ಪರಿಷತ್‌ ಚುನಾವಣೆ: ದ.ಕ. ಸ್ಥಳೀಯಾಡಳಿತ ಕ್ಷೇತ್ರ: 6,040 ಮತದಾರರು, 389 ಮತಗಟ್ಟೆಗಳು


Team Udayavani, Nov 26, 2021, 6:27 AM IST

ಪರಿಷತ್‌ ಚುನಾವಣೆ: ದ.ಕ. ಸ್ಥಳೀಯಾಡಳಿತ ಕ್ಷೇತ್ರ: 6,040 ಮತದಾರರು, 389 ಮತಗಟ್ಟೆಗಳು

ಮಂಗಳೂರು: ವಿಧಾನ ಪರಿಷತ್‌ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಚುನಾವಣ ಕ್ಷೇತ್ರದಲ್ಲಿ ದಕ್ಷಿಣ ಕನ್ನಡದಲ್ಲಿ 3,535 ಹಾಗೂ ಉಡುಪಿ ಜಿಲ್ಲೆಯಲ್ಲಿ 2,505 ಸೇರಿ ಒಟ್ಟು 6,040 ಮತದಾರರಿದ್ದಾರೆ. 389 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ.

ದ.ಕ., ಉಡುಪಿ ಜಿಲ್ಲೆಯಲ್ಲಿ ಈ ಬಾರಿ ತಾಲೂಕು ಪಂಚಾಯತ್‌ ಜಿಲ್ಲಾ ಪಂಚಾಯತ್‌ ಹಾಗೂ ಕೆಲವು ಪುರಸಭೆ, ನಗರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಿಗೆ ಚುನಾವಣೆ ನಡೆಯದಿರುವ ಹಿನ್ನೆಲೆಯಲ್ಲಿ ಸುಮಾರು 400ರಷ್ಟು ಮತಗಳು ಕಡಿಮೆಯಾಗಿವೆ.

ಮತದಾನ ವಂಚಿತರು:

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಶಾಸಕ, ವಿಧಾನ ಪರಿಷತ್‌ ಸದಸ್ಯರು ಸಂಸದರ ಸಂಖ್ಯೆ ಒಟ್ಟು 20. ಆದರೆ ಪ್ರಸ್ತುತ ಚುನಾವಣ ಆಯೋಗದ ನಿಯಮದಂತೆ ಪರಿಷತ್‌ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಲಭಿಸಿರುವುದು 12 ಶಾಸಕರು ಹಾಗೂ ಓರ್ವ ಸಂಸದ ಸೇರಿ 13 ಮಂದಿಗೆ ಮಾತ್ರ. ಉಳಿದ ಏಳು ಮಂದಿ ಅವಕಾಶ ವಂಚಿದ್ದಾರೆ.

ವಿಧಾನಪರಿಷತ್‌ ಚುನಾವಣೆಯಲ್ಲಿ ಸಂಸದರು, ಶಾಸಕರಿಗೆ ಮತದಾನಕ್ಕೆ ಅವಕಾಶ ಇದೆ. ಆದರೆ ಅವರು ತಮ್ಮ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಬೇಕಾಗುತ್ತದೆ. ಈ ಬಾರಿ ತಾಲೂಕು ಹಾಗೂ ಜಿ.ಪಂ. ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಚುನಾವಣೆ ನಡೆದಿಲ್ಲ. ಗ್ರಾ.ಪಂ. ವ್ಯಾಪ್ತಿಯ ಮತಗಟ್ಟೆಯಲ್ಲಿ ಹೆಸರಿದ್ದರೆ ಮತದಾನಕ್ಕೆ ಅವಕಾಶವಿರುವುದಿಲ್ಲ.

