2.5 ಲಕ್ಷ ವೆಚ್ಚದಲ್ಲಿ ಡಿಜಿಟಲ್‌ ಲೈಬ್ರರಿ ನಿರ್ಮಾಣ


Team Udayavani, Dec 1, 2021, 6:03 PM IST

new library

ಕನಕಪುರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವಂತೆ ಡಿಜಿಟಲ್‌ ಲೈಬ್ರರಿ ನಿರ್ಮಾಣ ಮಾಡಿ ಕೊಳ್ಳಿಗನಹಳ್ಳಿ ಗ್ರಾಪಂ ಅಧಿಕಾರಿಗಳು ಗಮನ ಸೆಳೆದಿದ್ದಾರೆ.

ತಾಲೂಕಿನ ಹಾರೋಹಳ್ಳಿ ಹೋಬಳಿಯ ಕೊಳ್ಳಿಗನಹಳ್ಳಿ ಗ್ರಾಪಂ ಕಟ್ಟಡದಲ್ಲೇ 2.5 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಸುಸಜ್ಜಿತವಾದ ಡಿಜಿಟಲ್‌ ಲೈಬ್ರರಿ ನಿರ್ಮಾಣಗೊಂಡಿದೆ. ಇದೇ ಕಟ್ಟಡದಲ್ಲಿ ಇದ್ದ ಲೈಬ್ರರಿ ಕೇವಲ ಬೆರಳೆಣಿಕೆಯಷ್ಟು ಪುಸ್ತಕಗಳಿಗೆ ಮಾತ್ರ ಸೀಮಿತವಾಗಿತ್ತು.

ಗ್ರಂಥಾಲಯಕ್ಕೆ ಹೈಟೆಕ್‌ ಸ್ಪರ್ಶ: ಕೊಳ್ಳಿಗನಹಳ್ಳಿ ಗ್ರಾಪಂ ಅಧಿಕಾರಿಗಳು ಹಳೆಯ ಕಟ್ಟಡಕ್ಕೆ ಆಧುನಿಕ ಸ್ಪರ್ಶ ನೀಡಿ ಕೊಠಡಿಯಲ್ಲಿ ಟೈಲ್ಸ್ ಮತ್ತು ಓದುಗರು ಕುಳಿತುಕೊಳ್ಳಲು ಸುಸಜ್ಜಿತವಾದ ಆಸನ ಮತ್ತು ಪೀಠೊಪಕರಣ ವ್ಯವಸ್ಥೆ ಕಲ್ಪಿಸಿದ್ದಾರೆ.

ಈ ಗ್ರಂಥಾಲಯದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲವಾಗುವ ಸಾಮಾನ್ಯ ಜ್ಞಾನ, ಗ್ರಂಥಾಲಯ, ವಿಶ್ವಕೋಶ, ಪ್ರಾಚೀನ ಭಾರತ ಸೇರಿದಂತೆ ಪತ್ರಿಕೋದ್ಯಮದ ಪುಸ್ತಕಗಳು ಲಭ್ಯವಿದೆ. ಲೈಬ್ರರಿಗೆ ಬರುವ ವಿವಿಧ ಅಭಿರುಚಿಯುಳ್ಳ ಓದುಗರಿಗೆ ಪುಸ್ತಕಗಳು ಸರಳ ವಾಗಿ ಕೈಗೆ ಸಿಗುವ ವ್ಯವಸ್ಥೆ ಕಲ್ಪಿಸಲಾಗಿದೆ.

ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಬಿಡುವಿನ ಸಮಯದಲ್ಲಿ ಲೈಬ್ರರಿಯನ್ನು ಸದ್ಬಳಕೆ ಮಾಡಿಕೊಳ್ಳುತ್ತಿರುವುದು ಗ್ರಾಪಂ ಅಧಿಕಾರಗಳ ಶ್ರಮ ಸಾರ್ಥಕವಾಗಿದೆ.

ಉನ್ನತ ಶಿಕ್ಷಣದ ಮಾರ್ಗದರ್ಶನ: ಎಲ್ಲಕ್ಕಿಂತ ಮುಖ್ಯವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಮತ್ತು ಉನ್ನತ ಶಿಕ್ಷಣದ ಬಗ್ಗೆ ಮಾರ್ಗದರ್ಶನ ನೀಡುತ್ತಿರುವುದು ಲೈಬ್ರರಿಯ ಮತ್ತೂಂದು ವಿಶೇಷ. ಗ್ರಾಮೀಣ ಭಾಗದ ಮಕ್ಕಳಿಗೆ ಜ್ಞಾನಾರ್ಜನೆಯ ಜೊತೆಗೆ ಮಕ್ಕಳಲ್ಲಿ ಕೌಶಲ್ಯಾಧಾರಿ ತ ಮತ್ತು ಉನ್ನತ ಶಿಕ್ಷಣದ ಬಗ್ಗೆ ವಾರದಲ್ಲಿ ಒಂದು ದಿನ ಯೂತ್‌ ಸ್ಕಿಲ್‌ ಡೆವಲಪ್ಮೆಂಟ್ ಎಂಬ ಕಾರ್ಯಾಗಾರದ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ. ‌

ಅಕ್ಷರ ಫೌಂಡೇಶನ್‌ ಮತ್ತು ಡೆಲ್‌ ಸಂಸ್ಥೆ ವತಿಯಿಂದ ಪ್ರತಿ ಸೋಮವಾರ ಬೆಳಗ್ಗೆ 10 ರಿಂದ 11.30ರವರೆಗೂ ನಡೆಯುವ ಈ ಕಾರ್ಯಾಗಾರದಲ್ಲಿ ಕಾಲೇಜು ವಿದ್ಯಾರ್ಥಿಗಳು ಇಟ್ಟುಕೊಂಡಿರುವ ಗುರಿ ಮತ್ತು ಧ್ಯೇಯ ಮುಟ್ಟ ಬೇಕಾದರೆ ಯಾವ ಹಂತದಲ್ಲಿ ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬೇಕು.

ಅನಿವಾರ್ಯ ಸಂದರ್ಭಗಳಲ್ಲಿ ಉದ್ಯೋಗದ ಜೊತೆಜೊತೆಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶಗಳ ಬಗ್ಗೆ ಹಾಗೂ ವೃತ್ತಿಪರ ಕೌಶಲ್ಯದ ಬಗ್ಗೆಯೂ ಕಾರ್ಯಾಗಾರದಲ್ಲಿ ಬೆಳಕು ಚೆಲ್ಲಲಾಗುತ್ತಿದೆ. ಕೊಳ್ಳಿಗನಹಳ್ಳಿ ಗ್ರಾಪಂ ವ್ಯಾಪ್ತಿಯ ಸೊಂಟೆನಹಳ್ಳಿ, ಕಡಸಿಕೊಪ್ಪ, ನಾರಾಯಣಪುರ ಸೇರಿದಂತೆ ಸುಮಾರು 18 ಗ್ರಾಮಗಳಲ್ಲಿರುವ ಸುಮಾರು 600ಕ್ಕೂ ಹೆಚ್ಚು ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಬಹುದು. ಗ್ರಾಪಂ ಅಧಿಕಾರಿಗಳ ಕಾರ್ಯವೈಖರಿಗೆ ಸ್ಥಳೀ ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.