ಅಂತಾರಾಜ್ಯ ಗಾಂಜಾ ಮಾರಾಟಗಾರರ ಸೆರೆ
Team Udayavani, Nov 26, 2021, 6:06 PM IST
ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಅಂತಾರಾಜ್ಯ ಗಾಂಜಾ ಮಾರಾಟಗಾರರನ್ನು ಬಂಧಿಸುವಲ್ಲಿ ವೇಮಗಲ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಎಸ್ಪಿ ಡೆಕ್ಕಾ ಕಿಶೋರ್ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿ.ಎಲ್. ರಮೇಶ್ ನೇತೃತ್ವದಲ್ಲಿ ವೇಮಗಲ್ ಇನ್ಸ್ಪೆಕ್ಟರ್ ಶಿವರಾಜ್ ಅವರ ತಂಡ ಮುಖ್ಯಪೇದೆ ಆರ್.ಸುಧಾಕರ್, ಜಗದೀಶ್, ಪೇದೆಗಳಾದ ಬಾಲಾಜಿ, ಮಹೇಶ್, ಪ್ರಭು, ಚಾಲಕ ನಾಗೇಶ್ ಅವರ ತಂಡವು ಆಂಧ್ರದಿಂದ ತಮಿಳುನಾಡಿಗೆ ಗಾಂಜಾ ಸಾಗಿಸಿಕೊಂಡು ಅಲ್ಲಲ್ಲಿ ಮಾರಾಟ ಮಾಡುತ್ತಿದ್ದರು.
ಇದನ್ನೂ ಓದಿ;- ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್
ಇಬ್ಬರ ಬಂಧನ: ನರಸಾಪುರ ಕೈಗಾರಿಕಾ ಪ್ರದೇಶದ ಜೋಡಿ ಕೃಷ್ಣಾಪುರ ಬಳಿ ಮಾಲೂರು ರಸ್ತೆಯಲ್ಲಿ ತೆರಳುತ್ತಿದ್ದ ಆರೋಪಿಗಳ ಖಚಿತ ಮಾಹಿತಿ ಪಡೆದುಕೊಂಡು ಬೆನ್ನಟ್ಟಿದ ಪೊಲೀಸರು ಆರೋಪಿಗಳಿಂದ 5 ಲಕ್ಷ ರೂ.ನ 20 ಕೇಜಿ ಗಾಂಜಾ ವಶಪಡಿಸಿಕೊಂಡು ತಮಿಳುನಾಡು ಮೂಲದ ಉತ್ತಮಪಾಳಯಂ ಗ್ರಾಮದ ಮಾರೀಶ್ವರನ್ (27) ಮತ್ತು ತಮಿಳುನಾಡು ಮೂಲದ ಕಟ್ಟಮಡುವು ಗ್ರಾಮದ ಸಮಯ್ಯ ಶ್ಯಾಮ್ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಉತ್ತಮ ಕಾರ್ಯ ಚಟುವಟಿಕೆ: ವೇಮಗಲ್ ಇನ್ಸ್ಪೆಕ್ಟರ್ ಶಿವರಾಜ್ ಠಾಣೆಗೆ ಬಂದಾಗಿನಿಂದ ಉತ್ತಮ ಕಾರ್ಯ ಚಟುವಟಿಕೆಗಳು ನಡೆಯುತ್ತಿದೆ. ಠಾಣೆಗೆ ಬರುವ ಎಲ್ಲಾ ದೂರು ಪ್ರಕರಣಗಳಲ್ಲಿ ಒಂದರ ಮೇಲೊಂದರಂತೆ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಡೆಕ್ಕಾ ಕಿಶೋರ್ಬಾಬು ಶ್ಲಾಘಿಸಿದ್ದಾರೆ. ಇನ್ಸ್ಪೆಕ್ಟರ್ ಶಿವರಾಜ್, ಮುಖ್ಯಪೇದೆ ಆರ್.ಸುಧಾಕರ್, ಜಗದೀಶ್, ನಾಗರಾಜ್, ಪೇದೆಗಳಾದ ಬಾಲಾಜಿ, ಮಹೇಶ್, ಪ್ರಭು, ಮರೇಗೌಡ, ವೇಣುಗೋಪಾಲ್, ಕೃಷ್ಣಮೂರ್ತಿ, ಚಾಲಕ ನಾಗೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