ಕಾಫಿನಾಡಲ್ಲಿ ಕೋವಿಡ್‌ ಸೋಂಕು ಪ್ರಮಾಣ ಇಳಿಕೆ


Team Udayavani, Nov 27, 2021, 1:03 PM IST

ಕಾಫಿನಾಡಲ್ಲಿ ಕೋವಿಡ್‌ ಸೋಂಕು ಪ್ರಮಾಣ ಇಳಿಕೆ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪ್ರಾರಂಭದಲ್ಲಿ ಶೇ.28ರಷ್ಟಿದ್ದ ಕೋವಿಡ್‌ ಸೋಂಕು ಶುಕ್ರವಾರ ಶೇ.0.3ಕ್ಕೆ ಇಳಿಕೆಯಾಗಿದೆ. ಮೂರ್ನಾಲ್ಕು ತಿಂಗಳಿಂದ ಕೋವಿಡ್‌ ಕಾರಣದಿಂದ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲ, ಕೋವಿಡ್‌ ಸೋಂಕು ಜಿಲ್ಲೆಯಲ್ಲಿ ಕ್ಷೀಣಿಸಿದ್ದು, ಜಿಲ್ಲೆಯ ಜನತೆಯಲ್ಲಿ ಸಂತಸ ಮೂಡಿಸಿದೆ.

ಶುಕ್ರವಾರ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಉಮೇಶ್‌ ಸುದ್ದಿಗಾರರಿಗೆ ಮಾಹಿತಿ ನೀಡಿ, ಇಲ್ಲಿಯವರೆಗೂ ಮೊದಲ ಹಂತದ ಲಸಿಕೆ ವಿತರಣೆ ಶೇ.100 ರಷ್ಟು ಮತ್ತು ಎರಡನೇ ಹಂತದ ಲಸಿಕೆ ವಿತರಣೆ ಶೇ.70ರಷ್ಟು ಪ್ರಗತಿ ಸಾಧಿಸಲಿದೆ. ಲಸಿಕೆ ವಿತರಣೆಯಲ್ಲಿ ಜಿಲ್ಲೆ ರಾಜ್ಯದಲ್ಲಿ 10-12ನೇ ಸ್ಥಾನದಲ್ಲಿದೆ ಎಂದರು. ಮೊದಲ ಹಂತದ ಲಸಿಕೆ ವಿತರಣೆಯಲ್ಲಿ ಜಿಲ್ಲೆ ಶೇ.90ರಷ್ಟು ಪ್ರಗತಿ ಸಾಧಿ ಸಿದೆ. 2ನೇ ಹಂತದ ಲಸಿಕೆ ವಿತರಣೆಯಲ್ಲಿ ಶೇ.57ರಷ್ಟು ಪ್ರಗತಿ ಸಾಧಿಸಿದ್ದು, ಜಿಲ್ಲೆಯಲ್ಲಿ ಪ್ರತಿ ದಿನ 1000 ಜನರನ್ನು ಪರೀಕ್ಷೆಗೆ ಒಳಪಡಿಸುವಂತೆ ಆರೋಗ್ಯ ಇಲಾಖೆ ಗುರಿ ನಿಗದಿಪಡಿಸಿದ್ದು, ಜಿಲ್ಲೆಯಲ್ಲಿ ಪ್ರತಿ ದಿನ 1,400 ಜನರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಪ್ರತಿ ಆಸ್ಪತ್ರೆಯಲ್ಲಿ ಕಾಲ್‌ ಸೆಂಟರ್‌ ತೆರೆಯಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆಗೆ ತೆರಳಿ ಲಸಿಕೆ ನೀಡುತ್ತಿದ್ದಾರೆ. ಲಸಿಕೆ ಪಡೆಯುವುದರಿಂದ ಆಗುವ ಪ್ರಯೋಜನಗಳನ್ನು ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಗುತ್ತಿದೆ. ಇವರಿಂದ ಪೋಷಕರ ಮನವೊಲಿಸುವ ಕಾರ್ಯ ನಡೆಯುತ್ತಿದೆ ಎಂದರು. ಈ ಹಿಂದೆ ಮೂಡಿಗೆರೆ ತಾಲೂಕಿನ 2 ಶಾಲಾ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆ ನಂತರ ಇಲ್ಲಿಯವರೆಗೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಸೋಂಕು ಕಾಣಿಸಿಕೊಂಡಿಲ್ಲ ಎಂದು ತಿಳಿಸಿದರು.

