ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ಗೋ ಸಾಗಾಟ ತಡೆದ ವೇಳೆ ಗಾಯಗೊಂಡಿದ್ದವರ ಆರೋಗ್ಯ ವಿಚಾರಣೆ

Team Udayavani, Dec 2, 2021, 7:25 AM IST

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ್ಯೂ ಗೋ ಹತ್ಯೆ ನಡೆಯುತ್ತಿರುವುದಕ್ಕೆ ತೀವ್ರ ನೋವಿದೆ. ಗೋ ಕಳ್ಳರನ್ನು ಸಂಪೂರ್ಣವಾಗಿ ಬಲೆ ಹಾಕುವ ತನಕ ಬಿಡುವುದಿಲ್ಲ ಮತ್ತು ಪೊಲೀಸ್‌ ಇಲಾಖೆಯನ್ನು ಬಲಪಡಿಸಲಿದ್ದೇವೆ ಪಂಚಾಯತ್‌ರಾಜ್‌ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ತೀರ್ಥಹಳ್ಳಿಯ ಮೇಳೆಗೆ ಸಮೀಪದ ಕೂಳೂರು ಮಾರ್ಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿರುವುದನ್ನು ತಡೆಯಲು ಯತ್ನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರಿಬ್ಬರ ಮೇಲೆ ಪಿಕ್‌ಅಪ್‌ ಹತ್ತಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದರು. ಕೆಎಂಸಿಯಲ್ಲಿ ದಾಖಲಾಗಿದ್ದ ಕಾರ್ಯಕರ್ತರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಆನಂತರ ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದು, ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದಲ್ಲಿದ್ದಾಗಲೂ ಗೋ ರಕ್ಷರ ಮೇಲೆ ಮಾರಣಾಂತಿಕ ಹಲ್ಲೆ ನಡೆಯುತ್ತಿರುವುದರಿಂದ ಮೈ ಕುದಿಯುತ್ತಿದೆ. ಇಂತಹ ವಿಷಯದಲ್ಲಿ ಪೊಲೀಸರು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳುವ ಬಗ್ಗ ಗೃಹ ಸಚಿವರೊಂದಿಗೂ ಚರ್ಚೆ ಮಾಡಲಾಗುತ್ತದೆ. ಗೋ ಹತ್ಯೆ ಮಾಡುವವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಿದ್ದೇವೆ. ಇದಕ್ಕಾಗಿ ಕಾಯ್ದೆಗೆ ಇನ್ನಷ್ಟು ತಿದ್ದುಪಡಿ ತರಲಿದ್ದೇವೆ. ಬಿಜೆಪಿ ಶಾಸಕರು ಯವುದೇ ಕಾರಣಕ್ಕೂ ಗೋ ಹಂತಕರಿಗೆ ಬೆಂಬಲ ನೀಡುವುದಿಲ್ಲ ಎಂದರು.

ಕಾಂಗ್ರೆಸ್‌ ಸರಕಾರ ಇದ್ದಾಗ ಗೋ ರಕ್ಷಕರ ಮೇಲೆ ಕೇಸ್‌ ಹಾಕಿಸುವ ಪ್ರಯತ್ನ ನಡೆಸಿದ್ದರು. ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರದ್ದು ಮಾಡಿದ್ದರು. ಈಗಲೂ ಗೋ ಹತ್ಯೆ ಸಂಪೂರ್ಣವಾಗಿ ನಿಂತಿಲ್ಲ. ಆದರೆ, ಈ ಹಿಂದೆ ನಡೆಯುತ್ತಿದ್ದಷ್ಟು ನಡೆಯುತ್ತಿಲ್ಲ. ಗೋ ರಕ್ಷಣೆಯಲ್ಲಿ ಹಲ್ಲೆಗೆ ಒಳಗಾದ ಕಾರ್ಯಕರ್ತರ ಆಸ್ಪತ್ರೆ ವೆಚ್ಚ ಅವರ ಕುಟುಂಬದ ಮೇಲೆ ಬೀಳದಂತೆ ಎಲ್ಲ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ, ಹಿಂದೂ ಸಂಘಟನೆಯ ವಾಸುದೇವ, ದಯಾಳು, ಕಾಂತೇಶ್‌ ಇದ್ದರು.

ನಿರಾಣಿ ಸಿಎಂ ಆಗುತ್ತಾರೆ ಎಂದಿದ್ದು ನಿಜ
ಮುರುಗೇಶ್‌ ನಿರಾಣಿಯವರು ಸಣ್ಣ ಉದ್ಯಮದಿಂದ ದೇಶಕ್ಕೆ ಮಾದರಿಯಾಗುವ ದೊಡ್ಡ ಸಕ್ಕರೆ ಕಾರ್ಖಾನೆಯನ್ನು ಕಟ್ಟಿ ಬೆಳೆಸಿದ್ದಾರೆ. ಅವರಲ್ಲಿ ಕೌಶಲ, ಬುದ್ದಿವಂತಿಕೆಯಿದೆ. ಮುಂದೊಂದು ದಿನ ಮುಖ್ಯಮಂತ್ರಿಯಾಗಬಹುದು ಎಂದು ಹೇಳಿದ್ದೇನೆ. ಆದರೆ, ಈಗಲೇ ಮುಖ್ಯಮಂತ್ರಿ ಬದಲಾಗಿ ನಿರಾಣಿಯವರು ಹೊಸ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿಲ್ಲ. ಈ ಹಿಂದೆ ನನ್ನನ್ನು ಸಂಘಟನೆಯೆ ಉಪಮುಖ್ಯಮಂತ್ರಿ ಮಾಡಿದ್ದು. ಮುಂದೆಯೂ ಸಂಘಟನೆ ಏನು ಮಾಡುತ್ತದೋ ಅದು ಆಗುತ್ತದೆ ಎಂದರು.

ಮೊಟ್ಟೆ ನೀಡುತ್ತೇವೆ
ಸರಕಾರದ ಯೋಜನೆ, ಕಾರ್ಯ ಕ್ರಮಗಳನ್ನು ವಿರೋಧಿಸುವುದ ಕ್ಕಾಗಿಯೇ ಕೆಲವರು ಇದ್ದಾರೆ. ಮೊಟ್ಟೆ ನೀಡುತ್ತಿರುವುದು ಇದೇ ಮೊದಲಲ್ಲ. ದೇಶದಲ್ಲಿ ಅನೇಕ ಸರಕಾರಗಳು ಮೊಟ್ಟೆ ನೀಡಿವೆ. ಜನರ ಹಿತದೃಷ್ಟಿಯಿಂದ ಆಯಾ ಇಲಾಖೆಗಳು ಕ್ರಮ ತೆಗೆದುಕೊಳ್ಳಲಿವೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡಬೇಕೋ, ಸೇಬು ನೀಡಬೇಕೋ ಎಂಬುದನ್ನು ಸರಕಾರ ನಿರ್ಧರಿಸಲಿದೆ ಎಂದು ಈಶ್ವರಪ್ಪ ಹೇಳಿದರು.

 

ಟಾಪ್ ನ್ಯೂಸ್

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.