ಮುಗಿಯದ ಕೋವಿಡ್‌ ರೂಪಾಂತರ ಪರ್ವ!


Team Udayavani, Nov 27, 2021, 6:30 AM IST

ಮುಗಿಯದ ಕೋವಿಡ್‌ ರೂಪಾಂತರ ಪರ್ವ!

ವಿಶ್ವಾದ್ಯಂತ ಕೊರೊನಾ ಸಾಂಕ್ರಾಮಿಕವು ಇನ್ನೇನು ನಿಯಂತ್ರಣಕ್ಕೆ ಬರ ತೊಡಗಿತು ಎನ್ನುವಾಗಲೇ ಕೊರೊನಾ ವೈರಸ್‌ ಹೊಸ ಹೊಸ ಅವತಾರ ಗಳೊಂದಿಗೆ ವಿವಿಧ ದೇಶಗಳಲ್ಲಿ ಜನರನ್ನು ಬಾಧಿಸತೊಡಗಿದೆ.

ಭಾರತದಲ್ಲಿ ಕೊರೊನಾದ ಎರಡನೇ ಅಲೆ ನಿಯಂತ್ರಣಕ್ಕೆ ಬಂದು ಎಲ್ಲ ಕ್ಷೇತ್ರಗಳಲ್ಲಿ ಚಟುವಟಿಕೆಗಳು ಪುನರಾರಂಭಗೊಂಡು ಸಹಜಸ್ಥಿತಿಗೆ ಮರಳುತ್ತಿವೆ. ಈಗ ವಿದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರಗಳು ಕಾಣಿಸಿಕೊಳ್ಳುವ ಮೂಲಕ ಮತ್ತೆ ಜನರನ್ನು ಆತಂಕಕ್ಕೀಡು ಮಾಡಿದೆ.

ಯುರೋಪ್‌ನ ದೇಶಗಳಲ್ಲಿ ಕೊರೊನಾ ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲವಾಗಿದ್ದು ಸದ್ಯ ವಿಶ್ವದೆಲ್ಲೆಡೆಯ ಸೋಂಕು ಪ್ರಕರಣಗಳ ಪೈಕಿ ಶೇ. 62ರಷ್ಟು ಪ್ರಕರಣಗಳು ಈ ದೇಶಗಳಲ್ಲಿಯೇ ಇವೆ. ಇದರ ಜತೆಯಲ್ಲಿ ವಿಶ್ವದ ಇನ್ನೂ ಅನೇಕ ದೇಶಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿಢೀರನೇ ಹೆಚ್ಚಲಾರಂಭಿಸಿದ್ದು ಸಹಜವಾಗಿಯೇ ವೈದ್ಯಕೀಯ ಲೋಕಕ್ಕೆ ಬಲುದೊಡ್ಡ ಸವಾಲಾಗಿ ಪರಿಣಮಿಸಿದೆ.

ಏತನ್ಮಧ್ಯೆ ಕಳೆದೊಂದು ವಾರದಿಂದೀಚೆಗೆ ದಕ್ಷಿಣ ಆಫ್ರಿಕಾ ಮತ್ತು ಆಫ್ರಿ ಕಾದ ದಕ್ಷಿಣ ಭಾಗದ ದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ತಳಿ ಬಿ.1.1. 529 ಅನ್ನು ವೈದ್ಯಕೀಯ ತಜ್ಞರು ಪತ್ತೆಹಚ್ಚಿದ್ದು ಇದು ಈವರೆಗೆ ಪತ್ತೆಯಾದ ತಳಿಗಳಿಗಿಂತ ಹೆಚ್ಚು ಪ್ರಭಾವಶಾಲಿ ಮತ್ತು ಅಧಿಕ ಪ್ರಸರಣ ಸಾಮರ್ಥ್ಯ ಉಳ್ಳದ್ದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‌ಶೀಟ್‌ಗೆ ಅನುಮತಿ

ದಕ್ಷಿಣ ಆಫ್ರಿಕಾ ಮತ್ತು ಬೋಟ್ಸ್‌ ವಾನಾದಲ್ಲಿ ಮೊದಲ ಬಾರಿಗೆ ಪತ್ತೆಯಾದ ಈ ಹೊಸ ತಳಿ 50ಕ್ಕೂ ಅಧಿಕ ರೂಪಾಂತರಗಳನ್ನು ಹೊಂದಬಲ್ಲವಾಗಿದೆ. ಕಳೆದ ಕೆಲವು ದಿನ ಗಳಿಂದೀಚೆಗೆ ಆಫ್ರಿಕಾದ ದಕ್ಷಿಣ ಭಾಗದ ಹಲವಾರು ದೇಶಗಳಲ್ಲಿ ಈ ರೂಪಾಂ ತರಿ ಕಾಣಿಸಿಕೊಂಡಿದ್ದು ಕ್ಷಿಪ್ರಗತಿಯಲ್ಲಿ ಹರಡತೊಡಗಿದೆ. ಹಾಂ ಕಾಂಗ್‌ ನಲ್ಲೂ ಈ ಹೊಸ ಪ್ರಭೇದದ ಕೊರೊನಾ ವೈರಸ್‌ ಪ್ರಕರಣಗಳು ದಾಖಲಾಗಿವೆ.

