ಅಗ್ನಿಶಾಮಕದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ
Team Udayavani, Nov 23, 2021, 11:05 AM IST
ದೇವನಹಳ್ಳಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸುವ ಅಗ್ನಿ ಅವಘಡ ನಿರ್ವಹಿಸಲು ಇದೇ ಮೊದಲ ಬಾರಿಗೆ ರೋಸೆನ್ಬೌರ್ ಪೈರ್ಪೈಂಟಿಂಗ್ ಸಿಮ್ಯುಲೇಟರ್ ಅನ್ನು ಪರಿಚಯಿಸಿದೆ. ಇದು ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ಪರಿಚಯಿಸಿದ ಅತ್ಯಾಧುನಿಕ ಅಗ್ನಿಶಾಮಕ ತಂತ್ರಜ್ಞಾನವಾಗಿದೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯರಾಜ್ ಷಣ್ಮುಗಂ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಂಗಳೂರು ವಿಮಾನ ನಿಲ್ದಾಣದ ಸುರಕ್ಷತೆ ದೃಷ್ಟಿಯಿಂದ ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ರೋಸೆನ್ ಬೌರ್ ಪೈರ್ಪೈಂಟಿಂಗ್ ಸಿಮ್ಯುಲೇಟರ್ ಅನ್ನು ಪರಿಚಯಿಸಲಾಗುತ್ತಿದೆ.
ಇದು ಯಾವುದೇ ರೀತಿಯ ಅಗ್ನಿ ಅವಘಡವಾದರೂ, ಕೂಡಲೇ ಅದನ್ನು ಆರಿಸುವ ಕೆಲಸದಲ್ಲಿ ನಿಪುಣತೆ ಹೊಂದಿದೆ. ಈ ಅತ್ಯಾಧುನಿಕ ತಂತ್ರಜ್ಞಾನದ ಅಗ್ನಿಶಾಮಕವನ್ನು ಭಾರತದ ಯಾವುದೇ ವಿಮಾನ ನಿಲ್ದಾಣದ ತಂಡ ಇಲ್ಲಿಗೆ ಆಗಮಿಸಿ ಇದರ ತರಬೇತಿ ಪಡೆಯಲು ಸಹಮುಕ್ತ ಅವಕಾಶವನ್ನು ಒದಗಿಸಿ ಕೊಡಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:- ಮುಂಬೈ ಷೇರುಪೇಟೆ ಸೆನ್ಸೆಕ್ಸ್ 568 ಅಂಕ ಇಳಿಕೆ; ನಿಫ್ಟಿ ಕುಸಿತ, ಹೂಡಿಕೆದಾರರಿಗೆ ನಷ್ಟ
ವಿಮಾನ ನಿಲ್ದಾಣ ಅಥವಾ ವಿಮಾನಗಳ ಅಪಘಾತದ ಸಂದರ್ಭದಲ್ಲಿ ಹೊತ್ತಿಕೊಳ್ಳುವ ಅಗ್ನಿ ಅವಘಡವನ್ನು ತುರ್ತಾಗಿ ಆರಿಸುವಲ್ಲಿ ಈ ಅತ್ಯಾಧುನಿಕ ಸಿಮ್ಯುಲೇಟರ್ ಕೆಲಸ ಮಾಡಲಿದೆ. ರೋಸೆನ್ಬೌರ್ ಸಿಮ್ಯುಲೇಟರ್ ಎರಡು ಪ್ಯಾಂಥರ್ 6 ಟ್ರಕ್ ಹಾಗೂ 8 ಟ್ರಕ್ ಇರಿಸಲಾಗಿದೆ. ಈ ಟ್ರಕ್ಗಳಲ್ಲಿ ಎರಡು ಹೈರೀಚ್ ಎಕ್ಸ್ಟೆಂಡೆಬಲ್ ಟರೆಟ್ಸ್ (ಎಚ್ಆರ್ಇಟಿ)ಯನ್ನು ಒಳಗೊಂಡಿದೆ ಎಂದು ತಿಳಿಸಿದ್ದಾರೆ.
ಸುರಕ್ಷತೆಗೆ ಮೊದಲ ಆದ್ಯತೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷತೆ ಕಾಯ್ದುಕೊಳ್ಳುವುದು ನಮ್ಮ ಮೊದಲ ಆದ್ಯತೆ. ರೋಸೆನ್ಬೌರ್ ಸಿಎಫ್ಟಿ ಮೂಲಕ ಕಠಿಣವಾದ ಅಗ್ನಿ ಅವಘಡದ ಸಂದರ್ಭ ದಲ್ಲಿ ಈ ಸಿಮ್ಯುಲೇಟರ್ ಚಾತುರ್ಯದಿಂದ ಅಗ್ನಿಯನ್ನು ಶಮನ ಮಾಡಲಿದೆ. ವಿಮಾನ ನಿಲ್ದಾಣ ದಲ್ಲಿರುವ ಅಗ್ನಿಶಾಮಕ ದಳದವರಿಗೆ ಈ ಸಿಮ್ಯುಲೇಟರ್ ಅನ್ನು ಬಳಸುವ ವಿಧಾನವನ್ನು ತರಬೇತಿ ನೀಡಲಾಗಿದೆ. ಅದರಲ್ಲೂ ಕಮಾಂಡ್ ನಿಯಂತ್ರ ಕರು, ಮೂಲ ಚಾಲಕರು, ಪೋಸಿಶನಿಂಗ್ ಇನ್ಸಿ ಡೆಂಟ್ ಕಮಾಂಡರ್, ಕ್ಯೂ ಕಮಾಂಡರ್ ಹಾಗೂ ಅಗ್ನಿಶಾಮಕ ಮುಂಚೂಣಿ ಸಿಬ್ಬಂದಿಗೆ ಈ ತರಬೇತಿ ಯನ್ನು ಕಡ್ಡಾಯವಾಗಿ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