ಬ್ರಿಮ್ಸ್ ಕಟ್ಟಡ ವೀಕ್ಷಿಸಿದ ಡಿಸಿ
Team Udayavani, Nov 30, 2021, 1:07 PM IST
ಬೀದರ: ಕಟ್ಟಡದ ದುರಸ್ತಿ ಪ್ರಕ್ರಿಯೆ ಪೂರ್ಣವಾಗದೇ ಯಥಾಸ್ಥಿತಿ ಮುಂದುವರಿದಿರುವುದು ಗಮನಕ್ಕೆ ಬಂದ ಹಿನ್ನೆಲೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸೋಮವಾರ ಬ್ರಿಮ್ಸ್ ಬೋಧಕ ಆಸ್ಪತ್ರೆಗೆ ಭೇಟಿ ನೀಡಿದರು.
ಆಯಾ ಕಡೆಗಳಲ್ಲಿನ ಕಟ್ಟಡದ ದುಸ್ಥಿತಿ ವೀಕ್ಷಿಸಿ ಸೂಕ್ತ ವಿವರಣೆ ನೀಡದ ಸ್ಥಳದಲ್ಲಿದ್ದ ಕೆಲವು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬ್ರಿಮ್ಸ್ ಆಸ್ಪತ್ರೆಗೆ ಆಗಮಿಸುತ್ತಲೇ ಕಟ್ಟಡದ 6ನೇ ಅಂತಸ್ತಿಗೆ ತೆರಳಿ ಅಲ್ಲಿ ಹಾನಿಗೊಳಗಾದ ಸೋಲಾರ್ ವಾಟರ್ ಹೀಟರ್ ನೋಡಿದರು. ಹೀಟ್ ಕಂಡಕ್ಟರ್ ಇತ್ಯಾದಿ ವಸ್ತುಗಳು ಕಳುವಾಗಿದ್ದಕ್ಕೆ ಪೊಲೀಸರಲ್ಲಿ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದರು.
ವಸ್ತುಗಳು ಕಳುವಾಗಿಲ್ಲ ಎಂಬುದು ಪರಿಶೀಲನೆ ವೇಳೆಯಲ್ಲಿ ತಿಳಿದು ಬಂದಲ್ಲಿ ಕಟ್ಟಡದ ನಾಗಾರ್ಜುನ ಕನ್ರಸ್ಟ್ರಕ್ಷನ್ ಕಂಪನಿ (ಎನ್ಸಿಸಿ)ಯ ಅಧಿಕಾರಿಗಳನ್ನೇ ಹೊಣೆಯಾಗಿಸಲಾಗುವುದು ಎಂದು ಡಿಸಿ ಎಚ್ಚರಿಸಿದರು.
ಕಟ್ಟಡದ ಕಾರಿಡಾರನಲ್ಲಿ ಎರಡೂ ಬದಿಗೆ ಯುಪಿವಿಸಿ ಸ್ಲೈಡಿಂಗ್ ಕಿಟಕಿ ಅಳವಡಿಸಲು ಎನ್ಸಿಸಿ ಪ್ರತಿನಿಧಿಗಳಿಗೆ ಹಲವಾರು ಬಾರಿ ತಿಳಿಸಿದಾಗ್ಯೂ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲವೆಂದು ಅಧಿಕಾರಿಗಳು ಡಿಸಿ ಗಮನಕ್ಕೆ ತಂದರು.
ನೀರು ಸೋರುವಿಕೆಗೆ ಕಾರಣ ಏನೆಂಬುದನ್ನು ತ್ವರಿತವಾಗಿ ಪತ್ತೆ ಹಚ್ಚಿ ಕಾಲಮಿತಿಯೊಳಗೆ ದುರಸ್ತಿ ಆಗುವಂತೆ ನೋಡಿಕೊಳ್ಳಬೇಕು ಎಂದು ಪಿಡಬ್ಲೂಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಲಿಫ್ಟ್ ಸಂಖ್ಯೆ.3 ಮತ್ತು 4ರ ಮಷೀನ್ ರೂಂ ಮತ್ತು ಹೆಡ್ ರೂಂ ಗೂ ತೆರಳಿ ಜಿಲ್ಲಾಧಿಕಾರಿ ಪರಿಶೀಲಿಸಿದರು. ನಿರಂತರ ಶೌಚಾಲಯ ನಿರ್ವಹಣೆ ಇಲ್ಲದ್ದರಿಂದ ಆಸ್ಪತ್ರೆಯಲ್ಲಿ ಸ್ವತ್ಛತೆ ಹದಗೆಟ್ಟಿದೆ ಎಂದು ಇದೆ ವೇಳೆ ಬ್ರಿಮ್ಸ್ ನಿರ್ದೇಶಕ ಚಂದ್ರಕಾಂತ ಚಿಲ್ಲರಗಿ ಮತ್ತು ವೈದ್ಯಕೀಯ ಅಧೀಕ್ಷಕ ಶಿವಕುಮಾರ ಶೆಟಕಾರ ಜಿಲ್ಲಾಧಿ ಕಾರಿಗೆ ಮಾಹಿತಿ ನೀಡಿದರು.
ನೆಲ ಮಹಡಿಗೆ ತೆರಳಿ ಕಲುಷಿತ ನೀರು ನಿಂತಿರುವುದನ್ನು ನೋಡಿ ಅಸಮಾಧಾನ ವ್ಯಕ್ತಪಡಿಸಿದರು. ಸೋರುತ್ತಿರುವ ಪೈಪ್ಗ್ಳ ಬೆಂಡ್ ಕ್ಯಾಂಪ್ ಜೋಡಿಸಿ ಹಾಗೂ ಪೈಪ್ನಲ್ಲಿ ಸಿಲುಕಿದ ಕಸ-ಕಡ್ಡಿ, ಬಟ್ಟೆ ಮೊದಲಾದ ತ್ಯಾಜ್ಯ ತೆಗೆದು ನೀರು ಸರಾಗವಾಗಿ ಮ್ಯಾನ್ ಹೋಲ್ಗೆ ಹೋಗುವಂತೆ ಮಾಡಲು ಮತ್ತು ಶೌಚಾಲಯ ನಿರ್ವಹಣೆ ಸರಿಯಾಗಿ ಮಾಡಲು ಕ್ರಮ ವಹಿಸುವಂತೆ ಸಂಬಂಧಿತರಿಗೆ ನಿರ್ದೇಶನ ನೀಡಿದರು.
ಈ ವೇಳೆ ಡಿಯುಡಿಸಿ ಪಿಡಿ ಮೋತಿಲಾಲ್ ಲಮಾಣಿ, ಲೋಕೋಪಯೋಗಿ ಇಲಾಖೆ ಇಇ ಲಿಂಗರಾಜ್, ಬ್ರಿಮ್ಸ್ ವೈದ್ಯಾಧಿಕಾರಿ ಡಾ| ಮಹೇಶ ತೊಂಡಾರೆ, ಸಹಾಯಕ ಅಭಿಯಂತ ಕುಪ್ಪಣ, ಸತೀಶ ವಾಲೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್