ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ


Team Udayavani, Nov 27, 2021, 11:00 PM IST

ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ

ಬ್ರುಸೆಲ್ಸ್‌/ನವದೆಹಲಿ: ದಕ್ಷಿಣ ಆಫ್ರಿಕಾ, ಸಿಂಗಾಪುರಗಳಲ್ಲಿ ಪತ್ತೆಯಾಗಿರುವ ಕೊರೊನಾ ಹೊಸ ರೂಪಾಂತರಿ ಬಿ.1.1.529 (ಬೋಟ್ವಾನಾ ರೂಪಾಂತರಿ) ಮತ್ತೆ ಐರೋಪ್ಯ ಒಕ್ಕೂಟದ ಬೆಲ್ಜಿಯಂ, ಇಸ್ರೇಲ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಕೆಲ ದೇಶಗಳಲ್ಲಿ ಕಟ್ಟೆಚ್ಚರದ ಸ್ಥಿತಿ ಘೋಷಣೆ ಮಾಡಲಾಗಿದೆ. ಜತೆಗೆ ಆಫ್ರಿಕಾ ಖಂಡದ ರಾಷ್ಟ್ರಗಳಿಂದ ವಿಮಾನಯಾನಕ್ಕೆ ನಿಷೇಧ, ಗಡಿಗಳಲ್ಲಿ ಮತ್ತೆ ಬಿಗಿ ತಪಾಸಣೆ ಕ್ರಮವನ್ನು ಶುರು ಮಾಡಿವೆ. ಫ್ರಾನ್ಸ್‌ 48 ಗಂಟೆಗಳ ಕಾಲ ಆಫ್ರಿಕಾ ಖಂಡದಿಂದ ವಿಮಾಯಾನ ನಿಷೇಧಿಸಿ ಆದೇಶ ಹೊರಡಿಸಿದೆ. ಐರೋಪ್ಯ ಒಕ್ಕೂಟದ ರಾಷ್ಟ್ರಗಳು, ಸಿಂಗಾಪುರ, ಯುನೈಟೆಡ್‌ ಕಿಂಗ್‌ಡಮ್‌ ಜಪಾನ್‌ ಸರ್ಕಾರಗಳು ಆಫ್ರಿಕಾ ಖಂಡದ ದಕ್ಷಿಣ ಆಫ್ರಿಕಾ, ನಮೀಬಿಯಾ, ಜಿಂಬಾಬ್ವೆ, ಬೋಟ್ಸ್ವಾನಾ, ಲೆಸೆತೋ ಮತ್ತು ಎಸ್ವೆತಿನಿಗಳಿಂದ ವಿಮಾನ ಹಾರಾಟ ನಿಷೇಧಿಸಿವೆ.

ಇಸ್ರೇಲ್‌ನಲ್ಲಿ ಬೋಟ್ಲ್ವಾನಾ ರೂಪಾಂತರಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ತುರ್ತುಪರಿಸ್ಥಿತಿ ಘೋಷಣೆ ಮಾಡುವ ಸಾಧ್ಯತೆಗಳು ಇವೆ ಎಂದು ಪ್ರಧಾನಿ ನೆಫ್ವಾಲಿ ಬೆನ್ನೆಟ್‌ ಹೇಳಿದ್ದಾರೆ.

ನಾಲ್ಕನೇ ಅಲೆ:
ಜರ್ಮನಿಯಲ್ಲಿ ಹೊಸ ಮೈತ್ರಿಕೂಟ ಮುಂದಿನ ತಿಂಗಳು ಅಧಿಕಾರಕ್ಕೆ ಬರುತ್ತಿರುವಂತೆಯೇ ಸೋಂಕಿನ 4ನೇ ಅಲೆ ಕಾಣಿಸಿಕೊಳ್ಳಲಾರಂಭಿಸಿದೆ. ಶುಕ್ರವಾರ ಒಂದೇ ದಿನ ಪಶ್ಚಿಮ ಯುರೋಪ್‌ನಲ್ಲಿ 76 ಸಾವಿರ ಕೇಸುಗಳು ದೃಢಪಟ್ಟಿವೆ.

