ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!
Team Udayavani, Nov 30, 2021, 11:00 PM IST
ಪಾಟ್ನಾ: ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಇದಕ್ಕೆ ಕಾರಣವೂ ಇದೆ. ಇತ್ತೀಚೆಗೆ ಬಿಹಾರ ವಿಧಾನಸಭೆಯ ಆವರಣದಲ್ಲಿರುವ ಮುಖ್ಯಮಂತ್ರಿ ಕಚೇರಿಗೆ ಕೇವಲ 100 ಮೀ. ಅಂತರದಲ್ಲಿ ಮದ್ಯದ ಖಾಲಿ ಬಾಟಲಿಗಳು ಪತ್ತೆಯಾಗಿವೆ.
ಆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸಂಪೂರ್ಣ ನಿಷೇಧವಿದೆ. ಅಲ್ಲದೇ ಕೆಲವೇ ದಿನಗಳ ಹಿಂದೆ ಸಂಪೂರ್ಣ ಮದ್ಯ ನಿಷೇಧ ಮಾಡಬೇಕೆಂದು ಮುಖ್ಯಮಂತ್ರಿ ಸಹಿತ ಅಲ್ಲಿನ ಸಚಿವರೆಲ್ಲ ಪ್ರಮಾಣವಚನ ಸ್ವೀಕರಿಸಿದ್ದರು.
ಇದರ ಬೆನ್ನಲ್ಲೇ ಅಲ್ಲಿ ಖಾಲಿ ಮದ್ಯದ ಬಾಟಲಿಗಳು ಪತ್ತೆಯಾಗಿರುವುದನ್ನು ತೇಜಸ್ವಿ ಯಾದವ್ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ನೌಕಾಪಡೆಗೆ ಅಡ್ಮಿರಲ್ ಹರಿಕುಮಾರ್ ಮುಖ್ಯಸ್ಥ
ಇದು ಬಿಹಾರದಲ್ಲಿ ಮದ್ಯ ನಿಷೇಧದ ನೈಜಸ್ಥಿತಿ, ಈ ಬಗ್ಗೆ ನಿತೀಶ್ ಕ್ಷಮೆಯಾಚಿಸಬೇಕು, ಅಲ್ಲದೇ ಮದ್ಯ ಮಾಫಿಯಾದೊಂದಿಗೆ ಅವರಿಗೆ ಸಂಬಂಧವಿದೆ ಎಂದೂ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