ಮಾನ್ಯುಯಲ್‌ ಸ್ಕ್ಯಾವೆಂಜರ್‌ ಸಮೀಕ್ಷೆ


Team Udayavani, Nov 26, 2021, 2:34 PM IST

ಜಿಲ್ಲಾ ಪಂಚಾಯತ್‌ ಸಮೀಕ್ಷೆ

ಮಂಡ್ಯ: ಜಿಲ್ಲೆಯ ಎಲ್ಲ 233 ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್‌ ಸ್ಕ್ಯಾವೆಂಜರ್‌ಗಳ ಸಮೀಕ್ಷೆ ಡಿ.3ರಿಂದ 8ರವರೆಗೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್‌.ಜೆ.ದಿವ್ಯಾಪ್ರಭು ತಿಳಿಸಿದ್ದಾರೆ. ಐದು ಗ್ರಾಮ ಪಂಚಾಯಿತಿಗಳನ್ನು ಗುಂಪುಗೂಡಿಸಿ ಒಂದು ಪ್ರಧಾನ ಗ್ರಾಮ ಪಂಚಾಯಿತಿಯಾಗಿ ಗುರುತಿಸಲಾಗಿದೆ.

ಹೀಗೆ ಗುರುತಿಸಲಾದ ಪಂಚಾಯಿತಿಯಲ್ಲಿ ಕ್ಯಾಂಪ್‌ ಗಳನ್ನು ನಡೆಸುವ ದಿನಾಂಕ, ಸ್ಥಳ, ಸಮಯ ಮತ್ತು ಇತ್ಯಾದಿ ವಿವರಗಳನ್ನು ಪ್ರಚುರಪಡಿಸಲು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ವೃತ್ತಿಯಲ್ಲಿ ತೊಡಗಿಸಿಕೊಂಡಿರುವವರು ಮಾತ್ರ ಸ್ವಯಂ ಘೋಷಿತ ಅರ್ಜಿಗಳನ್ನು ಕ್ಯಾಂಪ್‌ಗ್ಳಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಯಾರು ಅರ್ಜಿ ಸಲ್ಲಿಸಬಹುದು: ಒಣ ಶೌಚಾಲಯಗಳನ್ನು ಸ್ವತ್ಛಗೊಳಿಸುವವರು, ಅನೈರ್ಮಲ್ಯ ಶೌಚಾಲಯಗಳಿಂದ ಹೊರ ಹೋಗಿ ತೆರದ ಚರಂಡಿಗಳಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವತ್ಛಗೊಳಿಸುವುದು, ಶೌಚಾಲಯದ ಮಲ ಗುಂಡಿಗಳನ್ನು ದೈಹಿಕವಾಗಿ ಸ್ವತ್ಛಗೊಳಿಸುವ ವೃತ್ತಿಯಲ್ಲಿ ತೊಡಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಸಲ್ಲಿಸಬೇಕಾದ ದಾಖಲೆಗಳು: ವ್ಯಕ್ತಿಯ ಪಾಸ್‌ ಫೋರ್ಟ್‌ ಅಳತೆಯ ಭಾವಚಿತ್ರ, ಕುಟುಂಬದ ಸದಸ್ಯರನ್ನು ಒಳಗೊಂಡ ಭಾವಚಿತ್ರ (ಅಳತೆ 6×4), ಬ್ಯಾಂಕ್‌ ಖಾತೆ ಪಾಸ್‌ ಪುಸ್ತಕದ ಮುಖಪುಟದ ಪ್ರತಿ, ಆಧಾರ್‌ ಪ್ರತಿ, ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಕಾರ್ಯ ನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯ ಸ್ಥಳದ ವಿವರವನ್ನು ಒಳಗೊಂಡ ದಾಖಲಾತಿಗಳನ್ನು ಸ್ವಯಂ ಘೋಷಿತ ಅರ್ಜಿಯೊಂದಿಗೆ ಸಲ್ಲಿಸುವುದು.

