26/11 ಮುಂಬಯಿ ದಾಳಿ ನಂತರ ಕಾಂಗ್ರೆಸ್ ಸಂಯಮ ತೋರಿಸಿದ್ದೇಕೆ? ಹೊಸ ಪುಸ್ತಕದಲ್ಲಿ ತಿವಾರಿ

ಭಾರತದಲ್ಲಿಯೂ ಕ್ಷಿಪ್ರವಾದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿತ್ತು

Team Udayavani, Nov 23, 2021, 1:17 PM IST

26/11 ಮುಂಬಯಿ ದಾಳಿ ನಂತರ ಕಾಂಗ್ರೆಸ್ ಸಂಯಮ ತೋರಿಸಿದ್ದೇಕೆ? ಹೊಸ ಪುಸ್ತಕದಲ್ಲಿ ತಿವಾರಿ

ನವದೆಹಲಿ: ಇತ್ತೀಚೆಗಷ್ಟೇ ಕಾಂಗ್ರೆಸ್ ಹಿರಿಯ ಮುಖಂಡ ಸಲ್ಮಾನ್ ಖುರ್ಷಿದ್ ಅವರು ತಮ್ಮ ಅಯೋಧ್ಯೆ ಪುಸ್ತಕದಲ್ಲಿ ಹಿಂದುತ್ವವನ್ನು ಮುಸ್ಲಿಂ ಮೂಲಭೂತವಾದಿ ಸಂಘಟನೆಯ ಜತೆ ಹೋಲಿಕೆ ಮಾಡುವ ಮೂಲಕ ವಿವಾದ ಹುಟ್ಟು ಹಾಕಿದ್ದರು. ಏತನ್ಮಧ್ಯೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರ ನೂತನ ಪುಸ್ತಕದಲ್ಲಿ ಮುಂಬಯಿ ದಾಳಿಯ ನಂತರ ಯುಪಿಎ-1 ಸರ್ಕಾರದ ನಿಷ್ಕ್ರಿಯತೆ ಬಗ್ಗೆ ಪ್ರಶ್ನಿಸಿರುವುದು ಹೊಸ ಚರ್ಚೆಗೆ ನಾಂದಿ ಹಾಡಿದೆ.

ಇದನ್ನೂ ಓದಿ:ಮೈಸೂರು: ಸೂಯೆಜ್ ಫಾರಂನಲ್ಲಿ ಮೊಸಳೆ ಪ್ರತ್ಯಕ್ಷ. ಸ್ಥಳೀಯರಲ್ಲಿ ಆತಂಕ

ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಬರೆದ ನೂತನ ಪುಸ್ತಕ ಡಿಸೆಂಬರ್ 4ರಂದು ಅಧಿಕೃತವಾಗಿ ಬಿಡುಗಡೆಗೊಳ್ಳಲಿದೆ. ಕುತೂಹಲದ ವಿಷಯವೆಂದರೆ ಮುಂಬಯಿ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ಪುಸ್ತಕ ಬಿಡುಗಡೆಗೊಳ್ಳುತ್ತಿರುವುದು ಕಾಕತಾಳೀಯವಾಗಿದೆ ಎಂದು ವರದಿ ತಿಳಿಸಿದೆ.

ನೂರಾರು ಅಮಾಯಕರನ್ನು ಬಲಿ ಪಡೆದ ಮುಂಬಯಿ ದಾಳಿ ಘಟನೆಯ ಬಗ್ಗೆ ಧರ್ಮಭೀತಿ ಪಡುವಂತಹದ್ದೇನಿಲ್ಲ. ಕಠಿಣ ಕ್ರಮ ತೆಗೆದುಕೊಳ್ಳುವಲ್ಲಿ ಸಂಯಮ ವಹಿಸುವುದು ಸಾಮರ್ಥ್ಯದ ಲಕ್ಷಣವಲ್ಲ. ಇದೊಂದು ದೌರ್ಬಲ್ಯದ ಸಂಕೇತವಾಗಿದೆ ಎಂದು ತಿವಾರಿ ಬಿಡುಗಡೆಗೊಳ್ಳಲಿರುವ ಪುಸ್ತಕದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತದ ಬಗ್ಗೆ ಆರೋಪಿಸಿದ್ದಾರೆ.

ಕ್ರಮ ತೆಗೆದುಕೊಳ್ಳಬೇಕಾದ ಸಂದರ್ಭ ಬಂದಾಗ ಶಬ್ದಕ್ಕಿಂತ ಹೆಚ್ಚಾಗಿ ಮಾತನಾಡಬೇಕಾಗುತ್ತದೆ. ಆ ನೆಲೆಯಲ್ಲಿ 26/11 ಘಟನೆ ಕೂಡಾ ಆ ಸಂದರ್ಭದಲ್ಲಿ ಒಂದಾಗಿತ್ತು. 9/11 ದಾಳಿ ನಡೆದ ನಂತರ ಭಾರತವೂ ಕ್ಷಿಪ್ರವಾದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿತ್ತು ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದು ತಿವಾರಿ ಪುಸ್ತಕದಲ್ಲಿ ವಿಶ್ಲೇಷಿಸಿದ್ದಾರೆ.

“ನನ್ನ ನಾಲ್ಕನೇಯ ಪುಸ್ತಕ ಶೀಘ್ರದಲ್ಲಿಯೇ ಮಾರುಕಟ್ಟೆಗೆ ಬರಲಿದೆ. 10 Flash Points; 20 Years – National Security Situations that Impacted India ಪುಸ್ತಕ ಡಿಸೆಂಬರ್ 2ರಂದು ಬಿಡುಗಡೆಗೊಳ್ಳಲಿದೆ” ಎಂದು ಮನೀಶ್ ತಿವಾರಿ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಯುಪಿಎ-2 ಸರ್ಕಾರದಲ್ಲಿ ಸಚಿವರಾಗಿದ್ದ ಮನೀಶ್ ತಿವಾರಿ ಅವರು ತಮ್ಮ ಪುಸ್ತಕದಲ್ಲಿ, ಮುಂಬಯಿ ಮೇಲೆ ದಾಳಿ ನಡೆದ ನಂತರ ಸರ್ಕಾರ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿತ್ತು. ಆದರೆ ಭಾರತ ಸಂಯಮವನ್ನು ಪ್ರದರ್ಶಿಸಿತ್ತು. ಇದು ನಮ್ಮ ಸಾಮರ್ಥ್ಯದ ಲಕ್ಷಣವಲ್ಲ, ದೌರ್ಬಲ್ಯದ ಸಂಕೇತ ಎಂದು ಟೀಕಿಸಿದ್ದಾರೆ.

ಟಾಪ್ ನ್ಯೂಸ್

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.