ದೋಣಿ ಸ್ಥಗಿತಕ್ಕೆ ಮಕ್ಕಳ ಶಿಕ್ಷಣ ಕೂಡ ಸ್ಥಗಿತ..!


Team Udayavani, Nov 25, 2021, 12:06 PM IST

ಮೈಸೂರು ದೋಣಿ ಸಮಸ್ಯೆ

ಎಚ್‌.ಡಿ.ಕೋಟೆ: ತಾಲೂಕಿನ ಕೇರಳ ಗಡಿ ಭಾಗದ ಡಿ.ಬಿ.ಕುಪ್ಪೆಯಲ್ಲಿ ಕಪಿಲಾ ನದಿ ಮೂಲಕ ಜನರನ್ನು ದಾಟಿಸುತ್ತಿದ್ದ ದೋಣಿಗಳ ಸಂಚಾರ ಸ್ಥಗಿತಗೊಂಡ ಕಾರಣ ಶಿಕ್ಷಣ ಕ್ಕಾಗಿ ಕೇರಳಕ್ಕೆ ಹೋಗುತ್ತಿದ್ದ 25ಕ್ಕೂ ಅಧಿಕ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದೆ. ತಾಲೂಕಿನ ಡಿ.ಬಿ.ಕುಪ್ಪೆ ಕೇರಳ- ಕರ್ನಾಟಕ ಗಡಿಭಾಗ.

ಕೇರಳದಿಂದ ಬಹುತೇಕ ಮಂದಿ ಇಲ್ಲಿಗೆ ಆಗಮಿಸಿ ನೆಲೆಯೂರಿದ್ದಾರೆ. ಕೋಟೆ ತಾಲೂಕಿನ ಗಡಿಯಲ್ಲಿ ನೆಲೆಯೂರಿದ್ದರೂ ಭವಿಷ್ಯದ ಹಿತದೃಷ್ಟಿಯಿಂದ ತಮ್ಮ ಮಕ್ಕಳಿಗೆ ಕೇರಳದಲ್ಲಿ ಪ್ರಾಥಮಿಕ ಶಿಕ್ಷಣ ಕೊಡಿಸುತ್ತಿದ್ದಾರೆ. ಡಿ.ಬಿ.ಕುಪ್ಪೆ ಹಾಗೂ ಕೇರಳ ನಡುವೆ ಕಪಿಲಾ ನದಿ ಹರಿಯುತ್ತಿದ್ದು, ಡಿ.ಬಿ.ಕಪ್ಪೆಯಿಂದ ದೋಣಿ ಮೂಲಕ ಕೇವಲ 300 ಮೀಟರ್‌ ಹಾದು ಹೋದರೆ ಕೇರಳದ ಪೆರಿಯಕಲ್ಲೂರು ತಲುಪಬಹುದು.

ಹೀಗಾಗಿ ಡಿ.ಬಿ.ಕುಪ್ಪೆಯಲ್ಲಿ ನೆಲೆಸಿರುವ ಕೇರಳಿಗರು ಪ್ರತಿದಿನ ಮಕ್ಕಳನ್ನು ಕಲಿಕೆಗಾಗಿ ಪೆರಿಯಕಲ್ಲೂರಿಗೆ ಕಳುಹಿಸುವುದು ಹಾಗೂ ಸಾರ್ವಜನಿಕರೂ ಕೂಡ ದೋಣಿ ಮೂಲಕ ನದಿ ದಾಟಿ ಕೇರಳ ತಲುಪುವುದು ಹಿಂದಿನಿಂದಲೂ ನಡೆದು ಬಂದಿದೆ. ಆದರೆ, ಇತ್ತೀಚಿಗೆ ಕೇರಳದಲ್ಲಿ ಕೊರೊನಾ ಹಿನ್ನೆಲೆ‌ ದೋಣಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಸೋಂಕು ಕ್ಷೀಣಿಸಿರುವ ಕಾರಣ ದೋಣಿ ಸಂಚಾರ ಪುನಾರಂಭಿಸಬಹುದು.

ಆದರೆ, ದೋಣಿಗಳಿಗೆ ವಿಮೆ ವ್ಯವಸ್ಥೆ ಮಾಡಿಸಿಲ್ಲದ ಕಾರಣ ಸಂಚಾರಕ್ಕೆ ಅನುಮತಿ ನೀಡಿಲ್ಲ. ದೋಣಿಯಲ್ಲಿ ಶಾಲಾ ಮಕ್ಕಳನ್ನು ಕಪಿಲಾ ನದಿ ದಾಟಿಸುವ ದೋಣಿಗಳಿಗೆ ವಿಮೆಯೇ ಇಲ್ಲ, ನದಿ ದಾಟಿಸಬೇಕಾದ ದೋಣಿಗಳಿಗೆ ವಿಮೆ ಮಾಡಿಸ ಬೇಕು. ಇಲ್ಲದಿದ್ದರೆ ದೋಣಿ ಚಾಲನೆ ಮಾಡುವುದಕ್ಕೆ ಅನುಮತಿ ನೀಡಬಾರದೆಂದು ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನೆಲೆಯಲ್ಲಿ ದೋಣಿಗಳ ಸಂಚಾರ ಸ್ಥಗಿತವಾಗಿದೆ. ಈ ನಡುವೆ ಶಾಲೆಗಳು ಶುರುವಾಗಿ ತಿಂಗಳುಗಳೇ ಉರುಳುತ್ತಿದ್ದರೂ 6ರಿಂದ 10ನೇ ತರಗತಿ ಕಲಿಕೆಗೆ ಕೇರಳಕ್ಕೆ ಹೋಗುತ್ತಿದ್ದ 25ಕ್ಕೂ ಅಧಿಕ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಇದನ್ನೂ ಓದಿ:- ಬೆಲೆ ಏರಿದ್ರೂ ಕಾರ್ಮಿಕರ ದಿನಗೂಲಿ ಏರಿಲ್ಲ

