ಮನೆ-ಬೆಳೆ ಹಾನಿ ಪರಿಶೀಲಿಸಿದ ನಿಂಬಣ್ಣವರ
ಇತ್ತೀಚಿನ ಮಳೆ ಅವಾಂತರದಿಂದ 184 ಮನೆಗಳಿಗೆ ಹಾನಿಯುಂಟಾಗಿದೆ
Team Udayavani, Nov 25, 2021, 5:49 PM IST
ಕಲಘಟಗಿ: ಇತ್ತೀಚಿಗೆ ಸುರಿದ ಅಕಾಲಿಕ ಮಳೆಯಿಂದ ಮತಕ್ಷೇತ್ರದಾದ್ಯಂತ ಗ್ರಾಮೀಣ ಬದುಕು ಮೂರಾಬಟ್ಟೆಯಾಗಿದೆ. ತಕ್ಷಣ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಸಿ.ಎಂ.ನಿಂಬಣ್ಣವರ ಹೇಳಿದರು.
ತಾಲೂಕಿನ ತುಮ್ರಿಕೊಪ್ಪ, ದಾಸ್ತಿಕೊಪ್ಪ ಗ್ರಾಮಗಳಲ್ಲಿ ಅಕಾಲಿಕ ಮಳೆಗೆ ಮನೆ ಗೋಡೆಗಳು ಕುಸಿದಿರುವುದನ್ನು ಹಾಗೂ ಮಲಕನಕೊಪ್ಪ ಗ್ರಾಮದ ಹೊಲಗಳಲ್ಲಿನ ಬೆಳೆಗಳು ಹಾನಿಯಾಗಿರುವುದನ್ನು ಬುಧವಾರ ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಮನೆಗಳು ಹಾನಿಗೊಳಗಾಗಿದೆ. ಬಹುತೇಕ ಗ್ರಾಮೀಣ ರಸ್ತೆಗಳು ಹಾಳಾಗಿವೆ. ಭತ್ತ, ಗೋವಿನಜೋಳ, ತೋಟಗಾರಿಕಾ ಬೆಳೆಗಳು, ಹತ್ತಿ ಮತ್ತು ಮೆಣಸಿನಕಾಯಿ ರೈತರ ಕೈಗೆ ಸಿಗದೇ ಸಂಕಷ್ಟ ಪರಿಸ್ಥಿತಿ ಎದುರಿಸುವಂತಾಗಿದೆ ಎಂದರು.
ಮನೆ ಹಾನಿ ಹಾಗೂ 5 ಹೆಕ್ಟೇರ್ವೊಳಗಿನ ರೈತರಿಗೆ ಈ ತಿಂಗಳ ಕೊನೆಯೊಳಗೆ ಅವರವರ ಖಾತೆಗೆ ಬೆಳೆ ನಾಶದ ಪರಿಹಾರ ಜಮಾ ಮಾಡಲು ಕ್ರಮ ಜರುಗಿಸಲಾಗುವುದು. ಈ ಹಿಂದಿನ ಹಾಗೂ ಇತ್ತೀಚಿನ ಮಳೆ ಅವಾಂತರದಿಂದ 184 ಮನೆಗಳಿಗೆ ಹಾನಿಯುಂಟಾಗಿದೆ. ಸುಮಾರು 9588 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಿರುವ ಕುರಿತು ಈಗಿನ ಸಮೀಕ್ಷೆಯಲ್ಲಿ ತಿಳಿಸಿದೆ.
ಸಂಬಂಧಿಸಿದ ಅಧಿಕಾರಿಗಳು ಶ್ರಮ ವಹಿಸಿ ಭೇಟಿ ನೀಡಿ ಸಮೀಕ್ಷೆ ಕಾರ್ಯ ಶೀಘ್ರ ಮುಗಿಸಲು ಸೂಚಿಸಿದ್ದು, ಹಾನಿಗೊಳಗಾದವರಿಗೆ ತಕ್ಕ ಮಟ್ಟಿಗೆ ಪರಿಹಾರ ಒದಗಿಸಲು ಶ್ರಮಿಸಲಾಗುವುದು ಎಂದರು. ಶಾಸಕರ ಆಪ್ತ ಸಹಾಯಕ ಮಾರುತಿ ಹಂಚಿನಮನಿ, ಪರಶುರಾಮ ರಜಪೂತ, ಅಶೋಕ ಆಡಿನವರ, ಚಂದ್ರಗೌಡ ಪಾಟೀಲ, ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು, ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಮಾಹಿತಿ ಒದಗಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