18 ಹಳ್ಳಿಗಳ ಜನರ ಸ್ಥಳಾಂತರ: ತಿರುಪತಿಗೆ ರಸ್ತೆ, ರೈಲು ಸಂಪರ್ಕ ಕಡಿತ
ಬೆಂಗಳೂರು, ಚೆನ್ನೈ ಹೈದರಾಬಾದ್ ಮೂಲಕ ಸಂಪರ್ಕಿಸುವ ಎಲ್ಲ ರಸ್ತೆಗಳಿಗೂ ಹಾನಿ
Team Udayavani, Nov 23, 2021, 10:10 AM IST
ತಿರುಪತಿ: ಇತ್ತೀಚೆಗೆ ಸುರಿದ ಮಳೆಯಿಂದಾಗಿ ವಿವಿಧ ಮಾರ್ಗಗಳಿಂದ ತಿರುಪತಿಯನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳು ಮತ್ತು ರಸ್ತೆಗಳು ಹಾಳಾಗಿರುವುದರಿಂದ ಶ್ರೀಕ್ಷೇತ್ರಕ್ಕೆ ಆಗಮಿಸುವವರಿಗೆ ತೀವ್ರ ತೊಂದರೆಯಾಗಿದೆ.
ಬೆಂಗಳೂರು, ಚೆನ್ನೈ ಹಾಗೂ ಹೈದರಾಬಾದ್ನಿಂದ ತಿರುಪತಿಗೆ ಹೋಗುವ ಎಲ್ಲ ಮಾರ್ಗಗಳೂ ಬಂದ್ ಆಗಿವೆ. ಮತ್ತೊಂದೆಡೆ, ತಿರುಪತಿಯನ್ನು ಸಂಪರ್ಕಿಸುವ ರೈಲು ಸಂಚಾರವನ್ನೂ ಸ್ಥಗಿತಗೊಳಿಸಲಾಗಿದ್ದು ತಿರುಪತಿಗೆ ಸಂಪರ್ಕವೇ ತಪ್ಪಿಹೋಗಿದೆ.
ಮಳೆಯಿಂದಾಗಿ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಸುತ್ತಲೂ ತುಂಬಿಕೊಂಡಿದ್ದ ಮಳೆ ನೀರನ್ನು ಬೇರೆಡೆಗೆ ಪಂಪ್ಔಟ್ ಮಾಡಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಇದರ ನಡುವೆಯೇ ತಿರುಪತಿ ಬಳಿಯ ರಾಯುಲು ಚೆರುವು ಜಲಾಶಯವು ನೀರಿನ ಅಗಾಧ ಒತ್ತಡದಿಂದಾಗಿ ಒಡೆಯುವ ಹಂತಕ್ಕೆ ಬಂದಿದೆ. ಅಣೆಕಟ್ಟಿನಲ್ಲಿ ಬಿರುಕುಗಳು ಕಾಣಿಸಿಕೊಂಡಿರುವುದು ಸುತ್ತಲಿನ ಜನರಿಗೆ ಭೀತಿಗೊಳಗಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಚಿತ್ತೂರು ಜಿಲ್ಲಾಡಳಿತ 18 ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.
ಇದನ್ನೂ ಓದಿ:ಜಿಮ್ ನಲ್ಲಿ ವರ್ಕೌಟ್ : ವಧುವಿನ ವೆರೈಟಿ ಪ್ರೀವೆಡ್ಡಿಂಗ್ ಫೋಟೋ ಶೂಟ್ !
ದರ್ಶನಕ್ಕೆ ಮತ್ತೆ ಅವಕಾಶ: ಟಿಟಿಡಿ:
ನ. 18ರಿಂದ ನ. 30ವರೆಗಿನ ಅವಧಿಯಲ್ಲಿ ತಿರುಮಲದ ಶ್ರೀ ವೆಂಕ ಟೇಶ್ವರ ಸನ್ನಿಧಾನಕ್ಕೆ ಭೇಟಿ ನೀಡಲು ಟಿಕೆಟ್ ಪಡೆದಿದ್ದ ಎಲ್ಲ ಭಕ್ತರಿಗೆ ಬೇರೆ ನಿರ್ದಿಷ್ಟ ದಿನಗಳಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಶ್ರೀ ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ (ಟಿಟಿಡಿ) ತಿಳಿಸಿದೆ. ದರ್ಶನ ಪಡೆಯದ ಭಕ್ತರಿಗಾಗಿ ಪ್ರತ್ಯೇಕ ಸಾಫ್ಟ್ ವೇರ್ ರೂಪಿಸಲಾಗುತ್ತದೆ. ಅದನ್ನು ಬಳಸಿ, ಭಕ್ತರು ಬೇರೊಂದು ದಿನ ದರ್ಶನಕ್ಕೆ ಅವಕಾಶ ಪಡೆಯ ಬಹುದು ಎಂದು ಟಿಟಿಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ
IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ
Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ
Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ
Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