ಕೋವಿಡ್‌ ಪ್ರಾರಂಭದ ದಿನಗಳಲ್ಲಿ ಜಿಲ್ಲೆಯಲ್ಲಿ ಶೇ.28ರಷ್ಟು ಸೋಂಕು ಕಾಣಿಸಿಕೊಂಡಿತ್ತು. ಈಗ ಶೇ.0.3ಕ್ಕೆ ಇಳಿಕೆಯಾಗಿದೆ. ಕೋವಿಡ್‌ ನಿಂದ ಮೂರ್ನಾಲ್ಕು ತಿಂಗಳಲ್ಲಿ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲ. ಇದು ಸಂತೋಷದಾಯಕ ವಿಚಾರವಾಗಿದ್ದು, ಇದುವರೆಗೂ ಒಟ್ಟು 395 ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಸದ್ಯ 48 ಸಕ್ರಿಯ ಪ್ರಕರಣಗಳಿದ್ದು 40 ಜನರನ್ನು ಹೋಮ್‌ ಐಸೋಲೇಶನ್‌ಗೆ ಒಳಪಡಿಸಲಾಗಿದೆ. 8 ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಔಷಧ ಕೊರತೆ ಇಲ್ಲ. 3ನೇ ಅಲೆ ಮಕ್ಕಳನ್ನು ಹೆಚ್ಚು ಬಾ ಧಿಸಲಿದೆ ಎಂದು ಹೇಳಲಾಗುತ್ತಿತ್ತು. ಜಿಲ್ಲೆಯ ಮಕ್ಕಳಲ್ಲಿ ಸೋಂಕು ಅಷ್ಟಾಗಿ ಪತ್ತೆಯಾಗಿಲ್ಲ ಎಂದರು.

ಜಿಲ್ಲಾಸ್ಪತ್ರೆಯಲ್ಲಿ 1,000 ಲೀ. ಆಕ್ಸಿಜನ್‌ ಪ್ಲಾಂಟ್‌ ಮತ್ತು ಆಕ್ಸಿಜನ್‌ ಉತ್ಪಾದನಾ ಘಟಕ ಕಾರ್ಯಾರಂಭ ಮಾಡಿವೆ. ಕಡೂರು, ಮೂಡಿಗೆರೆ, ಶೃಂಗೇರಿ ತಾಲೂಕಿನಲ್ಲಿ 500ಲೀ. ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವನ್ನು ತೆರೆಯಲಾಗಿದೆ. ತರೀಕೆರೆ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಆಕ್ಸಿಜನ್‌ ಉತ್ಪಾದನಾ ಘಟಕ ತೆರೆಯಲು ಸಿವಿಲ್‌ ಕಾಮಗಾರಿ ಪೂರ್ಣಗೊಂಡಿದೆ. ಯಂತ್ರೋಪಕರಣ ಅಳವಡಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಶೃಂಗೇರಿ ತಾಲೂಕಿನಲ್ಲಿ 100 ಹಾಸಿಗೆ ಆಸ್ಪತ್ರೆ ನಿರ್ಮಾಣ ಸಂಬಂಧ ಜಿಲ್ಲಾ ಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗತ್ಯ ಜಾಗ ನೀಡಿದರೆ ಕಟ್ಟಡ ನಿರ್ಮಾಣಕ್ಕೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಟಾಪ್ ನ್ಯೂಸ್

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.