ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು


Team Udayavani, Nov 28, 2021, 9:26 PM IST

ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು

ಉಡುಪಿ: ಪರ್ಕಳ ಪೇಟೆಯ ಬಾಬುರಾಯ ಸರ್ಕಲ್‌ ಬಳಿ ನಡೆದ ಅಪಘಾತ ಹಾಗೂ ಘರ್ಷಣೆ ಅನಂತರ ರಾಜಿಸಂಧಾನದ ಮೂಲಕ ಇತ್ಯರ್ಥ ಕಂಡ ಘಟನೆ ರವಿವಾರ ನಡೆದಿದೆ.

ಪರ್ಕಳದ ರಾ.ಹೆ.ಯಲ್ಲಿ ಆತ್ರಾಡಿಯ ಮುಸ್ಲಿಂ ಯುವಕನೊಬ್ಬ ತನ್ನ ಹೊಸ ಬಲೆನೋ ಕಾರನ್ನು ಚಲಾಯಿಸಿಕೊಂಡು ಬಂದು ಬೇರೊಂದು ವಾಹನಕ್ಕೆ ಢಿಕ್ಕಿಹೊಡೆದಿದ್ದಾನೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ವಡಬಂಡೇಶ್ವರ ಭಾಗದ ನಗರಸಭೆ ಕೌನ್ಸಿಲರ್‌ ಯೋಗೀಶ್‌ ಸಾಲ್ಯಾನ್‌ ಅವರು ಸಂಧಾನಕ್ಕೆ ತೆರಳಿದ್ದಾರೆ. ಈ ವೇಳೆ ಪರಸ್ಪರ ಮಾತುಕತೆ ನಡೆದಿದೆ.

ಅನಂತರ ಯೋಗೀಶ್‌ ಸಾಲ್ಯಾನ್‌ ಅವರು ಅಲ್ಲಿಂದ ತೆರಳಿದ್ದಾರೆ. ಈ ವೇಳೆ ಮುಸ್ಲಿಂ ಯುವಕ ತನ್ನ ಸ್ನೇಹಿತರಿಗೆ ಕರೆ ಮಾಡಿ ಈ ಘಟನೆ ಬಗ್ಗೆ ತಿಳಿಸಿದ್ದ. ಈ ವೇಳೆ ಸುಮಾರು 25ರಿಂದ 30 ಮಂದಿಯ ಯುವಕರ ತಂಡ ಮಣಿಪಾಲ ಠಾಣೆಗೆ ದೂರು ನೀಡಲು ಬಂದಿದ್ದಾರೆ.

ತನ್ನ ಮೇಲೆ ಹಲ್ಲೆ ನಡೆಸಲು ಬರುತ್ತಿದ್ದಾರೆ ಎಂದು ತಿಳಿದ ಯೋಗೀಶ್‌ ಸಾಲ್ಯಾನ್‌ ಅವರು ಬಬ್ಬುಸ್ವಾಮಿ ದೈವಸ್ಥಾನದ ಬಳಿ ಬಂದು ಮಣಿಪಾಲ ಠಾಣೆಗೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಅನಂತರ ಪೊಲೀಸರು ಎರಡೂ ತಂಡಗಳನ್ನು ಠಾಣೆಗೆ ಕರೆಯಿಸಿಕೊಂಡು 1 ಗಂಟೆಗೂ ಅಧಿಕ ಕಾಲ ವಿಚಾರಣೆ ಮಾಡಿದ್ದಾರೆ.

ಠಾಣೆ ಎದುರು ಜನಸ್ತೋಮ
ಮಣಿಪಾಲ ಪೊಲೀಸ್‌ ಠಾಣೆಯ ಎದುರು ಭಾಗದಲ್ಲಿ ಹಿಂದೂ ಹಾಗೂ ಮುಸ್ಲಿಂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಪೊಲೀಸರು ಎರಡೂ ತಂಡಗಳಿಗೂ ಎಚ್ಚರಿಕೆ ನೀಡಿದ್ದಾರೆ. ಹಾಗೂ ಸಮಯಾವಕಾಶ ನೀಡಿ ರಾಜಿ ಸಂಧಾನದ ಮೂಲಕ ಪ್ರಕರಣಕ್ಕೆ ತೆರೆ ಎಳೆದಿದ್ದಾರೆ.
ಸಂಜೆಯ ವೇಳೆ ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ಸಂದೇಶ ರವಾನೆಯಾಗಿ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಠಾಣೆ ಎದುರು ಜಮಾಯಿಸಿದರು. ಹಿಂದೂ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸುತ್ತಿದ್ದಂತೆ ಠಾಣೆಗೆ ಬಂದಿದ್ದ ಮುಸ್ಲಿಂ ಯುವಕರು ಅಲ್ಲಿಂದ ತೆರಳಿದ್ದಾರೆ. ಘಟನೆ ಬಗ್ಗೆ ಎರಡೂ ತಂಡಗಳಿಂದ ಹೇಳಿಕೆ ಪಡೆದುಕೊಳ್ಳಲಾಗಿದೆ. ಇದು ಯಾವುದೇ ಪೂರ್ವಪರ ದ್ವೇಷದ ಕೃತ್ಯ ಅಲ್ಲ ಎಂದು ತಿಳಿದುಬಂದಿದೆ.

ಪರ್ಕಳ ಪೇಟೆಯಲ್ಲಿ ಟ್ರಾಫಿಕ್‌ ಜಾಮ್‌
ಪರ್ಕಳ ಬಾಬುರಾಯ ಸರ್ಕಲ್‌ ಬಳಿ ಈ ಘಟನೆ ನಡೆದಿದ್ದು, ಸುಮಾರು ಅರ್ಧಗಂಟೆಗೂ ಅಧಿಕ ಕಾಲ ಟ್ರಾಫಿಕ್‌ ದಟ್ಟನೆ ಉಂಟಾಗಿತ್ತು. ರಾ.ಹೆ.ಯ ಅಪೂರ್ಣ ಕಾಮಗಾರಿಯಿಂದಾಗಿ ಈ ಭಾಗದಲ್ಲಿ ದಿನನಿತ್ಯ ಸಣ್ಣಪುಟ್ಟ ಅಪಘಾತಗಳು ನಡೆದು ಚಾಲಕರ ನಡುವೆ ಮಾತುಕತೆಗಳು ನಡೆಯುತ್ತಿವೆ. ರವಿವಾರವೂ ಇದೇ ರೀತಿ ಘಟನೆ ನಡೆದಿದ್ದು, ಅತಿರೇಕಕ್ಕೆ ಹೋಗಿದೆ. ಅನಂತರ ಕೋಮುಬಣ್ಣ ಪಡೆದುಕೊಂಡು ರಾಜಿ ಸಂಧಾನದ ಮೂಲಕ ಇತ್ಯರ್ಥ ಕಂಡಿದೆ.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.