ಕೋತಿಗಳ ಅನುಮಾನಾಸ್ಪದ ಸಾವು..!


Team Udayavani, Dec 1, 2021, 12:21 PM IST

ಮಂಗಗಳ ಅನುಮಾನಾಸ್ಪದ ಸಾವು

Representative Image used

ಬೆಂಗಳೂರು: ಇಲ್ಲಿನ ಬಸವೇಶ್ವರ ನಗರ ಅಪಾರ್ಟ್‌ಮೆಂಟ್‌ವೊಂದರ ಬಳಿ ಮತ್ತೆ ಎರಡು ಕೋತಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಹಿಂದೆ ಜುಲೈ ಒಂದೇ ತಿಂಗಳಲ್ಲಿ ಹತ್ತು ಕೋತಿಗಳು ಮೃತಪಟ್ಟಿದ್ದವು. ಈಗ ಮತ್ತೆ ಎರಡು ಕೋತಿಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಇದು ಎಡೆಮಾಡಿಕೊಟ್ಟಿದೆ.

ಭಾನುವಾರ ಸಂಜೆ ಬಸವೇಶ್ವರನಗರದ ಅಪಾರ್ಟ್‌ಮೆಂಟ್‌ನ ಸಜ್ಜಾದ ಮೇಲೆ ಕೋತಿಯೊಂದು ಸತ್ತಿರುವುದು ಕಂಡುಬಂದಿದೆ. ಬಳಲಿದಂತೆ ಓಡಾಡುತ್ತಿದ್ದ ಮತ್ತೂಂದು ಕೋತಿ ಮಂಗಳವಾರ ಸಾವನ್ನಪ್ಪಿದೆ. ಸ್ಥಳೀಯರ ದೂರಿನ ಮೇರೆಗೆ ಪಾಲಿಕೆ ಅರಣ್ಯ ವಿಭಾಗದ ಸಿಬ್ಬಂದಿ ಎರಡೂ ಕೋತಿಗಳ ಕಳೇಬರವನ್ನು ಮರಣೋತ್ತರ ಪರೀಕ್ಷೆಗೆ ಹೆಬ್ಟಾಳದ ಪಶುವೈದ್ಯಕೀಯ ಕಾಲೇಜಿಗೆ ಕಳುಹಿಸಿ ದ್ದಾರೆ.

ಈ ಮಧ್ಯೆ ಘಟನೆಗಳು ಪುನರಾವರ್ತನೆ ಆಗುತ್ತಿರುವುದು ಅನುಮಾನಗಳಿಗೆ ಕಾರಣವಾಗಿದ್ದು, ನಗರದಲ್ಲಿ ಕೋತಿ ಗಳ ಹಾವಳಿ ಹೆಚ್ಚಾಗಿದ್ದು, ಅವುಗಳ ಕಾಟದಿಂದ ತಪ್ಪಿಸಿಕೊಳ್ಳಲು ಕೆಲವರು ವಿಷಹಾರ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಪ್ರಾಣಿಗಳಿಗೆ ಯಾರು ಮತ್ತು ಯಾಕೆ ವಿಷ ಹಾಕುತ್ತಿದ್ದಾರೆ ಎಂಬುದು ನಿಗೂಢವಾಗಿದೆ.

ಇದನ್ನೂ ಓದಿ;-  ಮಣಿಪಾಲ: ಹಲ್ಲೆಗೊಳಗಾದ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವರು

ಯಾರೊಬ್ಬರೂ ದೂರು ಕೂಡ ದಾಖಲಿಸಿಲ್ಲ. ಯಾರಾದರೂ ದೂರು ನೀಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಡುಮಲ್ಲೇಶ್ವರ ವಲಯ ಅರಣ್ಯ ಅಧಿಕಾರಿ ತಿಳಿಸಿದರು.

ಹಳಸಿದ ಆಹಾರವೂ ವಿಷವೇ: ಕೋತಿಗಳು ಅಪಾರ್ಟ್‌ಮೆಂಟ್‌ಗಳಲ್ಲಿ ಆಹಾರ ಅರಸಿಕೊಂಡು ಹೋಗುತ್ತವೆ. ಆಗ ಎರಡು ಮೂರು ದಿನಗಳ ಹಿಂದಿನ ಆಹಾರ ಹಾಕಿದಲ್ಲಿ ಅಥವಾ ಆಹಾರವಿಟ್ಟು ಮೂರ್‍ನಾಲ್ಕು ದಿನಗಳ ನಂತರ ಕೋತಿಗಳು ಸೇವಿಸಿದಲ್ಲಿ ಅದು ವಿಷವಾಗಿ ಪರಿಣಮಿಸುತ್ತದೆ. ಇದರಿಂದಲೂ ಸಾವನ್ನಪ್ಪುವ ಸಾಧ್ಯತೆಯಿದ್ದು, ಈ ಬಗ್ಗೆ ಮರಣೋತ್ತರ ಪರೀಕ್ಷೆ ನಂತರ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

ನಗರದಲ್ಲಿ ಒಂದು ಲಕ್ಷಕ್ಕೂ ಅಧಿಕ ಕೋತಿಗಳಿದ್ದು, ಅವುಗಳನ್ನು ಒಂದೆಡೆ ಬಿಡಲು ಕೋತಿಗಳ ಉದ್ಯಾನ ನಿರ್ಮಿಸಲು ಬಿಬಿಎಂಪಿ ಚಿಂತನೆ ನಡೆಸಿತ್ತು. ಆದರೆ, ಸರ್ಕಾರದಿಂದ ಇದಕ್ಕೆ ಹಸಿರುನಿಶಾನೆ ಸಿಗದ ಹಿನ್ನೆಲೆಯಲ್ಲಿ ಕೋತಿಗಳ ಉದ್ಯಾನ ನಿರ್ಮಾಣದ ಕಾರ್ಯ ನೆನಗುದಿಗೆ ಬಿದ್ದಿದೆ.

ಟಾಪ್ ನ್ಯೂಸ್

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.