ಲಸಿಕೆ ಹಾಕಲು ಬಂದ ಆರೋಗ್ಯ ಸಿಬ್ಬಂದಿಯನ್ನು ಕಂಡು, ಮೈಯಲ್ಲಿ ದೇವರು ಬಂದಂತೆ ನಟಿಸಿದ ಭೂಪ.!
Team Udayavani, Nov 27, 2021, 1:19 PM IST
ಕುಷ್ಟಗಿ: ಮನೆ ಮನೆಗೆ ಕೋವಿಡ್ ಲಸಿಕಾ ಮೇಳ ಹಿನ್ನೆಲೆಯಲ್ಲಿ ಆರೋಗ್ಯ ಸಿಬ್ಬಂದಿ ವ್ಯಕ್ತಿಯೊಬ್ಬರಿಗೆ ಲಸಿಕೆ ಹಾಕಲು ಮುಂದಾದಾಗ ವ್ಯಕ್ತಿಯೊಬ್ಬ ಮೈಯಲ್ಲಿ ದೇವರು ಬಂದಂತೆ ನಟಿಸಿ, ಲಸಿಕೆ ಹಾಕಲು ಬಂದ ಆರೋಗ್ಯ ಸಿಬ್ಬಂದಿಯನ್ನು ಯಾಮಾರಿಸಿದ ಘಟನೆ ಕುಷ್ಟಗಿ ತಾಲೂಕಿನ ಶಾಖಾಪುರದಲ್ಲಿ ನಡೆದಿದೆ.
ಶಾಖಾಪುರ ಗ್ರಾಮದ ರಾಮಣ್ಣ ಯಲಬುರ್ತಿ ಮನೆಗೆ ತೆರಳಿದ್ದರು. ಆರೋಗ್ಯ ಸಿಬ್ಬಂದಿ ನೋಡುತ್ತಿದ್ದಂತೆ ಮನೆಯ ದೇವರ ಜಗಲಿ ಮೇಲಿದ್ದ ಗಂಟೆಗಳನ್ನು ಹಿಡಿದು ದೇವರು ಬಂದವನಂತೆ, ಕುದರೆ..ಕುದರೆ ಎನ್ನುತ್ತಲೇ ಕುದರೆ ಓಡಾಡಿದರು. ಈ ವಿಲಕ್ಷಣ ಪ್ರಸಂಗಕ್ಕೆ ಅಲ್ಲಿದ್ದವರು ಅಚ್ಚರಿ ವ್ಯಕ್ತಪಡಿಸಿದರು. ಆದಾಗ್ಯೂ ರಾಮಣ್ಣ ಮನವೋಲೈಸಿ ಲಸಿಕೆ ಹಾಕಲು ಕುಟುಂಬದವರೊಟ್ಟಿಗೆ ಪ್ರಯತ್ನಿಸಿದರೂ ಪ್ರಯೋಜನೆ ಆಗಲಿಲ್ಲ. ಹೀಗಾಗಿ ಆರೊಗ್ಯ ಸಿಬ್ಬಂದಿ ರಾಮಣ್ಣ ಯಲಬುರ್ತಿಗೆ ಲಸಿಕೆ ಹಾಕದೇ ವಾಪಸ್ಸಾದರು.
ಈ ಕುರಿತು ಸಮುದಾಯ ಆರೋಗ್ಯ ಅಧಿಕಾರಿ ನಾಗರಾಜ ವಡ್ಡರ ಪ್ರತಿಕ್ರಿಯಿಸಿ, ಶಾಖಾಪೂರ ಗ್ರಾಮದ ರಾಮಣ್ಣ ಯಲಬುರ್ತಿ ಅವರು ಕೋವಿಡ್ ಲಸಿಕೆ ಹಾಕಿಸಿಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಮನೆಗೆ ಹೋದಾಗ, ತನಗೆ ಹೃಧಯ ಕಾಯಿಲೆ ಇದ್ದು ಲಸಿಕೆ ಮಾಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದ. ಆದರೂ ಹೃದಯ ಕಾಯಿಲೆ ಇದ್ದರೂ ಏನೂ ಆಗಲು ಎಂದು ಲಸಿಕೆ ಹಾಕಲು ಯತ್ನಿಸಿದೆವು. ಆದರೆ ಆ ವ್ಯಕ್ತಿಮೈಯಲ್ಲಿ ದೇವರು ಬಂದು ಕುಣಿಯತೊಡಗಿದ್ದ. ವ್ಯಕ್ತಿಯ ವಿಚಿತ್ರ ವರ್ತನೆಗೆ ನಾವು ಲಸಿಕೆ ಮಾಡಲಿಲ್ಲ ಎಂದರು.
ಕೆ.ಬೋದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗರಾಜ ವಡ್ಡರ, ಮಹಿಳಾ ಪೇದೆ ಮುತ್ತಮ್ಮ ಸೇರಿದಂತೆ ಆಶಾ ಕಾರ್ಯರ್ತೆ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