ಆಕ್ಷೇಪಣೆಗೆ 15 ದಿನ ಕಾಲಾವಕಾಶ: ಆಯಾಯ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಸ್ವೀಕೃತವಾದ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ ನೋಡಲ್‌ ಅಧಿಕಾರಿಯವರು ಪರಿಶೀಲಿಸಿ, ಕ್ರೋಢೀಕರಿಸಿ ಸಿದ್ಧಪಡಿಸಿದ ಪಟ್ಟಿಯನ್ನು ಪ್ರಕಟಿಸಲಿದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳೊಳಗಾಗಿ ಜಿಲ್ಲಾ ನೋಡಲ್‌ ಅಧಿಕಾರಿಯವರಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಗಣತಿದಾರರ ನೇಮಕ: ಮ್ಯಾನ್ಯು ಯಲ್‌ ಸ್ಕ್ಯಾವೆಂಜಿಂಗ್‌ ಸಮೀಕ್ಷೆ ಸಂಬಂಧ ಜಿಲ್ಲಾ ಪಂಚಾಯತ್‌ ಉಪ ಕಾರ್ಯ ದರ್ಶಿ (ಅಭಿವೃದ್ಧಿ) ಅವರನ್ನು ಜಿಲ್ಲಾ ನೋಡಲ್‌ ಅಧಿಕಾರಿ ಯನ್ನಾಗಿ ನೇಮಿಸ ಲಾಗಿದೆ. ಕಾರ್ಯ ನಿರ್ವಾಹಕ ಅಧಿ ಕಾರಿಗಳನ್ನು ಮೇಲ್ವಿಚಾರಕರನ್ನಾಗಿ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್‌ 1/ ಗ್ರೇಡ್‌ 2) ಅಥವಾ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಗಣತಿದಾರರನ್ನಾಗಿ ನೇಮಿಸ ಲಾಗಿದೆ. ಎಲ್ಲ ಗಣತಿದಾರರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಸಮೀಕ್ಷೆ ಬಗ್ಗೆ ಹೆಚ್ಚು ಪ್ರಚಾರ ನೀಡಿ: ಸಮೀಕ್ಷೆ ಕುರಿತು ಜನರಿಗೆ ಮಾಹಿತಿ ಒದಗಿಸಲು ಗ್ರಾಮ ಪಂಚಾಯಿತಿ ಹಂತದಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಸಮೀಕ್ಷೆ ನಡೆಯುವ ಸ್ಥಳ, ಕ್ಯಾಂಪ್‌ ಅಧಿಕಾರಿ ಹೆಸರು, ದಿನಾಂಕ, ಸಮಯ ಮತ್ತು ಕ್ಯಾಂಪ್‌ಗೆ ಒಳಪಡುವ ಗ್ರಾಮ ಪಂಚಾಯಿತಿಗಳ ವಿವರಗಳನ್ನು ಟಾಂಟಾಂ, ಕರಪತ್ರ ವಿತರಣೆ, ಆಟೋ ಮೂಲಕ ಪ್ರಚಾರ, ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್‌, ಫೋಸ್ಟರ್‌ ಅಳವಡಿಕೆ ಸೇರಿದಂತೆ ಇನ್ನಿತರೆ ಚಟುವಟಿಕೆಗಳ ಮೂಲಕ ಪ್ರಚಾರ ನೀಡುವಂತೆ ತಿಳಿಸಿದ್ದಾರೆ.

 45 ಕಡೆ ಶಿಬಿರಗಳ ಆಯೋಜನೆ

ಕೆ.ಆರ್‌.ಪೇಟೆ ತಾಲೂಕಿನ ಕಿಕ್ಕೇರಿ, ಸಂತೇಬಾಚಹಳ್ಳಿ, ಹಿರಿಕಳಲೆ, ಶೀಳನೆರೆ, ಅಕ್ಕಿಹೆಬ್ಟಾಳು, ಬೂಕನಕೆರೆ, ಮದ್ದೂರು ತಾಲೂಕಿನ ಬಿದರಹಳ್ಳಿ, ಭಾರತೀನಗರ, ಅಣ್ಣೂರು, ಗೊರವನಹಳ್ಳಿ, ಹೆಮ್ಮನಹಳ್ಳಿ, ಚಾಮನಹಳ್ಳಿ, ಕೊಪ್ಪ, ಹೊಸಕೆರೆ, ಮಳವಳ್ಳಿ ತಾಲೂಕಿನ ಕಿರುಗಾವಲು, ತಳಗವಾದಿ, ಹಾಡ್ಲಿ, ಹುಸ್ಕೂರು, ಬೆಳಕವಾಡಿ, ಕಲ್ಕುಣಿ, ಹಲಗೂರು, ಹೊಸಹಳ್ಳಿ, ಮಂಡ್ಯ ತಾಲೂಕಿನ ಬಸರಾಳು, ಬಿ.ಹೊಸೂರು, ಬೂದನೂರು, ಸಾತನೂರು, ಹೊಳಲು, ಬೇವುಕಲ್ಲು, ಕೊತ್ತತ್ತಿ, ತಗ್ಗಹಳ್ಳಿ, ನಾಗಮಂಗಲ ತಾಲೂಕಿನ ದೇವಿಹಳ್ಳಿ, ಬಿಂಡಿಗನವಿಲೆ, ಹೊಣಕೆರೆ, ತುಪ್ಪದಮಡು, ದೇವಲಾಪುರ, ಪಾಂಡವಪುರ ತಾಲೂಕಿನ ಟಿ.ಎಸ್‌.ಛತ್ರ, ಮೇಲುಕೋಟೆ, ಚಿನಕುರಳಿ, ಹರವು, ಕೆನ್ನಾಳು, ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ, ಮಹದೇವಪುರ, ಅರಕೆರೆ, ಕೊಡಿಯಾಲ, ಕಿರಂಗೂರು ಗ್ರಾಪಂಗಳಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.