ಪಾಲಿಕೆ, ಆರೋಗ್ಯ ಇಲಾಖೆಯಿಂದ ಬೃಹತ್‌ ವ್ಯಾಕ್ಸಿನ್‌ ಮೇಳ


Team Udayavani, Nov 26, 2021, 3:30 AM IST

ಪಾಲಿಕೆ, ಆರೋಗ್ಯ ಇಲಾಖೆಯಿಂದ ಬೃಹತ್‌ ವ್ಯಾಕ್ಸಿನ್‌ ಮೇಳ

ಮಹಾನಗರ: ನಗರದಲ್ಲಿ ಕೋವಿಡ್‌ ರೋಗ ನಿರೋಧಕ ಲಸಿಕೆ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ “ಬೃಹತ್‌ ವ್ಯಾಕ್ಸಿನ್‌ ಮೇಳ’ ಆರಂಭಿ ಸಲು ಮುಂದಾಗಿದೆ. ಅದರಂತೆ ಇಂದು, ನಾಳೆ (ಶುಕ್ರವಾರ, ಶನಿವಾರ) ನಗರದ ಜನನಿಬಿಡ ಪ್ರದೇಶಕ್ಕೆ ತೆರಳಿ ಲಸಿಕೆ ನೀಡಲು ನಿರ್ಧರಿಸಲಾಗಿದೆ.

ಜಿಲ್ಲೆಯಲ್ಲಿ ಮೊದಲ ಮತ್ತು 2ನೇ ಡೋಸ್‌ ಪಡೆಯಲು ಬಾಕಿ ಇರುವವರ ಮನವೊಲಿಸಲು  ಪಾಲಿಕೆ, ಆರೋಗ್ಯಇಲಾಖೆ ಮುಂದಾಗಿದೆ. ಅದರಂತೆ ನ. 26 ಮತ್ತು 27ರಂದು ಬೆಳಗ್ಗೆಯಿಂದ ಸಂಜೆಯ ವರೆಗೆ ಪಾಲಿಕೆ ವ್ಯಾಪ್ತಿಯ ಮಾಲ್‌ಗ‌ಳು, ಮಾರುಕಟ್ಟೆ, ಅಂಗಡಿಗಳು, ಸೂಪರ್‌ ಮಾರ್ಕೆಟ್‌ ಸಹಿತ ಹೆಚ್ಚು ಜನ ಸೇರುವಲ್ಲಿ ಪ್ರತ್ಯೇಕ ತಂಡ ತೆರಳಿ ಲಸಿಕೆ ಪಡೆಯದವರಿಗೆ ಲಸಿಕೆ ನೀಡಲಿದೆ.

ಮೊದಲ ಡೋಸ್‌ ಮತ್ತು ಎರಡನೇ ಡೋಸ್‌ ಲಸಿಕೆ ಪಡೆಯಲು ಬಾಕಿ ಇರುವವರು ಸ್ಥಳದಲ್ಲಿಯೇ ಲಸಿಕೆ ಪಡೆ ಯಲು ಅವಕಾಶ ಕಲ್ಪಿಸಲಾಗಿದೆ. ಈ ಅಭಿ ಯಾನಕ್ಕೆ ಸಿಗುವ ಜನಸ್ಪಂದನೆಯನ್ನು ಅವಲೋಕಿಸಿ ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಈ ಅಭಿಯಾನ ಮುಂದುವರಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.

ವಾರದಲ್ಲಿ ಅರ್ಧ ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ:

ದ.ಕ. ಜಿಲ್ಲೆಯಲ್ಲಿ ಸದ್ಯ ಲಸಿಕೆ ಅಭಿ ಯಾನಕ್ಕೆ ತುಸು ವೇಗ ದೊರಕಿದೆ. ನ. 15ರಿಂದ 19ರ ವರೆಗೆ ಜಿಲ್ಲೆಯಲ್ಲಿ ಒಟ್ಟು 4,128 ಮಂದಿ ಮೊದಲ ಡೋಸ್‌ ಮತ್ತು 45,352 ಮಂದಿ 2ನೇ ಡೋಸ್‌ ಸೇರಿ ಒಟ್ಟು 49,480 ಮಂದಿ ಲಸಿಕೆ ಪಡೆದಿದ್ದಾರೆ. ಆದರೆ ಮುಂದಿನ 5 ದಿನ ಲಸಿಕೆ ನೀಡಿಕೆ ಮತ್ತಷ್ಟು ಏರಿಕೆಯಾಗಿದ್ದು, 4,598 ಮಂದಿ ಮೊದಲ ಡೋಸ್‌ ಮತ್ತು 60,608 ಮಂದಿ 2ನೇ ಡೋಸ್‌ ಲಸಿಕೆ ಪಡೆದು ಒಟ್ಟು ಐದು ದಿನಗಳಲ್ಲಿ 60,608 ಮಂದಿ ಲಸಿಕೆ ಪಡೆದಿದ್ದಾರೆ.

ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, “ಪಾಲಿಕೆ ವ್ಯಾಪ್ತಿಯ ಎಲ್ಲರೂ ಲಸಿಕೆ ಪಡೆಯಲು ಪ್ರೇರೇಪಿ ಸುವ ಉದ್ದೇಶದಿಂದ ಪಾಲಿಕೆಯಲ್ಲಿ ಈಗ ಪ್ರತ್ಯೇಕ ವಾರ್‌ ರೂಂ ತೆರೆಯಲಾಗಿದೆ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮೊದಲ ಡೋಸ್‌, ಎರಡನೇ ಡೋಸ್‌ ಲಸಿಕೆಗೆ ಬಾಕಿ ಇರುವವರ ಮಾಹಿತಿಯನ್ನು ಸಂಗ್ರಹಿಸಿ ಅಂತಹವರಿಗೆ ವಾರ್‌ ರೂಂನಿಂದ ಕರೆ ಮಾಡಿ ಲಸಿಕೆ ಪಡೆಯಲು ಸೂಚಿಸಲಾಗುತ್ತದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬಂದಿ ಜತೆ ಜಿಲ್ಲೆಯ ವಿವಿಧ ಕಾಲೇಜಿನ ಎನ್ನೆಸ್ಸೆಸ್‌ ವಿದ್ಯಾರ್ಥಿಗಳು ಕೂಡ ಮನೆ  ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸ್ತುದ್ದಾರೆ’ ಎನ್ನುತ್ತಾರೆ.

ಇಂದು ಪಾಲಿಕೆ ಕಚೇರಿಯಲ್ಲಿ  ಚಾಲನೆ :

ಕೋವಿಡ್‌ ನಿರೋಧಕ ಲಸಿಕೆ ಮೇಳವು ನ. 26ರಂದು ಬೆಳಗ್ಗೆ 9ಗಂಟೆಗೆ ಪಾಲಿಕೆ ಕಚೇರಿ ಮುಂಭಾಗದಲ್ಲಿ ಚಾಲನೆಗೊಂಡು, 9.30ಕ್ಕೆ ಒಷಿಯನ್‌ ಪರ್ಲ್ ಬಳಿ ಬರಲಿದೆ. ಈ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳ ಎನ್ನೆಸ್ಸೆಸ್‌ ವಿದ್ಯಾರ್ಥಿಗಳು ಅಲ್ಲಿ ಸೇರಿ ಲಸಿಕೆ ಪಡೆಯಲು ಹುರಿದುಂಬಿಸಲು ಲಸಿಕಾ ಮಿತ್ರ ಗುರುತಿನ ಚೀಟಿ ಜತೆ ವಿವಿಧ ಆಕರ್ಷಕ ಲಸಿಕಾ ಮಿತ್ರನ ವೇಷ ಭೂಷಣದೊಂದಿಗೆ ಕಾಣಿಸಗೊಳ್ಳಲಿದ್ದಾರೆ. ನಗರ ಆರೋಗ್ಯ ಕೇಂದ್ರಗಳಲ್ಲಿ ಬೆಳಗ್ಗೆ 7.30ರಿಂದ ಸಂಜೆ 7.30ರ ವರೆಗೆ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಡಿಎಚ್‌ಒ ತಿಳಿಸಿದ್ದಾರೆ.

ಗುರಿ/   ಮೊದಲ ಡೋಸ್‌/    ಶೇ.

ಆರೋಗ್ಯ ಕಾರ್ಯಕರ್ತರು

52,523 50,926 96.96

ಮುಂಚೂಣಿ ಕಾರ್ಯಕರ್ತರು

15,911 15,911 100

18 ರಿಂದ 44 ವರ್ಷದೊಳಗಿನವರು

9,65,554           7,97,734           82.62

45 ರಿಂದ 60 ವರ್ಷದೊಳಗಿನವರು

4,16,123           4,12,138           99.04

60 ವರ್ಷ ಮೇಲ್ಪಟ್ಟವರು

2,69,000           2,50,642           93.18

ಲಸಿಕೆ ಪಡೆದುಕೊಳ್ಳಲು ಮುಂದೆ ಬನ್ನಿ :

ಲಸಿಕೆ ಪಡೆಯಲು ಬಾಕಿ ಇರುವವರನ್ನು ಮನವೊಲಿಸುವ ಕೆಲಸ ಆರೋಗ್ಯ ಇಲಾಖೆಯಿಂದ ಮಾಡಲಾಗುತ್ತಿದೆ. ಮೆಗಾ ಲಸಿಕೆ ಮೇಳದಲ್ಲಿ ಒಂದು ಲಕ್ಷ ಲಸಿಕೆ ನೀಡುವ ಗುರಿ ಇದೆ. 18 ವರ್ಷ ಮೇಲ್ಪಟ್ಟ ಮೊದಲ ಮತ್ತು ಎರಡನೇ ಡೋಸ್‌ ಪಡೆಯಲು ಬಾಕಿ ಇರುವವರೆಲ್ಲ ಲಸಿಕೆ ಪಡೆದುಕೊಳ್ಳಬೇಕು.-ಡಾ| ಕಿಶೋರ್‌ ಕುಮಾರ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.