ಈಗಲೇ ಹೇಳಲಾಗದು:
ಹೊಸ ರೂಪಾಂತರಿ ಎಷ್ಟು ಅಪಾಯಕಾರಿ ಎಂಬ ಬಗ್ಗೆ ತಕ್ಷಣಕ್ಕೆ ಏನನ್ನೂ ಹೇಳಲಾಗದು. ಅದಕ್ಕೆ ಇನ್ನೂ ಕೆಲವು ವಾರಗಳು ಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಸಕ್ರಿಯ ಸೋಂಕು ಏರಿಕೆ :
ದೇಶದಲ್ಲಿ ಗುರುವಾರದಿಂದ ಶುಕ್ರವಾರದ ಅವಧಿಯಲ್ಲಿ 10,549 ಹೊಸ ಕೇಸುಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 488 ಮಂದಿ ಅಸುನೀಗಿದ್ದಾರೆ. ಈ ಪೈಕಿ ಕೇರಳದಲ್ಲಿಯೇ 384 ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಸೋಂಕು ಸಂಖ್ಯೆ 1,10,133ಕ್ಕೆ ಏರಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ.98.33 ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಡಿ.15ರಿಂದ ಅಂತಾರಾಷ್ಟ್ರೀಯ ವಿಮಾನಯಾನ
ಜಗತ್ತಿನ ಕೆಲವು ಭಾಗಗಳಲ್ಲಿ ಬೋಟ್ಸ್ವಾನಾ ರೂಪಾಂತರಿ ಸೋಂಕು ಪತ್ತೆಯಾಗಿರುವಂತೆಯೇ ಡಿ.15ರಿಂದ ಅಂತಾರಾಷ್ಟ್ರೀಯ ವಿಮಾನಯಾನ ಶುರು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸದ್ಯ ಉಂಟಾಗಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೂಡ ಅಂತಾರಾಷ್ಟ್ರೀಯ ವಿಮಾನಯಾನ ಆರಂಭಿಸಲು ನಿರ್ಧರಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಸಚಿವಾಲಯದಿಂದ ಸೋಂಕಿನ ಹಿನ್ನೆಲೆಯಲ್ಲಿ ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಿದ 14 ದೇಶಗಳನ್ನು ಹೊರತು ಪಡಿಸಿ ವಿಮಾನಯಾನ ಶುರುವಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಯು.ಕೆ, ಸಿಂಗಪುರ್‌, ಚೀನಾ, ಬ್ರೆಜಿಲ್‌, ಬಾಂಗ್ಲಾದೇಶ, ಮಾರಿಷಸ್‌, ಜಿಂಬಾಬ್ವೆ, ನ್ಯೂಜಿಲೆಂಡ್‌, ದಕ್ಷಿಣ ಆಫ್ರಿಕಾ, ಬೋಟ್ಸಾ$Ìನಾ, ಇಸ್ರೇಲ್‌ ಮತ್ತು ಹಾಂಕಾಂಗ್‌ಗಳಿಗೆ ವಿಮಾನಯಾನ ಇರುವುದಿಲ್ಲ.

ಭಾರತದಲ್ಲಿ ಮೂರನೇ ಅಲೆ ಇಲ್ಲ: ಗುಲೇರಿಯಾ
“ಭಾರತದಲ್ಲಿ ಈ ಹಿಂದೆ ಬಂದುಹೋಗಿರುವ ಕೊರೊನಾ ಅಲೆಗಳಿಗಿಂತ ಹೆಚ್ಚು ಮಾರಕವಾಗಿರುವ ಕೊರೊನಾ ಮೂರನೇ ಅಲೆಯು ಭಾರತಕ್ಕೆ ಅಪ್ಪಳಿಸುವ ಭೀತಿ ಸದ್ಯಕ್ಕಿಲ್ಲ” ಎಂದು ನವದೆಹಲಿಯ ಅಖೀಲ ಭಾರತ ವೈದ್ಯಕೀಯ ಸಂಸ್ಥೆಯ (ಏಮ್ಸ್‌) ನಿರ್ದೇಶಕ ಡಾ. ರಣದೀಪ್‌ ಗುಲೇರಿಯಾ ಅಭಯ ನೀಡಿದ್ದಾರೆ. ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲ ಮತ್ತು ಎರಡನೇ ಕೊರೊನಾ ಅಲೆ ಬಂದು ಅಪ್ಪಳಿಸಿದ ರೀತಿಯಲ್ಲಿ ಮೂರನೇ ಅಲೆ ಬರುವುದಿಲ್ಲ. ನಮ್ಮಲ್ಲಿ ಅನೇಕರು ಲಸಿಕೆ ಪಡೆದುಕೊಂಡಿದ್ದಾರೆ. ಅವರೆಲ್ಲರೂ ಸುರಕ್ಷಿತವಾಗಿರಲಿದ್ದಾರೆ. ಸದ್ಯಕ್ಕೆ ಲಸಿಕೆಯ ಮೂರನೇ ಡೋಸ್‌ ಲಸಿಕೆಯ ಅಗತ್ಯತೆಯೂ ಕಂಡುಬರುತ್ತಿಲ್ಲ’ ಎಂದಿದ್ದಾರೆ.

