ಪ್ರಥಮ ಪ್ರಾಶಸ್ತ್ಯ ಮತಕ್ಕಷ್ಟೆ ತಂತ್ರ; ಬಿಜೆಪಿ, ಕಾಂಗ್ರೆಸ್‌ನಿಂದ ತಂತ್ರಗಾರಿಕೆ

ವಿಧಾನ ಪರಿಷತ್‌ ಚುನಾವಣೆ

Team Udayavani, Dec 1, 2021, 5:36 AM IST

ಪ್ರಥಮ ಪ್ರಾಶಸ್ತ್ಯ ಮತಕ್ಕಷ್ಟೆ ತಂತ್ರ; ಬಿಜೆಪಿ, ಕಾಂಗ್ರೆಸ್‌ನಿಂದ ತಂತ್ರಗಾರಿಕೆ

ಮಂಗಳೂರು: ಪ್ರಥಮ ಪ್ರಾಶಸ್ತ್ಯದ ಮತಕ್ಕೆ ಬೆಂಬಲಿತ ಮತದಾರರನ್ನು ಸೀಮಿತಗೊಳಿಸುವ ತಂತ್ರ ಗಾರಿಕೆಯನ್ನು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಅನುಸರಿಸಿದೆ.

ಎರಡು ಸದಸ್ಯತ್ವದ ದ.ಕ. ಸ್ಥಳೀಯಾಡಳಿತ ಚುನಾ ವಣ ಕೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಎಸ್‌ಡಿಪಿಐ ಒಂದೊಂದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಒಟ್ಟು 6,046 ಮತ ದಾರರಲ್ಲಿ ಬಿಜೆಪಿ 3,592, ಕಾಂಗ್ರೆಸ್‌-1,900, ಎಸ್‌ಡಿಪಿಐ 220 ಹಾಗೂ ಜೆಡಿಎಸ್‌, ಪಕ್ಷೇತರರು ಸೇರಿ 328 ಮತದಾರರಿದ್ದಾರೆ.

ಕಣದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಇರುವುದು ಓರ್ವರೇ. ಹೀಗಾಗಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ತಮ್ಮ ಪಕ್ಷ ಬೆಂಬಲಿಸುವ ಮತದಾರರು ನೀಡುತ್ತಾರೆ. ದ್ವಿತೀಯ ಪ್ರಾಶಸ್ತ್ಯದ ಅಥವಾ ಇತರ ಪ್ರಾಶಸ್ತ್ಯದ ಮತಗಳನ್ನು ನೀಡುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಈ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ಈ ಬಗ್ಗೆ ಜಾಗೃತಿಯನ್ನು ಮೂಡಿಸುತ್ತಿದ್ದು, ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಥಮ ಪ್ರಾಶಸ್ತ್ಯದ ಮತವನ್ನು ಮಾತ್ರ ಚಲಾಯಿಸುವಂತೆ ಕೋರುತ್ತಿದೆ. ಒಂದೊಂದೇ ಅಭ್ಯರ್ಥಿಯನ್ನು ಕಣ ಕ್ಕಿಳಿಸಿರುವ ಕಾರಣದಿಂದ ಚುನಾವಣ ಲೆಕ್ಕಾಚಾರದಂತೆ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಗೆಲುವು ಸಲೀಸು.

ಯಾವುದೇ ಅಭ್ಯರ್ಥಿ ಆಯ್ಕೆಗೆ ನಿಗದಿಯಾಗಿರುವ ಮತವನ್ನು ಪ್ರಥಮ ಸುತ್ತಿನಲ್ಲಿ ಪಡೆಯದಿದ್ದರೆ ಆಗ ದ್ವಿತೀಯ ಪ್ರಾಶಸ್ತ್ಯದ ಮತಗಳು ನಿರ್ಣಾ ಯಕವೆನಿಸಲಿದ್ದು ಅವುಗಳನ್ನು ಪರಿ ಗಣಿಸಲಾಗುತ್ತದೆ.

