ಸನ್ಬರ್ನ್ ಸಂಗೀತೋತ್ಸವಕ್ಕೆ ಅನುಮತಿ ನೀಡುವುದಿಲ್ಲ: ಗೋವಾ ಸರಕಾರ
Team Udayavani, Nov 24, 2021, 4:29 PM IST
ಪಣಜಿ: ಗೋವಾದಲ್ಲಿ ಪ್ರಸಕ್ತ ವರ್ಷ ನಡೆಯಲಿದ್ದ ಇಡಿಎಂ ಉತ್ಸವ ಸನ್ಬರ್ನ್ ಸಂಗೀತ ಮಹೋತ್ಸವಕ್ಕೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸರ್ಕಾರ ಬುಧವಾರ ಹೇಳಿದೆ. ಇದರಿಂದಾಗಿ ಕೋಟ್ಯಂತರ ಸಂಗೀತ ಪ್ರೇಮಿಗಳ ಉತ್ಸಾಹಕ್ಕೆ ಮತ್ತು ರಾಜ್ಯ ಸರ್ಕಾರದ ಬೊಕ್ಕಸದ ಆದಾಯಕ್ಕೆ ಕತ್ತರಿ ಬಿದ್ದಂತಾಗಿದೆ.
ರಾಜ್ಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸುದ್ಧಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರಸಕ್ತ ವರ್ಷ ಸನ್ಬರ್ನ್ ಮಹೋತ್ಸವವನ್ನು ಆಯೋಜಿಸಲು ಸರ್ಕಾರ ಅನುಮತಿ ನಿರಾಕರಿಸಿದೆ. ರಾಜ್ಯದಲ್ಲಿ ಕರೋನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದರು.
ಪ್ರಸಕ್ತ ವರ್ಷ ಗೋವಾದಲ್ಲಿ ಸನ್ಬರ್ನ್ ಮಹೋತ್ಸವ ಅನುಮತಿ ನಿರಾಕರಿಸುವ ಫೈಲ್ಗೆ ನಾನು ಈಗಾಗಲೇ ಸಹಿ ಹಾಕಿದ್ದೇನೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ರಾಜ್ಯ ಪ್ರವಾಸೋದ್ಯಮ ಸಚಿವ ಮನೋಹರ್ ಆಜಗಾಂವಕರ್ ಪ್ರತಿಕ್ರಿಯೆ ನೀಡಿ, ರಾಜ್ಯದ ಪ್ರವಾಸೋದ್ಯಮ ದೃಷ್ಠಿಯಿಂದ ರಾಜ್ಯದಲ್ಲಿ ಸನ್ಬರ್ನ್ ಮಹೋತ್ಸವ ಆಯೋಜನೆ ಮುಖ್ಯವಾಗಿತ್ತು. ಆದರೆ ಮುಖ್ಯಮಂತ್ರಿಗಳು ಎಲ್ಲವನ್ನೂ ವಿಚಾರ ಮಾಡಿಯೇ ನಿರ್ಣಯ ತೆಗೆದುಕೊಂಡಿರಬಹುದು. ಸನ್ಬರ್ನ್ ಮಹೋತ್ಸವಕ್ಕೆ ಅನುಮತಿ ನೀಡುವುದು ಅಥವಾ ನಿರಾಕರಿಸುವುದು ಇದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಷಯವಾಗಿದೆ. ಮುಖ್ಯಮಂತ್ರಿಗಳು ಕೈಗೊಂಡ ನಿರ್ಧಾರನ್ನು ನಾವು ಗೌರವಿಸಬೇಕು ಎಂದರು.
ಸನ್ಬರ್ನ್ ಸಂಗೀತ ಮಹೋತ್ಸವವನ್ನು ಡಿಸೆಂಬರ್ 28 ರಿಂದ 30 ರವರೆಗೆ ಗೋವಾದ ವಾಗಾತ್ತೋರ್ ಬೀಚ್ನಲ್ಲಿ ಆಯೋಜಿಸಲಾಗಿತ್ತು. ಈ ವರ್ಷ ಉತ್ಸವದಲ್ಲಿ ವಿಶ್ವಪ್ರಸಿದ್ಧ ಸಂಗೀತಕಾರರಾದ ಬುಲ್ಜೆಯೆ, ಹ್ಯೂಮನ್, ಅರ್ಜುನ್ ವಗಾಕೆ, ಡಾಟ್ಡೆಟ್, ಭಾಗವಹಿಸಲಿದ್ದು, ಪ್ರಸಕ್ತ ವರ್ಷ ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿಯೇ ಮಹೋತ್ಸವ ಆಚರಿಸಲಾಗುವುದು ಎಂದು ಆಯೋಜಕರು ಕಳೆದ ಕೆಲ ದಿನಗಳ ಹಿಂದೆ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿಸದ್ದರು. ಆದರೆ ಇದೀಗ ಈ ಸಂಗೀತ ಮಹೋತ್ಸವವನ್ನು ಸರ್ಕಾರ ರದ್ಧುಗೊಳಿಸಿರುವುದು ಅಭಿಮಾನಿಗಳಿಗೆ ನಿರಾಶರನ್ನಾಗಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