ಶಿಕ್ಷಕರ ಶ್ರದ್ಧೆಯಿಂದ ವಿದ್ಯಾರ್ಥಿಗಳಿಗೆ ಯಶಸ್ಸು
ರಸ ಪ್ರಶ್ನೆ ಸ್ಪರ್ಧೆ ಮತ್ತು ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
Team Udayavani, Nov 26, 2021, 6:25 PM IST
ಹಾವೇರಿ: ಶಿಕ್ಷಕರು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸು ಲಭಿಸುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚು ಆದ್ಯತೆ ನೀಡಬೇಕೆಂದು ಡಿಡಿಪಿಐ ಅಂದಾನೆಪ್ಪ ವಡಗೇರಿ ಹೇಳಿದರು.
ತಾಲೂಕಿನ ಚಿಕ್ಕಲಿಂಗದಹಳ್ಳಿ ಬಸವೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೇತ್ರಶಿಕ್ಷಣಾ ಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕು ಕನ್ನಡ ಭಾಷಾ ಶಿಕ್ಷಕರ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಿರಿನುಡಿ ರಸ ಪ್ರಶ್ನೆ ಸ್ಪರ್ಧೆ ಮತ್ತು ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ನವೆಂಬರ್ ಕನ್ನಡ ಮಾಸಾಚರಣೆ ಅಂಗವಾಗಿ ತಾಲೂಕಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸುವ ಈ ಸ್ಪರ್ಧೆ ಪರೀಕ್ಷಾ ದೃಷ್ಟಿಯಿಂದ ಬಹಳ ಉತ್ತಮವಾಗಿದೆ. ಮಕ್ಕಳಲ್ಲಿ ಕನ್ನಡ ಭಾಷಾ ಜ್ಞಾನ ಮೂಡಿಸುತ್ತದೆ ಎಂದರು.
ಡಯಟ್ ಪ್ರಾಚಾರ್ಯ ಆರ್.ಎಸ್.ಮುಳ್ಳೂರು,ಬಿಇಒ ಎಂ.ಎಚ್.ಪಾಟೀಲ ಮಾತನಾಡಿದರು. ರಸಪ್ರಶ್ನೆ ಸ್ಪರ್ಧೆಯಲ್ಲಿ ರೋಷನ್ ನದಾಫ್ ಪ್ರಥಮ, ಪ್ರೀತಿ ಕೋರಿ ದ್ವಿತೀಯ ಹಾಗೂ ಸಂಗೀತಾ ತೋಟಗೇರ ತೃತೀಯ ಸ್ಥಾನ ಪಡೆದರು. ಇದೇ ವೇಳೆ ಶಿಕ್ಷಕರಿಗೆ ಉಪಯುಕ್ತ ಅಕ್ಷರ ಯೂ ಟ್ಯೂಬ್ ಚಾನೆಲ್ಗೆ ಚಾಲನೆ ನೀಡಲಾಯಿತು. ಈರಪ್ಪ ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸಿ.ಎಸ್.ಭಗವಂತಗೌಡ್ರ, ಮಂಜುನಾಥ, ಎಂ.ಎಸ್. ಕೆಂಚನಗೌಡ್ರ, ತಾಲೂಕು ಅಧ್ಯಕ್ಷ ಬಸವರಾಜ ಕೋರಿ, ಎನ್.ಎಚ್.ಹೆಬ್ಟಾಳ ಇದ್ದರು. ಉಷಾ ಬಗಾಡೆ ಸ್ವಾಗತಿಸಿ, ರವೀಂದ್ರ ಮಳಗಿ ವಂದಿಸಿ, ಪಂಚಾಕ್ಷರಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