ಏನಿದು ಬೋಟ್ಸ್ವಾನಾ ರೂಪಾಂತರಿ?
ದಕ್ಷಿಣ ಆಫ್ರಿಕಾದ ಅತಿ ಜನನಿಬಿಡ ಪ್ರಾಂತ್ಯವಾದ ಗುಟೆಂಗ್‌ನಲ್ಲಿ ಈ ವೈರಾಣುವಿರುವ ಹೊಸ ಪ್ರಕರಣಗಳು ಪತ್ತೆಯಾಗಿವೆ. ಅತ್ತ, ಹಾಂಕಾಂಗ್‌, ಬೋಟ್ಸ್ವಾನಾದಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳಲ್ಲಿ ಇದೇ ಮಾದರಿಯ ವೈರಾಣು ಪತ್ತೆಯಾಗಿದೆ. ಇದರ ಹೊರತಾಗಿಯೂ ಬೋಟ್ಸ್ವಾನಾ ರೂಪಾಂತರಿ ಎಂದು ವಿಜ್ಞಾನಿಗಳು ಹೆಸರಿಸಿದ್ದಾರೆ.

ಹೆಚ್ಚು ಶಕ್ತಿಶಾಲಿ
ಸಾಮಾನ್ಯವಾಗಿ ಕೊರೊನಾ ವೈರಾಣುವಿನ ಮೇಲೆ ಪೊಟೀನ್‌ನಿಂದ ಕೂಡಿದ ಮುಳ್ಳಿನಂಥ ಆಕಾರವಿರುತ್ತದೆ. ಬಿ.1.1.529 ರೂಪಾಂತರಿ ವೈರಾಣುವಿನಲ್ಲಿ ಈ ಪ್ರೋಟೀನ್‌, ಕನಿಷ್ಟ 30 ಬಾರಿಯಾದರೂ ರೂಪಾಂತರ ಹೊಂದಿದೆ ಎಂದು ಹೇಳಲಾಗಿದೆ. ಹಾಗಾಗಿ, ಇದು ಈವರೆಗಿನ ಎಲ್ಲಾ ರೂಪಾಂತರಿಗಳಿಗಿಂತ ಹೆಚ್ಚು ವೇಗವಾಗಿ, ಹೆಚ್ಚು ಪರಿಣಾಮಕಾರಿಯಾಗಿ ಹರಡಬಲ್ಲದು ಎನ್ನಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಬುಧವಾರ-ಗುರುವಾರಗಳಂದು ದಾಖಲಾಗಿರುವ 1,100 ಹೊಸ ಕೊರೊನಾ ಪ್ರಕರಣಗಳಲ್ಲಿ ಶೇ. 90ರಷ್ಟು ಹೊಸ ರೂಪಾಂತರಿ ಪತ್ತೆಯಾಗಿರುವುದು ಇದರ ತ್ವರಿತ ಹರಡುವಿಕೆಗೆ ಸಾಕ್ಷಿಯಾಗಿದೆ.

ಸಮಾಧಾನಕರ ಸಂಗತಿ!
ಕೊರೊನಾಕ್ಕೆ ಈವರೆಗೆ ಅಭಿವೃದ್ಧಿಪಡಿಸಲಾಗಿರುವ ಎಲ್ಲಾ ಲಸಿಕೆಗಳು ಈ ಹೊಸ ರೂಪಾಂತರಿ ವೈರಾಣುವನ್ನು ಹತ್ತಿಕ್ಕುವಲ್ಲಿ ಶಕ್ತವಾಗಿವೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಇನ್ನು, ಈ ವೈರಾಣುವಿನಿಂದ ಈವರೆಗೆ ಕಂಡಿರದ ಅತಿ ಭೀಕರ ಕೊರೊನಾ ರೋಗ ಉಂಟಾಗುತ್ತದೆ ಎಂಬುದಂತೂ ಸುಳ್ಳು ಎಂದೂ ವಿಜ್ಞಾನಿಗಳು ತಿಳಿಸಿದ್ದಾರೆ. ಇವೆರಡೂ ವಿಚಾರಗಳು, ಹೊಸ ರೂಪಾಂತರಿಯ ಭೀತಿಯ ನಡುವೆಯೂ ಈ ವಿಚಾರ ಸಮಾಧಾನ ಹಾಗೂ ಆತ್ಮವಿಶ್ವಾಸ ತರುವಂಥದ್ದಾಗಿವೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.