ವೈದ್ಯಕೀಯ ತಜ್ಞರು ಈ ತಳಿಯ ಮೂಲ, ಪ್ರಭಾವ, ಪ್ರಸರಣ ಸಾಮರ್ಥ್ಯ ಆದಿಯಾಗಿ ಆಮೂಲಾಗ್ರ ಅಧ್ಯಯನ ಮತ್ತು ಸಂಶೋಧನೆ ಯಲ್ಲಿ ನಿರತ ರಾಗಿದ್ದಾರೆ. ಇವರ ಪ್ರಾಥಮಿಕ ಸಂಶೋಧನೆಯ ವರದಿಗಳ ಪ್ರಕಾರ ಈ ಹೊಸ ರೂಪಾಂತರಿ ಡೆಲ್ಟಾ ವೈರಸ್‌ಗಿಂತಲೂ ಹೆಚ್ಚು ಮಾರಕವಾಗಿದ್ದು ತೀವ್ರ ತೆರನಾದ ಲಕ್ಷಣಗಳೂ ಕಂಡುಬಂದಿವೆ. ಅತ್ಯಂತ ಆತಂಕಕಾರಿ ವಿಷಯ ಎಂದರೆ ಕೊರೊನಾ ವೈರಸ್‌ನ ಹೊಸ ರೂಪಾಂತರಿಯು ಕೊರೊನಾ ನಿರೋಧಕ ಲಸಿಕೆಗೂ ಪ್ರತಿರೋಧ ಒಡ್ಡಬಲ್ಲದು ಮಾತ್ರವಲ್ಲದೆ ಗಾಳಿಯ ಮೂಲಕವೂ ಹರಡಬಲ್ಲದಾಗಿದೆ. ಸೂಕ್ತ ಚಿಕಿತ್ಸೆ ಪಡೆದುಕೊಳ್ಳದ ಎಚ್‌ಐವಿ-ಏಡ್ಸ್‌ ಬಾಧಿತರಲ್ಲಿ ಹೊಸ ಕೊರೊನಾ ರೂಪಾಂತರಿಯು ಕಾಣಿಸಿಕೊಂಡಿದೆ ಎಂದು ತಜ್ಞರು ಹೇಳಿರುವರಾದರೂ ಇದಿನ್ನೂ ಖಚಿತವಾಗಿಲ್ಲ.

ಕೊರೊನಾ ಸೋಂಕಿನ ಹೊಸ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಬ್ರಿಟನ್‌, ಸಿಂಗಾಪುರ, ಇಸ್ರೇಲ್‌, ಜರ್ಮನಿ, ಇಟಲಿ ಸಹಿತ ಕೆಲವೊಂದು ರಾಷ್ಟ್ರಗಳು ಈಗಾಗಲೇ ದಕ್ಷಿಣ ಆಫ್ರಿಕಾ ಸಹಿತ ಅಫ್ರಿಕಾದ ಏಳು ರಾಷ್ಟ್ರಗಳೊಂದಿಗಿನ ಸಂಪರ್ಕವನ್ನು ಕಡಿತಗೊಳಿಸಲು ನಿರ್ಧರಿಸಿವೆಯಲ್ಲದೆ ಹಲವಾರು ನಿರ್ಬಂಧಗಳನ್ನೂ ಹೇರಿವೆ. ಇದೇ ವೇಳೆ ಭಾರತವೂ ದಕ್ಷಿಣ ಆಫ್ರಿಕಾ, ಹಾಂಕಾಂಗ್‌ ಮತ್ತು ಬೋಟ್ಸ್‌ವಾನಾಗಳಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇರಿಸುವಂತೆ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ.

ಕಳೆದೆರಡು ವರ್ಷಗಳಿಂದ ಇಡೀ ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್‌ ರೂಪಾಂತರ ಹೊಂದುತ್ತಲೇ ಇದ್ದು ಜನರನ್ನು ಪದೇ ಪದೆ ಆತಂಕದ ಮಡುವಿಗೆ ತಳ್ಳುತ್ತಿದೆ. ಕೊರೊನಾ ಸೋಂಕು ಮತ್ತು ಲಸಿಕೆ ನೀಡಿಕೆಯ ಅಂಕಿಅಂಶಗಳು ಏನೇ ಇದ್ದರೂ ಈ ವೈರಸ್‌ ಇನ್ನೂ ಜನರಿಂದ ದೂರವಾಗಿಲ್ಲ ಎಂಬುದನ್ನು ಜನರು ಮತ್ತು ಸರಕಾರ ಮೊದಲು ಅರ್ಥ ಮಾಡಿಕೊಳ್ಳಬೇಕು. ಜನರು ಸ್ವಯಂ ನಿಯಂತ್ರಣ ಮಾರ್ಗವನ್ನು ಮುಂದುವರಿಸದೇ ಹೋದಲ್ಲಿ ಕೊರೊನಾ ವೈರಸ್‌ “ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷೀಲಿ’ ಎಂಬಂತೆ ನಮ್ಮ ಬೆನ್ನು ಬಿಡಲಾರದು.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.