥ ಪಾಟೀಲ, ಸಹಾಯಕ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಹುಣಸಗಿ

ಬಾಲಪ್ಪ.ಎಂ. ಕುಪ್ಪಿ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.