ಉಡುಪಿ ಜಿಲ್ಲೆಯಲ್ಲಿ ಅಭ್ಯರ್ಥಿ, ಹಾಲಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಕಾಪು ಶಾಸಕ ಲಾಲಾಜಿ ಮೆಂಡನ್‌, ದ.ಕ.ದಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಮತ್ತು ಪ್ರತಾಪ್‌ಸಿಂಹ ನಾಯಕ್‌ ಹಾಗೂ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರೂ ಈ ಬಾರಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಮತದಾನ ಅವಕಾಶ ವಂಚಿತರು. ಮತದಾನದ ಅವಕಾಶದ ಬಗ್ಗೆ ಚುನಾವಣಾ ಆಯೋಗವನ್ನು ಸಂಪರ್ಕಿಸಲಾಗಿದ್ದು ಅವರ ನಿರ್ದೇಶನವನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕೋಟ ಬಳಿ 62 ಲಕ್ಷ ರೂ. ಮೌಲ್ಯದ ಆಸ್ತಿ:

ಅಫಿದವಿತ್‌ ಪ್ರಕಾರ ಬಿಜೆಪಿ ಅಭ್ಯರ್ಥಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ 26.86 ಲಕ್ಷ ರೂ. ಮೌಲ್ಯದ ಚರಾಸ್ತಿ ಹಾಗೂ 36 ಲಕ್ಷ ರೂ. ಮೌಲ್ಯದ ಸ್ವರ್ಯಾಜಿತ ಸ್ಥಿರಾಸ್ತಿ ಹೊಂದಿದ್ದಾರೆ.ಅವರ ಪತ್ನಿ 7.41 ಲಕ್ಷ ರೂ. ಮೌಲ್ಯದ ಚರಾಸ್ತಿ ಹಾಗೂ 1.37 ಕೋಟಿ ರೂ. ಮೌಲ್ಯದ ಸ್ವರ್ಯಾಜಿತ ಆಸ್ತಿ ಹೊಂದಿದ್ದಾರೆ. ಕೋಟ ಅವರಿಗೆ ಯಾವುದೇ ಸಾಲ ಇಲ್ಲ. ಪತ್ನಿ ಹೆಸರಲ್ಲಿ 40 ಲಕ್ಷ ರೂ. ಗೃಹ ಸಾಲವಿದೆ.

ಮಂಜುನಾಥ ಭಂಡಾರಿ ಬಳಿ 40 ಕೋ. ರೂ. ಆಸ್ತಿ:

ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ಸಲ್ಲಿಸಿರುವ ಅಫಿದಾವತ್‌ ಪ್ರಕಾರ 4.91 ಕೋಟಿ ರೂ. ಮೌಲ್ಯದ ಚರಾಸ್ತಿ, 33.83 ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಸ್ಥಿರಾಸ್ತಿ ಹಾಗೂ 2.03 ಕೋಟಿ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ಹೊಂದಿದ್ದಾರೆ. 12.13 ಕೋಟಿ ರೂ. ಸಾಲ ಇದೆ. ಪತ್ನಿ ಹೆಸರಿನಲ್ಲಿ ಚರಾಸ್ತಿ ಹಾಗೂ ಸ್ಥಿರಾಸ್ತಿ ಸೇರಿ ಸುಮಾರು 7.30 ಕೋಟಿ ರೂ.ಮೌಲ್ಯದ ಆಸ್ತಿ ಇದೆ.

ಇಂದು ಸ್ಪಷ್ಟ ಚಿತ್ರಣ :

ದಕ್ಷಿಣ ಕನ್ನಡ ಸ್ಥಳೀಯಾಡಳಿತ ಚುನಾವಣ ಕ್ಷೇತ್ರದಲ್ಲಿ ನಾಮಪತ್ರ ಹಿಂದೆಗೆದುಕೊಳ್ಳಲು ನ. 26 ಕೊನೆಯ ದಿನಾಂಕವಾಗಿದ್ದು ಚುನಾವಣ ಕಣದ ಸ್ಪಷ್ಟ ಚಿತ್ರಣ ಲಭಿಸಲಿದೆ.

2 ಸ್ಥಾನಗಳಿಗೆ 4 ಪಕ್ಷೇತರರು ಸೇರಿದಂತೆ ಒಟ್ಟು 8 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ನಾಮಪತ್ರ ಪರಿಶೀಲನೆ ವೇಳೆ ಓರ್ವ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿತ್ತು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.