ಶ್ರೀರಂಗಪಟ್ಟಣ: ಪ್ರತ್ಯೇಕ ಘಟನೆಯಲ್ಲಿ 3 ಸಾವು
Team Udayavani, Nov 28, 2021, 5:32 PM IST
ಶ್ರೀರಂಗಪಟ್ಟಣ: ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಬಂದಿದ್ದ ಯುವಕನೋರ್ವ ತಾಲೂ ಕಿನ ಗಂಜಾಮ್ ಬಳಿ ಇರುವ ಕಾವೇರಿ ಸಂಗಮದಲ್ಲಿನ ಕಾವೇರಿ ನದಿಯಲ್ಲಿ ಈಜಲು ಹೋಗಿ ನದಿಯಲ್ಲಿ ಕೊಚ್ಚಿ ಹೊಗಿರುವ ಘಟನೆ ನಡೆದಿದೆ.
ಬೆಂ ಳೂರು ಮೂಲದ ಮಂಜುನಾಥ್(30) ಕೊಚ್ಚಿ ಹೋಗಿರುವ ಯುವಕನಾಗಿದ್ದು, ನಿನ್ನೆ ಸ್ನೇಹಿತರ ಜೊತೆ ಟಿಟಿ ವಾಹನದಲ್ಲಿ ಬಂದಿದ್ದ ಈತ ನದಿಯಲ್ಲಿ ಈಜಲು
ಹೋಗಿದ್ದು,ನೀರು ಹೆಚ್ಚಿದ ಕಾರಣಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಸ್ಥಳೀ ಯರು ಶವದ ಹುಡುಕಾಟ ನಡೆಸಿದ್ರು, ಶವ ಪತ್ತೆಯಾಗಿಲ್ಲ ಪೊಲೀಸರು ಸೇರಿ ದಂತೆ ಅಗ್ನಿಶಾಮಕ ಠಾಣೆ ಪೊಲೀಸ ರು ಶವದ ಹುಡುಕಾಟ ನಡೆಸಿದ್ದಾರೆ.
ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವೇರಿ ನದಿಗೆ ಬಿದ್ದು ಗೃಹಣಿ ಆತ್ಮಹತ್ಯೆ:
ಶ್ರೀರಂಗಪಟ್ಟಣ : ಪಟ್ಟಣದ ವೆಲ್ಲೆಸ್ಲಿ ಸೇತುವೆ ಮೇಲಿಂದ ಕಾವೇರಿ ನದಿಗೆ ಹಾರಿ ಗೃಹಣಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರಿನ ನಿವಾಸಿ ಮಧು ಎಂಬುವರ ಪತ್ನಿ ರಕ್ಷಿತ(31)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯಾಗಿದ್ದು, ಸ್ಥಳೀಯರು ಆಕೆಯನ್ನು ರಕ್ಷಣಿಸಲು ಮುಂದಾದರೂ ಆಕೆ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ:
ಶ್ರೀರಂಗಪಟ್ಟಣ : ಜಮೀನನಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ತಾಲೂಕಿನ ರಾಂಪುರ ಗ್ರಾಮದ ರೈತನೋರ್ವನ ಜಮೀನಿನಲ್ಲಿ ಮೈಸೂರಿನ ಗೋಕುಲಂ ನಿವಾಸಿ ಸತೀಶ್(45) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