ಸೋಲಿಗೆ ಟಿಕೆಟ್ ಕೊಡಿಸಿದವರೇ ಹೊಣೆ
ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ತಾಕೀತು
Team Udayavani, Nov 28, 2021, 7:10 AM IST
ಬೆಂಗಳೂರು: ವಿಧಾನಪರಿಷತ್ ಚುನಾ ವಣೆ ಟಿಕೆಟ್ ಹಂಚಿಕೆಯ ಅನಂತರ ಕಾಂಗ್ರೆಸ್ನಲ್ಲಿ ಭುಗಿಲೇಳುತ್ತಿರುವ ಅಸಮಾಧಾನ ಹೈಕಮಾಂಡ್ ಅಂಗಳದ ವರೆಗೂ ತಲುಪಿದೆ.
ಪಕ್ಷದ ಆಂತರಿಕ ಕಚ್ಚಾಟ ಫಲಿತಾಂಶದ ಮೇಲೆ ಪರಿಣಾಮ ಬೀರಿದರೆ ಟಿಕೆಟ್ಗಾಗಿ ಒತ್ತಡ ಹಾಕಿದ ನಾಯಕರೇ ಹೊಣೆ ಹೊರಬೇಕು ಎಂದು ಹೈಕಮಾಂಡ್ ಎಚ್ಚರಿಕೆ ನೀಡಿದೆ. ನಾಲ್ಕು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಿಕೆಯ ಅಸಮಾಧಾನದಿಂದ ಫಲಿತಾಂಶ ಏರುಪೇರಾಗುವ ಸಾಧ್ಯತೆಯಿದೆ ಎಂಬ ವರದಿ ಹೈಕಮಾಂಡ್ಗೆ ತಲುಪಿರುವ ಹಿನ್ನೆಲೆಯಲ್ಲಿ ರಾಜ್ಯ ನಾಯಕರಿಗೆ ಈ “ಹೊಣೆಗಾರಿಕೆ’ ಸಂದೇಶ ರವಾನಿಸಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಟಿಕೆಟ್ ಹಂಚಿಕೆಯಲ್ಲಿ ಎಚ್ಚರಿಕೆ ವಹಿಸಬೇಕು. ಸ್ಥಳೀಯ ಮುಖಂಡರ ಜತೆ ಸಮನ್ವಯ ಸಾಧಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತದ ಅಭ್ಯರ್ಥಿ ಯನ್ನು ಆಯ್ಕೆ ಮಾಡಬೇಕು ಎಂದು ಹೈಕಮಾಂಡ್ ಮೊದಲೇ ಸೂಚಿಸಿತ್ತು. ಆದರೆ ರಾಜ್ಯದ ನಾಯಕರು “ಕೋಟಾ’ ಪದ್ಧತಿಯಡಿ ತಮ್ಮ ಬೆಂಬಲಿಗರು, ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾದರು. ಈಗ ಟಿಕೆಟ್ ಹಂಚಿಕೆಯ ಅನಂತರದ ಬೆಳವಣಿಗೆಗಳು ಹೈಕಮಾಂಡ್ ನಾಯಕರ ಕೆಂಗಣ್ಣಿಗೆ ಗುರಿಯಾಗಿವೆ. ಹೀಗಾಗಿ ರಾಜ್ಯ ಉಸ್ತುವಾರಿ ಮೂಲಕವೇ ಎಚ್ಚರಿಕೆ ಸಂದೇಶ ರವಾನೆಯಾಗಿದೆ.
ಇದನ್ನೂ ಓದಿ:ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ
ಹಲವು ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಆಂತರಿಕ ಕಚ್ಚಾಟದ ಹೊಡೆತದ ಬಗ್ಗೆ ಹೈಕಮಾಂಡ್ಗೆ ವರದಿ ಹೋಗಿದೆ. ಜೆಡಿಎಸ್ ಸ್ಪರ್ಧಿಸದ ಕಡೆ ಬೆಂಬಲ ಕೋರುತ್ತೇವೆ ಎನ್ನುವ ಮೂಲಕ ಬಿಜೆಪಿ ಜಾಣ ನಡೆ ಅನುಸರಿಸುತ್ತಿದೆ. ಆದರೆ ಕಾಂಗ್ರೆಸ್ ನಾಯಕರ ಪ್ರತಿಷ್ಠೆ ಮತ್ತು ಟಿಕೆಟ್ ಹಂಚಿಕೆಯಲ್ಲಿನ ವ್ಯತ್ಯಾಸದಿಂದ ಗೆಲ್ಲುವ ಅವಕಾಶ ಇರುವ ಕಡೆ ಕಗ್ಗಂಟಾಗುತ್ತಿದೆ ಎಂಬ ಅಂಶ ವರದಿಯಲ್ಲಿದೆ ಎನ್ನಲಾಗಿದೆ.
ಎಚ್ಡಿಕೆ ಕೆಣಕಿದರಾ?
ಹಾನಗಲ್, ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್ ವಿರುದ್ಧ ಅನುಸರಿಸಿದ ತಂತ್ರವನ್ನೇ ವಿಧಾನಪರಿಷತ್ ಚುನಾವಣೆಯಲ್ಲೂ ಮುಂದುವರಿಸುತ್ತಿರುವ ಬಗ್ಗೆ ಕಾಂಗ್ರೆಸ್ ವಲಯ ದಲ್ಲೇ ಅಪಸ್ವರ ವ್ಯಕ್ತವಾಗಿದೆ. ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಕೆಣಕಿರುವುದು ಕಾಂಗ್ರೆಸ್ಗೆ ಮುಳುವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೂಂದೆಡೆ, ಕೆಲವು ಕ್ಷೇತ್ರಗಳಲ್ಲಿ ಕುಮಾರಸ್ವಾಮಿ “ರಂಗಪ್ರವೇಶ’ ಮಾಡಿದ್ದು, ಅಲ್ಲಿನ ಚಿತ್ರಣ ಬದಲಾಗುವ ಲಕ್ಷಣಗಳು ಕಂಡುಬರುತ್ತಿವೆ.
- ಎಸ್. ಲಕ್ಷ್ಮೀನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!