ಗಜಲ್‌ ಮನಸ್ಸು ಅರಳಿಸುವ ಸಾಹಿತ್ಯ ಪ್ರಕಾರ

ಅನೇಕರ ಪ್ರೇರಣೆ ನನಗೆ ಕೃತಿಗಳನ್ನು ಬರೆಯಲು ಸಹಕಾರಿಯಾಗಿದೆ ಎಂದರು .

Team Udayavani, Nov 25, 2021, 3:55 PM IST

ಗಜಲ್‌ ಮನಸ್ಸು ಅರಳಿಸುವ ಸಾಹಿತ್ಯ ಪ್ರಕಾರ

ಬೆಳಗಾವಿ: ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪೃಥ್ವಿ ಫೌಂಡೇಶನ್‌ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಅನುಪಮ ಸೇವಾ ರತ್ನ ಪ್ರಶಸ್ತಿ ಪ್ರದಾನ ಮತ್ತು ಸಾಹಿತಿ ನಾಗೇಶ ನಾಯಕ ಅವರು ರಚಿಸಿದ ಕೃತಿ ಬಿಡುಗಡೆ ಸಮಾರಂಭ ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪೃಥ್ವಿ ಫೌಂಡೇಶನ್‌ ಅಧ್ಯಕ್ಷರಾದ ಡಾ. ಹೇಮಾವತಿ ಸೊನೋಳ್ಳಿ ಮಾತನಾಡಿ ಪ್ರಥ್ವಿ ಫೌಂಡೇಶನ್‌ ಸದಸ್ಯರಿಂದಲೇ ದೇಣಿಗೆ ಸಂಗ್ರಹಿಸಿ ವಿವಿಧ ಸಮಾಜಪರ ಕೆಲಸಗಳನ್ನು ಮಾಡುತ್ತಿದೆ. ದಾನಿಗಳಿಂದ ಬಂದ ಹಣವನ್ನು ಸಹ ನಿಸ್ವಾರ್ಥದಿಂದ ಸೇವೆಗಾಗಿಯೇ ಬಳಸುತ್ತಿದೆ ಎಂದರು.

ಸಾಹಿತಿ ನಾಗೇಶ ನಾಯಕ ಅವರು ಬರೆದ ಆತ್ಮಧ್ಯಾನದ ಬುತ್ತಿ ಗಜಲ್‌ ಗಳ ಸಂಕಲನವನ್ನು ಬಿಡುಗಡೆ ಮಾಡಿದ ಸಾಹಿತಿ ಡಾ. ಪಿ ಜೆ. ಕೆಂಪನ್ನವರ ಮಾತನಾಡಿ ಗಜಲ್‌ ಗಳು ಮನಸ್ಸನ್ನು ಮೋಹಿಸುವ ಮತ್ತು ಅರಳಿಸುವ ಸಾಹಿತ್ಯದ ಪ್ರಕಾರವಾಗಿದೆ. ಧ್ಯಾನ ಮಾಡಿದರೆ ಜ್ಞಾನ ತಾನಾಗಿಯೇ ಬೆಳೆಯುತ್ತೆ ಎಂಬ ನೀತಿಯನ್ನು ಹೇಳುವ ಗಜಲ್‌ ಗಳು ನಿಜಕ್ಕೂ ನಮ್ಮ ಜೀವನಕ್ಕೆ ಸಹಕಾರಿಯಾಗಿವೆ ಎಂದರು.

ಕೃತಿ ಪರಿಚಯಿಸಿ ಮಾತನಾಡಿದ ಸಾಹಿತಿ ಡಾ. ನಿರ್ಮಲಾ ಬಟ್ಟಲ ಅವರು, ನಮ್ಮಲ್ಲಿನ ಆತ್ಮದ ಚಿಂತನೆ ಮಾಡುತ್ತಾ ಧ್ಯಾನದಿಂದ ನಾವು ಪರಿಶುದ್ಧರಾಗೋಣ. ನಾವು ಅಸಹಾಯಕರಿಗೆ ಸಹಾಯ ಮಾಡಿದರೆ ನಾವೇ ದೇವರಾಗಬಹುದು. ಈ ನಿಟ್ಟಿನಲ್ಲಿ ಹಸಿವು, ಮನುಷ್ಯತ್ವ ಮರೆತವರು, ಜಾತೀಯತೆ ದ್ವೇಷ ಕಾರುವವರಿಗೂ ಪ್ರೀತಿ ಬಿತ್ತುವ ತುಡಿತದ ಗಜಲ್‌ ಗಳು ನಮ್ಮಲ್ಲಿ ಪರಿವರ್ತನೆ ಮಾಡುವ ರೀತಿಯಲ್ಲಿ ಮೂಡಿಬಂದಿವೆ ಎಂದು ಹೇಳಿದರು.

