ಗುಡಿಬಂಡೆ: ಅವನತಿಯ ಅಂಚಿನಲ್ಲಿ ಸುರಸದ್ಮಗಿರಿ ಬೆಟ್ಟ


Team Udayavani, Nov 28, 2021, 5:44 PM IST

ಗುಡಿಬಂಡೆ: ಅವನತಿಯ ಅಂಚಿನಲ್ಲಿ ಸುರಸದ್ಮಗಿರಿ ಬೆಟ್ಟ

ಗುಡಿಬಂಡೆ: ಪಟ್ಟಣದ ಹೃದಯ ಭಾಗದಲ್ಲಿರುವ ಇತಿಹಾಸ ಪ್ರಸಿದ್ದ, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ಸುರಸದ್ಮಗಿರಿ ಬೆಟ್ಟ ಇಂದು ಸೂಕ್ತ ನಿರ್ವಹಣೆ ಇಲ್ಲದೆ ಅವನತಿಯ ಅಂಚಿಗೆ ಬಂದು ತಲುಪಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅತಿಎತ್ತರದ ಬೆಟ್ಟಗಳಲ್ಲಿ ನಂದಿ ಬೆಟ್ಟ ನಂತರದ ಸ್ಥಾನ ಸುರಸದ್ಮಗಿರಿ ಬೆಟ್ಟ ಹೊಂದಿದ್ದು, 16ನೇ ಶತಮಾನದಲ್ಲಿ ಪಾಳೆಗಾರನಾದ ಹಾವಳಿ ಬೈರೇಗೌಡ ಈ ಬೆಟ್ಟವನ್ನು ನಿರ್ಮಿಸಿದ್ದು, ಬೆಟ್ಟದಲ್ಲಿ ಭವ್ಯವಾದ ಏಳು ಸುತ್ತಿನ ಕೋಟೆ, ವಿಶಿಷ್ಟ ಕಲಾಕೃತಿಗಳನ್ನು ಹೊಂದಿರುವ ಪ್ರವೇಶ ದ್ವಾರಗಳು, ಸ್ವಾಗತ ಕಮಾನುಗಳು, ಕಾವಲು ಗುಮ್ಮಟಗಳು, ಎತ್ತರದ ಬುರಜುಗಳು, ಕಾವಲು ಕೋಣೆಗಳು, ವಿಶ್ರಾಂತಿ ಗೃಹಗಳು, ಕಾರಾಗೃಹಗಳು, ಹತ್ತಕ್ಕೂ ಹೆಚ್ಚು ನೀರಿನ ಕೊಳಗಳು ನಿರ್ಮಾಣ ಮಾಡಿದ್ದು, ಇದರ ಜೊತೆಗೆ ಶ್ರೀ ಪಾರ್ವತಿ ಮತ್ತು ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯವನ್ನು ಸಹ ನಿರ್ಮಾಣ ಮಾಡಿದ್ದಾನೆ.

ಇಂತಹ ಗತೈಹಾಸಿಕ ಸ್ಮಾರಕಗಳುಳ್ಳ ಕೊಟ್ಟೆ ಗಿಡಗಂಟೆಗಳಿಂದ ಆವರಿಸಿ, ಮಳೆಗಾಳಿಗೆ ಮೈಯೊಡ್ಡಿ ಪ್ರವಾಸಿತಾಳವಾಗಿ ಅಭಿವೃದ್ದಿಯಾಗಬೇಕಾಗಿದ್ದ ಸ್ಮಾರಕ ಇಂದು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿ, ಬೆಟ್ಟ ಹತ್ತುವ ಮಾರ್ಗವೆಲ್ಲಾ ಗಿಡಗಂಟೆಗಳಿಂದ ಮಾರ್ಗವೆ ಮುಚ್ಚುಹೋದಂತಾಗಿದೆ.

ಇನ್ನು ಇತ್ತೀಚೆಗೆ ಎಡಬಿಡದೆ ಬೀಳುತ್ತಿರುವ ಮಳೆಯಿಂದಾಗಿ ಕೊಟೆಯ ಎತ್ತರದ ಬುರಜುಗಳು ಒಂದೊಂದಾಗಿ ಬಿದ್ದು ನೆಲಕಚ್ಚುತ್ತಿದ್ದರೆ, ಕೋಟೆ ದ್ವಾರಗಳು ಕುಸಿಯುತ್ತಿವೆ, ಈ ಹಿಂದೆ ಪಟ್ಟಣ ಪಂಚಾಯಿತಿಯಲ್ಲಿ ಲಕ್ಷಾಂತರ ರೂಪಾಯಿಗಳು ಖರ್ಚು ಮಾಡಿ ಬೆಟ್ಟದ ಮೇಲೆ ಹಾಕಿದ್ದ ಹೈಮಾಕ್ಸ್ ವಿದ್ಯುತ್ ದೀಪದ ಕಂಬ ಬಿದ್ದು ಹೋಗಿದ್ದರೆ, ಅದಕ್ಕೆ ಅಳವಡಿಸಿದ್ದ ದೀಪಗಳು ಮಾತ್ರ ಕಳ್ಳಕಾಕರ ಪಾಲಾಗಿದೆ.

