ಬಸ್ ನಿಲ್ದಾಣದಲ್ಲಿ ಮನೆ ಮಂದಿ ಬರುವಿಕೆಗಾಗಿ ಕಾಯುತ್ತಿರುವ ವಯೋವೃದ್ದೆ..!
Team Udayavani, Dec 1, 2021, 11:19 AM IST
ದಾಂಡೇಲಿ : ನಗರದ ಬಸ್ ನಿಲ್ದಾಣದಲ್ಲಿ ಎಲ್ಲಿಂದಲೊ ಬಂದಿರುವ ವೃದ್ದೆಯೊಬ್ಬರು ಮನೆ ಮಂದಿ ಬರುವಿಕೆಗಾಗಿ ಕಾಯುತ್ತಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮಂಗಳವಾರ ರಾತ್ರಿಯೆ ಬಸ್ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ವೃದ್ದೆ ಕೃಷ್ಣಬಾಯಿಯನ್ನು ನೋಡಿದ ಸ್ಥಳೀಯ ಬಾಂಬೆಚಾಳದ ಯುವಕ ನವೀನ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣವೆ ಸ್ಥಳಕ್ಕಾಗಮಿಸಿದ ಪೊಲೀಸರು ವೃದ್ದೆಯನ್ನು ನವೀನ ಅವರ ಜೊತೆ 112 ತುರ್ತು ವಾಹನದ ಮೂಲಕ ನಗರದೆಲ್ಲೆಡೆ ಕರೆದುಕೊಂಡು ಹೋಗಿ ವಿಳಾಸ ಪತ್ತೆ ಹಚ್ಚಲು ಪ್ರಯತ್ನಿಸಿದ್ದರು. ಕೊನೆಗೆ ವೃದ್ದೆ ಅಸ್ಪಷ್ಟ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಅಜ್ಜಿಯ ವಿಳಾಸ ಪತ್ತೆಯಾಗದೇ ಬಸ್ ನಿಲ್ದಾಣದ ಕ್ಯಾಂಟೀನಿನಲ್ಲಿ ಇರಿಸಿದ್ದಾರೆ.
ಬುಧವಾರ ಮುಂಜಾನೆಯಿಂದ ವೃದ್ದೆ ತನ್ನ ಮನೆ ಮಂದಿ ಬರುವಿಕೆಗಾಗಿ ಕಾಯುತ್ತಿದ್ದಾರೆ. ಆದರೆ ಈವರೇಗೆ ಬಂದಿಲ್ಲ. ಈ ಅಜ್ಜಿಯ ಬಗ್ಗೆ ಮಾಹಿತಿಯಿದ್ದವರು ಅಜ್ಜಿಯ ಮನೆ ಮಂದಿಗೆ ಮಾಹಿತಿ ನೀಡುವಂತೆ ಪೊಲೀಸರು ಕರೆ ನೀಡಿದ್ದಾರೆ.
ಇಂದು ಬೆಳಗ್ಗಿನಿಂದಲೆ ಅಜ್ಜಿಯ ಪತ್ತೆ ಕಾರ್ಯದಲ್ಲಿ ನವೀನ್ ಹಾಗೂ ದಲಿತ ಸಂಘರ್ಷ ಸಮಿತಿ ಕೆಂಪು ಸೇನೆಯ ತಾಲೂಕು ಘಟಕದ ಅಧ್ಯಕ್ಷೆ ಮೀನಾಕ್ಷಿ ಇರ್ಲಾ ಅವರುಗಳು ತೊಡಗಿದ್ದಾರೆ. ಅಜ್ಜಿ ಇದೀಗ ಬಸ್ ನಿಲ್ದಾಣದ ಕ್ಯಾಂಟೀನ್ ಪಕ್ಕದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