ಕೃತಿ ರಚನಾಕಾರ ನಾಗೇಶ ನಾಯಕ ಮಾತನಾಡಿ, ಇತ್ತೀಚಿಗೆ ಕೃತಿಗಳು ಬಿಡುಗಡೆಯಾದ ಜಿಲ್ಲೆಯಲ್ಲಿ ಮಾತ್ರ ಪ್ರಚಾರ ಪಡೆಯುತ್ತಿರುವುದರಿಂದ ಕೃತಿಕಾರರ ಪರಿಚಯ ನಾಡಿಗೆ ಆಗುತ್ತಿಲ್ಲ. ಅದಕ್ಕೆ ವಿವಿಧ ಜಿಲ್ಲೆಗಳಲ್ಲಿ ಕೃತಿಯನ್ನು ಬಿಡುಗಡೆ ಮಾಡುತ್ತಿದ್ದೇನೆ. ಅನೇಕರ ಪ್ರೇರಣೆ ನನಗೆ ಕೃತಿಗಳನ್ನು ಬರೆಯಲು ಸಹಕಾರಿಯಾಗಿದೆ ಎಂದರು .

ಫೌಂಡೇಶನ್‌ ನ ಸಹ ಕಾರ್ಯದರ್ಶಿ ರಶ್ಮಿ ಪಾಟೀಲ ಅವರು ಪ್ರಥ್ವಿ ಪೌಂಡೇಶನ್‌ ಆರು ವರ್ಷಗಳಲ್ಲಿ ನಡೆದು ಬಂದ ದಾರಿಯ ಬಗ್ಗೆ ಮಾಹಿತಿ ನೀಡಿದರು. ಸಾಹಿತಿ ಇಂದಿರಾ ಮೋಟೆಬೆನ್ನೂರು ಸಾಧಕರನ್ನು ಪರಿಚಯಿಸಿದರು. ಪ್ರಥ್ವಿ ಫೌಂಡೇಶನ್‌ ವತಿಯಿಂದ ಸಮಾಜದ ವಿವಿಧ ಸ್ತರಗಳಲ್ಲಿ ಸೇವೆಯನ್ನು ಸಲ್ಲಿಸಿದ ಶಾಂತಾ ಮಸೂತಿ, ಸುಧಾ ಪಾಟೀಲ, ಡಾ. ಶೈಲಜಾ ಕುಲಕರ್ಣಿಯವರಿಗೆ ಅನುಪಮಾ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಉ.ಕರ್ನಾಟಕ ಸಂಪರ್ಕ ಪ್ರತಿನಿಧಿಯಾದ ಶಶಿಧರ ಹಿರೇಮಠ ಅವರು ಈ ಭಾಗದ ಸಾಧಕಿಯರಾದ ಡಾ. ಹೇಮಾವತಿ ಸೊನೋಳ್ಳಿ, ಶಾಂತಾ ಮಸೂತಿ, ಮತ್ತು ಶಶಿಕಲಾ ಯಲಿಗಾರರವರಿಗೆ ಆತ್ಮಶ್ರೀ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಬೆಳಗಾವಿ ನಗರಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಜಿ ರಾಮಯ್ಯ, ಸಾಹಿತಿಗಳಾದ ಹಮೀದಾ ಬೇಗಮ್‌ ದೇಸಾಯಿ , ಜ್ಯೋತಿ ಮಾಳಿ ಸುರೇಖಾ ಮಾನ್ವಿ, ಜ್ಯೋತಿ ಬದಾಮಿ, ಶೆ„ಲಜಾ ಭಿಂಗೆ, ಜ್ಯೋತಿ ಮಾಳಿ, ಶೋಭಾ ತೆಲಸಂಗ, ಮಹಾನಂದ ಪಾರು ಶೆಟ್ಟಿ, ಜಯಶ್ರೀ ನಿರಾಹಾರಿ, ಶೆ„ಲಜಾ ಹಿರೇಮಠ, ಮಹಾದೇವಿ ಹಿರೇಮಠ, ರಶ್ಮಿ ಪಾಟೀಲ, ಲಲಿತಾ ಪರ್ವತರಾವ, ಶ್ರೀರಂಗ ಜೋಶಿ, ಎಂ.ವೈ.ಮೆಣಸಿನಕಾಯಿ, ಶಿವಾನಂದ ತಲ್ಲೂರ, ವೀರಭದ್ರಅಂಗಡಿ, ಮಧುಕರ ಗುಂಡೇನಟ್ಟಿ ಇದ್ದರು. ಹೇಮಾ ಬರಬರಿ ಪ್ರಾರ್ಥಿಸಿದರು. ಶೈಲಜಾ ಹಿರೇಮಠ ಸ್ವಾಗತಿಸಿದರು. ಆಶಾ ಯಮಕನಮರಡಿ ನಿರೂಪಿಸಿದರು ವನೇಶ್ವರಿ ಪೂಜೇರಿ ವಂದಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.