ರೋಟರಿಯಿಂದ ನಿರ್ಗತಿಕರಿಗೆ ಸಹಾಯಹಸ್ತ


Team Udayavani, Nov 26, 2021, 4:56 PM IST

ರೋಟರಿ ಸಹಾಯಹಸ್ತ

ತಿಪಟೂರು: ನಿರ್ಗತಿಕರಿಗೆ, ಅಶಕ್ತರಿಗೆ ನಮ್ಮ ರೋಟರಿ ಸಂಸ್ಥೆ ಕೈಲಾದ ಸಹಾಯ, ಸಹಕಾರ ನೀಡುವ ಮೂಲಕ ಸಮಾಜದಲ್ಲಿ ಇತರರಂತೆ ಬದುಕಲು ಅವಕಾಶ ಕಲ್ಪಿಸಿ ಕೊಡುವ ಕೆಲಸ ಮಾಡುತ್ತಿದೆ ಎಂದು ಬೆಂಗಳೂರು ಸದಾಶಿವ ನಗರದ ರೋಟರಿ ಸಂಸ್ಥೆಯ ನಾಗರಾಜು ತಿಳಿಸಿದರು.

ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಆಡಿಟೋರಿಯಂನಲ್ಲಿ ರೋಟರಿ ಸಂಸ್ಥೆ ಸದಾಶಿವ ನಗರ ಬೆಂಗಳೂರು ಹಾಗೂ ರೋಟರಿ ಸಂಸ್ಥೆ ತಿಪಟೂರು, ಮಾಲ್ಗುಡಿ ಹಾಗೂ ಎಸ್‌ಬಿಐ ಮ್ಯೂಚ್ಯುಯಲ್‌ ಫ‌ಂಡ್‌ ಸಹಯೋಗದೊಂದಿಗೆ ಆಯೋಜಿಸಿದ್ದ ದಿವ್ಯಾಂಗರಿಗೆ ಉಚಿತ ವ್ಹೀಲ್‌ಚೇರ್‌ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಿವ್ಯಾಂಗರಿಗೆ ಅನುಕಂಪಕ್ಕಿಂತ ಸಹಾಯ ಮತ್ತು ಪ್ರೋತ್ಸಾಹದ ಅವಶ್ಯಕತೆ ಇದೆ.

ಇದನ್ನೂ ಓದಿ:- ಬೆಂಗಳೂರಿನಲ್ಲಿ ಭೂಕಂಪನ ಅನುಭವ: ಯಾರೂ ಭಯಪಡಬೇಡಿ ಎಂದ ಸಚಿವ ಆರ್.ಅಶೋಕ್

ಇತರರಂತೆ ಜೀವಿಸಲು ಅವರಿಗೆ ಅವಶ್ಯಕವಾದ ಸಾಧನ ಸಲಕರಣೆಗಳನ್ನು ಉಚಿತವಾಗಿ ನಮ್ಮ ರೋಟರಿ ಕ್ಲಬ್‌ ಮಾಡುತ್ತಾ ಬಂದಿದ್ದು, ಅದರಂತೆ ತಿಪಟೂರು ನಗರದಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಿ ದಿವ್ಯಾಂಗರನ್ನು ಗುರುತಿಸಿ ಉಚಿತವಾಗಿ ವ್ಹೀಲ್‌ಚೇರ್‌ ವಿತರಣೆ ಮಾಡುತ್ತಿದ್ದೇವೆ ಎಂದರು.

ಕೈಲಾದ ಸೇವೆ ಮಾಡಿ: ಸಮಾಜದಲ್ಲಿ ಪ್ರತಿಯೊಬ್ಬರೂ ಸಹೋದರತೆ, ಸಹಕಾರ ಮನೋಭಾವನ್ನು ಬೆಳಸಿಕೊಂಡು ಸಮಾಜದಲ್ಲಿನ ಅಶಕ್ತರು, ನಿರ್ಗತಿಕರಿಗೆ ಕೈಲಾದ ಸೇವೆ ಮಾಡಬೇಕು. ನಮ್ಮ ಸಂಸ್ಥೆಯೂ ಸಹ ಹಲವು ವರ್ಷಗಳಿಂದಲೂ ಇಂತಹ ಸಾಮಾಜಿಕ ಕಳಕಳಿಯಂತ ಕಾರ್ಯ ಮಾಡುತ್ತಿದ್ದು, ಇದಕ್ಕೆ ಪ್ರೋತ್ಸಾಹ ನೀಡುತ್ತಿರುವ ಎಲ್ಲರಿಗೂ ಧನ್ಯವಾದಗಳು ಎಂದರು.

ಭಗವಾನ್‌ ಮಹಾವೀರ್‌ ವಿಕಲಾಂಗ ಸಹಾಯತ ಸಮಿತಿ ಅಧ್ಯಕ್ಷ ಮೋಂಟು ಬೈ ಮಾತನಾಡಿ, ದಿವ್ಯಾಂಗತೆ ಶಾಪ ಅಲ್ಲ. ಕೆಲವರು ಹುಟ್ಟುತ್ತಲೇ ದಿವ್ಯಾಂಗರಾದರೆ ಇನ್ನು ಕೆಲವರು ಕಾರಣಾಂತರಗಳಿಂದ ತಮ್ಮ ಅಂಗಾಂಗಗಳನ್ನು ಕಳೆದುಕೊಳ್ಳುತ್ತಾರೆ. ಇಂತಹವರ ಸೇವೆಗಾಗಿಯೇ ನಮ್ಮ ಸಮಿತಿ ಸದಾ ಕೆಲಸ ಮಾಡಲಿದ್ದು, ನಮ್ಮ ಸಮಿತಿಯಿಂದ 20 ಲಕ್ಷಕ್ಕೂ ಹೆಚ್ಚು ದಿವ್ಯಾಂಗರಿಗೆ ಕೃತಕ ಕಾಲು, ಕೈ ಹಾಗೂ ವ್ಹೀಲ್‌ಚೇರ್‌ ವಿತರಣೆ ಮಾಡಲಾಗಿದೆ ಎಂದರು.

ವ್ಹೀಲ್‌ಚೇರ್‌ ವಿತರಣೆ: 160 ದಿವ್ಯಾಂಗರಿಗೆ ವ್ಹೀಲ್‌ ಚೇರ್‌ ವಿತರಣೆ ಮಾಡಲಾಯಿತು. ಕಲ್ಪತರು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜು, ಕಾರ್ಯದರ್ಶಿ ಎಂ.ಆರ್‌.ಸಂಗಮೇಶ್‌, ಬಾಗೇಪಲ್ಲಿ ನಟರಾಜು, ಭಗವಾನ್‌ ಮಹಾವೀರ್‌ ವಿಕಲಾಂಗ ಸಹಾಯತ ಸಮಿತಿಯ ಕಮಲ್‌ ಮೆಹ್ತಾ, ಮಹದೇವ್‌ ಜೈನ್‌, ಲಲಿತ್‌ ಜೈನ್‌, ರೋಟರಿ ಸುರೇಶ್‌, ಮಹದೇವ್‌ ಪ್ರಸಾದ್‌, ತಿಪಟೂರು ರೋಟರಿ ಸಂಸ್ಥೆ ಅಧ್ಯಕ್ಷ ಅಶೋಕ್‌ಕುಮಾರ್‌, ಮಾಜಿ ಅಧ್ಯಕ್ಷರಾದ ವಿಜಯಕುಮಾರಿ, ಅರುಣ್‌ಕುಮಾರ್‌, ತೋಂಟದಾರ್ಯ, ಅಪ್ಪೇಗೌಡಸ್ವಾಮಿ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.