ಸುಮಾರು ವರ್ಷಗಳ ಹಿಂದೆ ಅಧಿಕಾರಿಗಳು ತಾಲೂಕಿನ ಇತಿಹಾಸ ಪ್ರಸಿದ್ದ ಸ್ಥಳಗಳನ್ನು, ಸ್ಮಾರಕಗಳನ್ನು ರಕ್ಷಿಸಬೇಕೆಂಬ ಇಚ್ಚೆಯಿಂದ ಹದಿನೈದು ದಿನಕ್ಕೊಮ್ಮೆ ಅಥವಾ ತಿಂಗಳಿಗೆ ಒಂದು ಬಾರಿ ಬೆಟ್ಟದಲ್ಲಿ ಅನವಶ್ಯಕವಾಗಿ ಬೆಳೆದ ಗಿಡ ಗಂಟೆಗಳನ್ನು ಮತ್ತು ಬೆಟ್ಟದ ಮೇಲಿನ ತ್ಯಾಜ್ಯವನ್ನು ತೆರವುಗೊಳಿಸುತ್ತಿದ್ದರು, ಆದರೆ ಈಗಿನ ಪಟ್ಟಣ ಪಂಚಾಯಿತಿ ಮತ್ತು ತಾಲೂಕಿನ ಅಧಿಕಾರಿಗಳು ಮಾತ್ರ ಅತ್ತ ತಲೆ ಹಾಕುವುದೇ ಕಷ್ಟವಾಗಿ ಪರಿಣಮಿಸಿದೆ.

ವಾರಾಂತ್ಯದಲ್ಲಿ ಪ್ರವಾಸಿಗರ ದಂಡು: ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ರಸ್ತೆ ದುರಸ್ತಿಯಾಗಿರುವುದರಿಂದ ಪ್ರವಾಸಿಗರ ವಾಹನಗಳಿಗೆ ನಿರ್ಬಂದ ಇರುವುದರಿಂದ, ಹತ್ತಲು ಕಷ್ಟಸಾದ್ಯವಾದ ಕಾರಣದ, ನಂದಿ ನಂತರದ ಬೆಂಗಳೂರಿನಿಂದ ಒಂದು ದಿನದ ಪ್ರವಾಸಕ್ಕೆ ಹೇಳಿ ಮಾಡಿಸಿದಂತೆ ಇರುವ ಅವುಲಬೆಟ್ಟ, ಅಮಾನಿಬೈರಸಾಗರ, ಸುರಸದ್ಮಗಿರಿ ಬೆಟ್ಟ, ಎಲ್ಲೋಡು ಶ್ರೀ ಲಕ್ಷ್ಮೀಆದಿನಾರಾಯಣಸ್ವಾಮಿ ಬೆಟ್ಟಗಳಿಗೆ ಪ್ರವಾಸಿಗರ ದಂಡು ಹೆಚ್ಚಿನ ರೀತಿಯಲ್ಲಿ ಬರುತ್ತಿದ್ದು, ಆದರೆ ಸುರಸದ್ಮಗಿರಿ ಬೆಟ್ಟ ಮಾತ್ರ ನಿರ್ವಹಣೆಯ ಕೊರತೆಯಿಂದ ಅವನತಿಯ ಅಂಚಿಗೆ ಸಿಲುಕುತ್ತಿದೆ.

ಭರವಸೆಗಳ ಮಹಾಪೂರಾ: ಸುರಸದ್ಮಗಿರಿ ಬೆಟ್ಟದ ಅಭಿವೃದ್ಧಿಗಾಗಿ ಸರ್ಕಾರದಿಂದ ಈ ವರ್ಷ ಇಷ್ಟು ಕೋಟಿ, ಆ ವರ್ಷ ಇಷ್ಟು ಕೋಟಿ ಬಿಡಿಗಡೆಯಾಗಿದೆ, ಇನ್ನೇನು ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಯಾಗೆ ಬಿಟ್ಟಿತು ಎಂದು ಭರವಸೆಗಳು ಮಾತ್ರ ಸುಮಾರು ದಶಕಗಳಿಂದ ಸಾರ್ವಜನಿಕರು ಕೇಳುತ್ತಿದ್ದಾರೆಯೇ ಹೊರತು, ಕನಿಷ್ಟ ಪಕ್ಷ ಬೆಟ್ಟದ ಮೇಲೆ ಇರುವ ದೇವಾಲಯಕ್ಕೆ ನಿತ್ಯ ಪೂಜೆ ಮಾಡಲು ಪೂಜಾ ಸಾಮಾನು ಕೊಳ್ಳಲು ಸಹ ಹಣ ಬಿಡುಗಡೆಯಾಗಿಲ್ಲ.

ಇತಿಹಾಸ ಪ್ರಸಿದ್ದ ಸುರಸದ್ಮಗಿರಿ ಬೆಟ್ಟ ಕಣ್ಮರೆಯಾಗುವುದಕ್ಕೆ ಮೊದಲೇ ಸ್ಥಳಿಯ ಅಧಿಕಾರಿಗಳಾಗಲಿ ಅಥವಾ ಪ್ರವಾಸೋದ್ಯಮ ಇಲಾಖಾ ಅಧಿಕಾರಿಗಳಾಗಲಿ ಅಥವಾ ಮುಜರಾಯಿ ಇಲಾಖಾ ಅಧಿಕಾರಿಗಳಾಗಲಿ ಎಚ್ಚರಗೊಂಡು ಸ್ಮಾರಕಗಳ ರಕ್ಷಣೆಗೆ ಮುಂದಾಗಬೇಕೆಂದು ಸಾರ್ವಜನಿಕರ ಆಶಯವಾಗಿದೆ.

-ವರದಿ: ನವೀನ್ ಕುಮಾರ್.ಎನ್

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.