ದೇಶಕ್ಕೆ ಸಂಕಷ್ಟ ಬಂದಾಗ ನೆರವಾಗಿದೆ ಎಬಿವಿಪಿ: ಮಿಸೆ


Team Udayavani, Nov 23, 2021, 3:35 PM IST

18ABBp

ವಿಜಯಪುರ: ದೇಶಕ್ಕೆ ಯಾವುದಾದರೂ ಸಂಕಷ್ಟದ ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ದೇಶದ ಬೆನ್ನುಲಬಾಗಿ ನಿಲ್ಲುವ ಯುವಶಕ್ತಿಯ ಬಲಿಷ್ಠ ಸಂಘಟನೆಯೇ ನಮ್ಮದು ಎಂದು ಎಬಿವಿಪಿ ಪ್ರಾಂತ ಸಂಘಟನಾ ಕಾರ್ಯದರ್ಶಿ ಮಂಜುನಾಥ ಮಿಸೆ ಹೇಳಿದರು.

ನಗರದ ಪಿಡಿಜೆ ಕಾಲೇಜಿನಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಹಮ್ಮಿಕೊಂಡಿದ್ದ ಮಹಾನಗರ ಅಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 73 ವರ್ಷಗಳಿಂದ ದೇಶದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಧ್ವನಿಯಾಗಿ ನಿಲ್ಲುವ ಸಂಘಟನೆ ಎಬಿವಿಪಿ. ಸಾಮಾನ್ಯವಾಗಿ ಕಾಲೇಜಿಗೆ ಬಂದಿರುವ ವಿದ್ಯಾರ್ಥಿಗಳಲ್ಲಿ ಈ ದೇಶದ ಮಹಾನ್‌ ಪುರುಷರ ವಿಚಾರಗಳನ್ನು ತುಂಬಿ ಈ ದೇಶದ ಶಕ್ತಿಯನ್ನಾಗಿ ಪರಿವರ್ತನೆ ಮಾಡುವ ಕಾರ್ಯವನ್ನು ಎಬಿವಿಪಿ ಮಾಡುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಡಿ.ಕೆ. ಕುಲಕರ್ಣಿ ಮಾತನಾಡಿ, ಯುವಶಕ್ತಿ ದೇಶದ ಪರ ಚಿಂತನೆ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳ ಬೇಕು. ಯುವಕರ ಪ್ರೇರಣಾ ವ್ಯಕ್ತಿಗಳು ಚಲನಚಿತ್ರ ನಟ-ನಟಿಯರನ್ನು ಮಾಡಿ ಕೊಳ್ಳದೆ ದೇಶಕ್ಕಾಗಿ ಪ್ರಾಣ ಅರ್ಪಣೆ ಮಾಡಿದ ವ್ಯಕ್ತಿಗಳು ಪ್ರೇರಣೆಯನ್ನಾಗಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಎಬಿವಿಪಿಯ ಕಾರ್ಯಕರ್ತರು ಕೋವಿಡ್‌ ಸಂದರ್ಭದಲ್ಲಿ ಮಾಡಿದ ಸೇವಾ ಚಟುವಟಿಕೆಗಳ ಕಾರ್ಯವೂ ನಿಜಕ್ಕೂ ಎಲ್ಲರಿಗೂ ಪ್ರೇರಣೆ ದಾಯಕವಾಗಿದೆ. ಬೇರೆ ರಾಜ್ಯಗಳಿಂದ ಬಂದ ಕಾರ್ಮಿಕರಿಗೆ 31 ದಿನಗಳ ಕಾಲ ಉಚಿತ ಫುಡ್‌ಕಿಟ್‌ ವಿತರಣೆ, ಸರ್ಕಾರಿ ಕಚೇರಿಗಳ ಸ್ಯಾನಿಟೈಸ್‌, ಉಚಿತ ಮಾಸ್ಕ್ ವಿತರಣೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಮಾಡಿದ ಕಾರ್ಯಕರ್ತರ ಸೇವೆ ಸ್ಮರಿಸಿದರು.ನಗರ ಸಂಘಟನಾ ಕಾರ್ಯದರ್ಶಿ ನಾರಗಾಜ ಬಟಗೇರಾ ಸಮಾರೋಪ ಭಾಷಣ ಮಾಡಿದರು.

ಇದೇ ವೇಳೆ ಎಬಿವಿಪಿ ನಗರ ಘಟಕದ ಅಧ್ಯಕ್ಷರಾಗಿ ಅಮಿತಕುಮಾರ ಬಿರಾದಾರ, ಕಾರ್ಯದರ್ಶಿಯಾಗಿ ಸಿದ್ದು ಪತ್ತಾರ ಮರು ಆಯ್ಕೆಯಾದರು. ನಗರ ಉಪಾಧ್ಯಕ್ಷರಾಗಿ ಓಂಕಾರ ನಾವಿ, ಸೀಮಾ ಹೋನವಾಡ, ಐ.ಬಿ. ಜಾಬಾ, ತಾಲೂಕು ಸಹ ಸಂಚಾಲಕರಾಗಿ ಮಹಂತೇಶ ಕಂಬಾರ, ತಾಲೂಕು ಹಾಸ್ಟೆಲ್‌ ಪ್ರಮುಖರಾಗಿ ಸಂತೋಷ ದೊಡಮನಿ, ನಗರ ಸಹ ಕಾರ್ಯದರ್ಶಿಗಳಾಗಿ ಮಂಜುನಾಥ ಹಳ್ಳಿ, ವರ್ಷಾ ನಂದಿ, ಐಶ್ವರ್ಯ ಪಾಟೀಲ, ಸಿದ್ದು ಉಪ್ಪಾರ, ಅಧ್ಯಯನ ಕೇಂದ್ರ ಪ್ರಮುಖರಾಗಿ ನಾನಾಗೌಡ ಪಾಟೀಲ, ಹಾಸ್ಟೆಲ್‌ ಪ್ರಮುಖರಾಗಿ ಮಹೇಶ, ಸಹ ಪ್ರಮುಖರಾಗಿ ಕಿರಣ ದೊಡಮನಿ, ಸಂಪರ್ಕ ಪ್ರಮುಖರಾಗಿ ಮಾಲೂ ಪೂಜಾರಿ, ಕಾರ್ಯಾಲಯ ಕಾರ್ಯದರ್ಶಿಯಾಗಿ ಆಕಾಶ ರಂಜನಗಿ, ಕಾರ್ಯಕಾರಣಿ ಸದಸ್ಯರಾಗಿ ರೇಖಾ ಅರಕೇರಿ, ಅಮೋಘಸಿದ್ದ ಮರನೂರ, ಬಸವರಾಜ ಓಕಾರ, ಅರವಿಂದ, ಅಮೂಲ್ಯ ಮೋರೆ, ಕಾವೇರಿ ಕಂದಗೊಳ, ಭಾಗ್ಯಾ ಆಯ್ಕೆಯಾದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.