ಕೃಷಿ ತಿದ್ದುಪಡಿ ಕಾಯ್ದೆ ವಾಪಸ್‌; ರೈತರ ಸಂಭ್ರಮ


Team Udayavani, Nov 22, 2021, 12:59 PM IST

12farmer

ಆಲಮಟ್ಟಿ: ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಮರಳಿ ಪಡೆದಿರುವುದು ರೈತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಂಚಾಲಕ ನಿಂಗರಾಜ ಆಲೂರ ಹೇಳಿದರು.

ರವಿವಾರ ಇಲ್ಲಿನ ಹಳೆ ರಾಷ್ಟ್ರೀಯ ಹೆದ್ದಾರಿ ಬಳಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಮಹಾದ್ವಾರದ ಮುಂದೆ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಡೆದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.

ಕರಾಳ ಶಾಸನ ವಾಪಸ್‌ ಪಡೆದಿರುವದು ಸ್ವಾಗತಾರ್ಹವಾದರೂ ರೈತರ ಎಲ್ಲ ಬೇಡಿಕೆಗಳು ಈಡೇರಿಸಬೇಕು. ಹೋರಾಟದಲ್ಲಿ ಮೃತರಾದ ರೈತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ರೈತರಿಗೆ ಮಾರಕವಾಗುವ ಮೂರು ಕರಾಳ ಶಾಸನವನ್ನು ರಚಿಸಿ ಅವುಗಳ ಅನುಷ್ಠಾನಕ್ಕೆ ಸುಗ್ರೀವಾಜ್ಞೆ ಹೊರಡಿಸಿತ್ತು. ಇದರಿಂದ ಅನಿವಾರ್ಯವಾಗಿ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರವಾದರೂ ವಾಪಸ್‌ ಪಡೆದಿರುವುದು ಸ್ವಲ್ಪ ಸಮಾಧಾನದ ಸಂಗತಿ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೂತನ ಕಾಯ್ದೆಗಳನ್ನು ತರಬೇಕಾದರೆ ರೈತರ ಏಳ್ಗೆಯನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದರು.

ದೇಶದಲ್ಲಿರುವುದು ಪ್ರಜಾಪ್ರಭುತ್ವ ಸರ್ಕಾರದ ಆಡಳಿತವೋ ಅಥವಾ ಬ್ರಿಟಿಷರ ಆಡಳಿತವೋ ಎನ್ನುವಂತೆ ಕೇಂದ್ರ ಸರ್ಕಾರ ವರ್ತಿಸುತ್ತಿರುವುದು ಖಂಡನೀಯವಾಗಿದೆ. ಎಂಎಸ್‌ಪಿ ದರ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನ. 26ರಂದು ಪ್ರತಿಭಟನೆ ನಡೆಸುವುದು ನಿಶ್ಚಿತ. ಪ್ರಧಾನ ಮಂತ್ರಿಯವರು ಘೋಷಣೆ ಮಾಡಿದಂತೆ ಅದನ್ನು ಈಗ ನಡೆಯಲಿರುವ ಅಧಿವೇಶನದಲ್ಲಿ ವಾಪಸ್‌ ಪಡೆಯಬೇಕು. ರೈತರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡಬೇಕು. ಮೃತರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ತಾಲೂಕಾಧ್ಯಕ್ಷ ತಿರುಪತಿ ಬಂಡಿ ಹಾಗೂ ಪ್ರಧಾನ ಕಾರ್ಯದರ್ಶಿ ಸೀತಪ್ಪ ಗಣಿ ಮಾತನಾಡಿ, ಉತ್ತರ ಭಾರತ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ಕರಾಳ ಶಾಸನಗಳನ್ನು ವಾಪಸ್‌ ಪಡೆಯಲಾಗಿದೆ. ರೈತರ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿಜವಾದ ಕಾಳಜಿಯಿದ್ದರೆ ಶಾಸನ ರಚಿಸಿದ ಕೆಲ ದಿನಗಳಲ್ಲಿಯೇ ರೈತರು ಉಗ್ರಪ್ರತಿಭಟನೆ ನಡೆಸಿದ್ದರು. ಆ ಸಂದರ್ಭದಲ್ಲಿ ಶಾಸನ ವಾಪಸ್‌ ಪಡೆಯದೇ ಹೋರಾಟವನ್ನು ಅಧಿಕಾರ ಬಲದಿಂದ ಹತ್ತಿಕ್ಕಲು ಪ್ರಯತ್ನಿಸಲಾಯಿತು. ಇದಕ್ಕೆ ರೈತರು ಬಗ್ಗದೇ ಇರುವಾಗ ರೌಡಿಗಳಿಂದ ದಾಂಧಲೆ ನಡೆಸಿ ರೈತರ ಹತ್ಯೆಗೆ ಯತ್ನಿಸಲಾಯಿತು. ಇಷ್ಟೇ ಇಲ್ಲದೇ ರೈತ ಪರ ಸಂಘಟನೆಯ ವಿರುದ್ದವಾಗಿ ಅಪ ಪ್ರಚಾರ ನಡೆಸಲಾಯಿತು. ಇದು ಆಡಳಿತ ನಡೆಸುವ ಸರ್ಕಾರದ ಅವಿವೇಕಿತನ ಎಂದು ವಾಗ್ಧಾಳಿ ನಡೆಸಿದರು. ವೆಂಕಟೇಶ ವಡ್ಡರ, ಸಾಬಣ್ಣ ಅಂಗಡಿ, ಸುಭಾಷ್‌ ಚೋಪಡೆ, ಮಲ್ಲಯ್ಯ ಮಠಪತಿ, ಸಾಬಣ್ಣ ಮಾದರ, ಶಿವಶಂಕರ ಕವಲಗಿ ಮೊದಲಾದವರಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.