ಜಲಾಶಯ ರಕ್ಷಣೆಗೆ ಪ್ರತ್ಯೇಕ ಸಂಸ್ಥೆ


Team Udayavani, Nov 26, 2021, 6:57 AM IST

ಜಲಾಶಯ ರಕ್ಷಣೆಗೆ ಪ್ರತ್ಯೇಕ ಸಂಸ್ಥೆ

ಬೆಂಗಳೂರು: ರಾಜ್ಯದಲ್ಲಿ ರುವ ಎಲ್ಲ ಜಲಾಶಯಗಳನ್ನು ರಕ್ಷಿಸಲು ಪ್ರತ್ಯೇಕ ಸಂಸ್ಥೆ ಸ್ಥಾಪಿಸಲು ಸರಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜರಗಿದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಕೇಂದ್ರ ಸರಕಾರ  ಜಲಾಶಯ ಸಂರಕ್ಷಣ ಸಂಸ್ಥೆ (ಡ್ಯಾಮ್‌ ಸೇಫ್ಟಿ ಆರ್ಗನೈಸೇಶನ್‌) ರಚಿಸಿದ್ದು, ಅದೇ ಮಾದರಿಯಲ್ಲಿ ದೇಶದ ಎಲ್ಲ ರಾಜ್ಯಗಳಲ್ಲೂ ಜಲಾಶಯ ಸಂರಕ್ಷಣೆ ಸಂಸ್ಥೆ ಸ್ಥಾಪಿಸಲು ಕೇಂದ್ರ  ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ನಿರ್ಣಯ ಕೈಗೊಂಡಿದೆ.

ಈ ಸಂಸ್ಥೆ ಮುಖ್ಯ ಎಂಜನಿಯರ್‌ ನೇತೃತ್ವದಲ್ಲಿ  ಕಾರ್ಯ ನಿರ್ವಹಿ ಸಲಿದ್ದು, ಜಲಾಶಯಗಳ ಸಂರಕ್ಷಣೆ ಕುರಿತು ವರ್ಷದಲ್ಲಿ ಕನಿಷ್ಠ ಎರಡು ಬಾರಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಕೆಲಸ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಚಿವರ ನಡುವೆ ಮಾತಿನ ಚಕಮಕಿ:

ಚಿಕ್ಕಬಳ್ಳಾಪುರ ಜಿಲ್ಲೆಗೆ ಆರೋಗ್ಯ ಇಲಾಖೆಯ ಎಲ್ಲ ಯೋಜನೆಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಎನ್ನುವ ಕುರಿತು ಸಚಿವರಾದ ನಾರಾಯಣ ಗೌಡ ಮತ್ತು ಡಾ| ಸುಧಾಕರ್‌ ನಡುವೆ  ಚಕಮಕಿ ನಡೆ ದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಲಜೀವನ್‌ ಮಿಷನ್‌ಗೆ ಅನುದಾನ :

ಜಲಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರು ತಾಲೂಕುಗಳ ಉಳಾಯಿಬೆಟ್ಟು ಮತ್ತು ಇತರ 14 ಹಳ್ಳಿಗಳಿಗೆ (117) ಜನ ವಸತಿಗಳಿಗೆ ಡಿಬಿಒಟಿ ಆಧಾರದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 71.10 ಕೋ.ರೂ. ಯೋಜನೆಗೆ ಹಾಗೂ ಮಂಗಳೂರು ಮತ್ತು ಮೂಡಬಿದಿರೆ ತಾಲೂಕಿನ 39 ಹಳ್ಳಿಗಳ  389 ಜನವಸತಿ ಪ್ರದೇಶಗಳಿಗೆ 145.48 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಪ್ರಮುಖ ನಿರ್ಣಯ :

ಕೃಷಿ ಇಲಾಖೆಯಲ್ಲಿ  164 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಕ್ಕೆ 41 ಕೋ. ರೂ. ಯೋಜನೆಗೆ ಒಪ್ಪಿಗೆ.

ನಬಾರ್ಡ್‌ ಪ್ರಾಯೋಜಿತ ಯೋಜನೆಗಳ ಅಡಿ ಕೃಷಿ ವಿವಿ ಗಳಿಗೆ ಅನುಮೋದಿತ 79.66 ಕೋ. ರೂ. ಸಿವಿಲ್‌ ಕಾಮಗಾರಿ ಕೈಗೊಳ್ಳಲು ಅನುಮೋದನೆ.

 ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಜಮೀನು ಹಂಚಿಕೆ ನೀತಿಗೆ ತಿದ್ದುಪಡಿಗೆ ಒಪ್ಪಿಗೆ.

ಕರ್ನಾಟಕ ಸಿವಿಲ್‌ ಸೇವೆ (ಪರಿ ವೀಕ್ಷಣೆ) ತಿದ್ದುಪಡಿ ನಿಯಮ 2021 ಅನುಮೋದನೆ.

 2022ನೇ ಸಾಲಿನ ಸಾರ್ವತ್ರಿಕ ರಜಾ ದಿನ ಹಾಗೂ ಪರಿಮಿತ ರಜಾ ದಿನಗಳ ನಿಗದಿಗೆ ಒಪ್ಪಿಗೆ.

ಯಲಹಂಕ ತಾಲೂಕಿನ ಹೇಸರಘಟ್ಟ ಹೋಬಳಿಯ ಹುರಳಿಚಿಕ್ಕನಹಳ್ಳಿಯಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ರಾಷ್ಟ್ರೋತ್ಥಾನ ಪರಿಷತ್ತಿಗೆ 9.12 ಎಕರೆ ಜಮೀನು ನೀಡಲು ಒಪ್ಪಿಗೆ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.