ದೋಣಿ ವ್ಯವಸ್ಥೆ ಇಲ್ಲದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. 300 ಮೀಟರ್‌ ನದಿ ದಾಟದೇ ಬದಲಿ ರಸ್ತೆ ಮಾರ್ಗವಾಗಿ ಪೆರಿಯಕಲ್ಲೂರಿಗೆ ಹೋಗಬೇಕಾದರೆ ಬರೋಬ್ಬರಿ 39 ಕಿ.ಮೀ. ಸಂಚರಿಸಬೇಕು. ಕಳೆದ 2 ವರ್ಷಗಳಿಂದ ಕೊರೊನಾ ಸೋಂಕಿನ ಭೀತಿಯಿಂದ ಮಕ್ಕಳು ಕಲಿಕೆಯಿಂದ ಹಿಂದೆ ಸರಿದಿದ್ದಾರೆ. ಈಗ ಮತ್ತೆ 1 ವರ್ಷ ಶಿಕ್ಷಣದಿಂದ ವಂಚಿತರಾಗುವುದು ಎಷ್ಟು ಸರಿ. ಈಗ ಪ್ರಯಾಣಿಕರನ್ನು ಸಾಗಿಸುವ ದೋಣಿಗಳಿಗೆ ವಿಮೆ ಇಲ್ಲ.

ಹೀಗಾಗಿ ಜೀವಕ್ಕೆ ರಕ್ಷಣೆ ಇಲ್ಲ ಎನ್ನುವುದಾದರೆ ಬಳ್ಳೆ, ಗುಂಡತ್ತೂರು ಹಾಗೂ ಉದೂºರು ಅರಣ್ಯ ಇಲಾಖೆಗೆ ಸೇರಿದ 3 ಬೋಟುಗಳು ಕೆಲಸವಿಲ್ಲದೇ ನಿಲುಗಡೆ ಮಾಡಲಾಗಿದೆ. ಅದೇ ದೋಣಿಗಳನ್ನು ಬೆಳಗ್ಗೆ ಮತ್ತು ಸಂಜೆ ಕಳುಹಿಸಿಕೊಟ್ಟರೆ ಮಕ್ಕಳ ಕಲಿಕೆಗೆ ಅನುಕೂಲವಾಗುತ್ತದೆ. ಅಗತ್ಯ ಎನಿಸಿದರೆ ಪೋಷಕರು ಬೋಟ್‌ಗಳಿಗೆ ಇಂತಿಷ್ಟು ಹಣ ಪಾವತಿಸಲು ಕೂಡ ಸಿದ್ಧರಿದ್ದಾರೆ.

ಬೆಳಗ್ಗೆ, ಸಂಜೆ ಸಂಚರಿಸಲಿ: ಕಪಿಲಾ ನದಿ ದಾಟಿಸುವ ಎಲ್ಲಾ ದೋಣಿಗಳ ವಿಮೆ ಚಾಲನೆಯಲ್ಲಿಲ್ಲ, ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಕನಿಷ್ಠ ಪಕ್ಷ ಬೆಳಗ್ಗೆ ಮತ್ತು ಸಂಜೆ ಶಾಲೆ ವೇಳೆಗೆ ದೋಣಿ ಸಂಚಾರಕ್ಕೆ ಅನುವು ಮಾಡಿಕೊಡುವುದು ಒಳಿತು ಎಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ತಿರುಪತಿ ತಿಳಿಸಿದ್ದಾರೆ.

 ದೋಣಿಗೆ ವಿಮೆ ಮಾಡಿಸಿ ಸಂಚರಿಸಲಿ: ತಹಶೀಲ್ದಾರ್‌ ಕಪಿಲಾ ನದಿ ದಾಟುವ ದೋಣಿಗಳಿಗೆ ವಿಮೆ ಇಲ್ಲ, ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ದೋಣಿಗಳಲ್ಲಿ ಸಾಗುವಾಗ ಅವಘಡ ಸಂಭವಿಸಿದರೆ ಪರಿಹಾರವೂ ದೊರೆಯುವುದಿಲ್ಲ ಎನ್ನುವ ಕಾರಣದಿಂದ ದೋಣಿಗಳಿಗೆ ವಿಮೆ ಮಾಡಿಸಿ ಸಂಚರಿಸಲಿ ಎಂದು ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ದೋಣಿ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಹಶೀಲ್ದಾರ್‌ ನರಗುಂದ್‌ ತಿಳಿಸಿದ್ದಾರೆ.

ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.