ಚಾರ್ಮಾಡಿಯಲ್ಲಿ ಮತ್ತೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ
Team Udayavani, Nov 24, 2021, 5:11 AM IST
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮಠದ ಮಜಲು ಅನಂತ್ ರಾವ್ ಅವರ ತೋಟಕ್ಕೆ ಸೋಮವಾರ ತಡರಾತ್ರಿ ದಾಳಿ ನಡೆಸಿದ ಕಾಡಾನೆಗಳು 80 ಅಡಿಕೆ ಮರ, 5 ತೆಂಗಿನ ಮರ ಹಾಗೂ ಅನೇಕ ಬಾಳೆ ಗಿಡಗಳನ್ನು ನಾಶ ಮಾಡಿವೆ.
ಶನಿವಾರ ರಾತ್ರಿಯೂ ದಾಳಿ ನಡೆಸಿದ್ದ ಆನೆಗಳು 50 ಅಡಿಕೆ ಮರ, ಎರಡು ತೆಂಗು ಹಾಗೂ ಬಾಳೆಗಿಡಗಳನ್ನು ಧ್ವಂಸ ಮಾಡಿವೆ. ಇದೀಗ ಮತ್ತೆ ಎರಡು ದಿನಗಳ ಬಳಿಕ ದಾಳಿ ಮುಂದುವರಿದಿದೆ. ಮೂರು ತಿಂಗಳ ಹಿಂದೆಯೂ ಅಪಾರ ಕೃಷಿ ನಾಶಕ್ಕೆ ಕಾರಣವಾಗಿತ್ತು.
ಮಂಗಳವಾರ ಹಾನಿ ಪ್ರಮಾಣ ಅಂದಾಜಿಸುವಾಗ ಮೂರರಿಂದ ಐದು ಆನೆಗಳು ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಸಿಬಂದಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:“ಆಯುಷ್ಮಾನ್’ಗೆ ಖಾಸಗಿ ಆಸ್ಪತ್ರೆಗಳನ್ನು ಆಕರ್ಷಿಸಲು ಕ್ರಮ