ಇದನ್ನೂ ಓದಿ:ಲಾಕ್‌ಡೌನ್‌ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ನಿರಾಣಿ

ಹಿಂದಿನ ಚುನಾವಣೆಯ ಹಿನ್ನೋಟ
ದ.ಕ. ಸ್ಥಳೀಯಾಡಳಿತ ಚುನಾವಣ ಕ್ಷೇತ್ರಕ್ಕೆ 2015ರ ಡಿ.27ರಂದು ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿದಂತೆ ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದರು. ದ.ಕ.ದಲ್ಲಿ 3,844 ಹಾಗೂ ಉಡುಪಿ ಜಿಲ್ಲೆಯಲ್ಲಿ 2,715 ಸೇರಿ ಒಟ್ಟು 6,559 ಮತದಾರರಿದ್ದರು. ಇದರಲ್ಲಿ ಬಿಜೆಪಿ ಬೆಂಬಲಿತ ಸದಸ್ಯರ ಸಂಖ್ಯೆ ಸುಮಾರು 3,500 ಹಾಗೂ ಕಾಂಗ್ರೆಸ್‌ ಬೆಂಬಲಿತ ಸದಸ್ಯರ ಸಂಖ್ಯೆ ಸುಮಾರು 2,800 ಆಗಿತ್ತು. ಚಲಾಯಿತ ಮತಗಳಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಯವರು 2,977, ಕಾಂಗ್ರೆಸ್‌ನ ಪ್ರತಾಪಚಂದ್ರ ಶೆಟ್ಟಿಯವರು 2,237 ,ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಕೆ. ಜಯಪ್ರಕಾಶ ಹೆಗ್ಡೆ 459 ಮತಗಳನ್ನು ಪಡೆದಿದ್ದರು.

ಮತ ಚಲಾವಣೆ
ವಿಧಾನ ಪರಿಷತ್‌ ಚುನಾವಣೆಯಲ್ಲಿ ಮತಯಂತ್ರಗಳಿರುವುದಿಲ್ಲ. ಬದಲಿಗೆ, ಮತಪತ್ರಗಳಲ್ಲಿ ನಡೆಯುತ್ತಿದ್ದು ಪ್ರಾಶಸ್ತ್ಯದ ಮತಗಳಿರುತ್ತವೆ. ಸ್ಥಳೀಯ ಪ್ರಾಧಿಕಾರದ ಸದಸ್ಯ ಮತದಾರರು ಮತಪತ್ರದಲ್ಲಿ ಪ್ರಾಶಸ್ತ್ಯದ ಮತವನ್ನು 1,2,3 ಸಂಖ್ಯೆಗಳಲ್ಲಿ ಮತಗಟ್ಟೆಯಲ್ಲಿ ನೀಡುವ ಸ್ಕೇಚ್‌ ಪೆನ್ನಿನಲ್ಲಿ ಗುರುತು ಹಾಕಬೇಕು. 1 ಪ್ರಾಶಸ್ತ್ಯ ಮತವನ್ನು ಹಾಕದೆ 2,3, ಇತ್ಯಾದಿ ಸಂಖ್ಯೆಗಳಲ್ಲಿ ಗುರುತಿಸಿದಲ್ಲಿ ಅವರ ಮತವು ತಿರಸ್ಕರಿಸಲ್ಪಡುತ್ತದೆ. ಆದರೆ ಕೇವಲ 1 ಪ್ರಾಶಸ್ತ್ಯವನ್ನು ಮಾತ್ರ ದಾಖಲಿಸಿ ಇತರ ಪ್ರಾಶಸ್ತ್ಯ ಮತಗಳನ್ನು ದಾಖಲಿಸದಿದ್ದರೆ ಆ ಮತ ಸಿಂಧುವಾಗುತ್ತದೆ. ಪ್ರಾಶಸ್ತ್ಯವನ್ನು ಸಂಖ್ಯೆಯಲ್ಲಿ ಮಾತ್ರ ಬರೆಯಬೇಕು. ಅಕ್ಷರದಲ್ಲಿ ಬರೆಯಬಾರದು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.