ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು
ನಾನು ತರಗತಿಯೊಳಗೆ ಬಂದಾಗ, ಚಿರತೆ ಇದ್ದಿರುವುದು ಕಾಣಿಸಿತ್ತು.
Team Udayavani, Dec 2, 2021, 1:10 PM IST
ಲಕ್ನೋ: ಉತ್ತರಪ್ರದೇಶದ ಅಲಿಗಢ್ ನಲ್ಲಿನ ಶಾಲೆಯೊಂದಕ್ಕೆ ಚಿರತೆಯೊಂದು ನುಗ್ಗಿ ತರಗತಿಯಲ್ಲಿದ್ದ ವಿದ್ಯಾರ್ಥಿಯೊಬ್ಬನ ಮೇಲೆ ದಾಳಿ ನಡೆಸಿರುವ ಘಟನೆ ಬುಧವಾರ(ಡಿಸೆಂಬರ್ 01) ನಡೆದಿದೆ.
ಇದನ್ನೂ ಓದಿ:ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ
ಅಲಿಗಢ್ ನ ಚೌಧರಿ ನಿಹಾಲ್ ಸಿಂಗ್ ಇಂಟರ್ ಕಾಲೇಜಿನ ತರಗತಿಯೊಳಕ್ಕೆ ಚಿರತೆಯೊಂದು ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ನಡೆಸಿತ್ತು. ಬಳಿಕ ಚಿರತೆಯನ್ನು ಕ್ಲಾಸ್ ರೂಂನೊಳಕ್ಕೆ ಕೂಡಿಹಾಕಲಾಗಿತ್ತು. ತರಗತಿಯೊಳಗೆ ಚಿರತೆ ನುಗ್ಗಿದ ವಿಷಯ ತಿಳಿದು, ಶಾಲೆಯ ಹೊರಗೆ ಸಿಬಂದಿಗಳು, ವಿದ್ಯಾರ್ಥಿಗಳು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅಲ್ಲದೇ ಅರಣ್ಯಾಧಿಕಾರಿಗಳು ಚಿರತೆಯನ್ನು ಹಿಡಿದು ಕೊಂಡೊಯ್ಯುವವರೆಗೆ ತರಗತಿಯ ಹೊರಗೆ ಕಾಯುವಂತಾಗಿತ್ತು ಎಂದು ವರದಿ ವಿವರಿಸಿದೆ.
“ನಾನು ತರಗತಿಯೊಳಗೆ ಬಂದಾಗ, ಚಿರತೆ ಇದ್ದಿರುವುದು ಕಾಣಿಸಿತ್ತು. ಕೂಡಲೇ ನಾನು ಹೊರಗೆ ಬರುತ್ತಿದ್ದಾಗ, ನನ್ನ ಮೇಲೆ ದಾಳಿ ನಡೆಸಿತ್ತು” ಎಂದು ಘಟನೆಯಲ್ಲಿ ಗಾಯಗೊಂಡಿರುವ ವಿದ್ಯಾರ್ಥಿ ಲಕ್ಕಿ ರಾಜ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾನೆ.
ವಿದ್ಯಾರ್ಥಿ ಕೈಗೆ ಗಾಯವಾಗಿದ್ದು, ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದಾಗಿ ಕಾಲೇಜು ಪ್ರಾಂಶುಪಾಲರಾದ ಯೋಗೇಶ್ ಯಾದವ್ ತಿಳಿಸಿದ್ದಾರೆ. ವಿದ್ಯಾರ್ಥಿ ಹೊರಬಂದ ಕೂಡಲೇ ಕೋಣೆಗೆ ಬೀಗ ಹಾಕಿ, ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದರು. ತರಗತಿಯೊಳಗೆ ಅಡ್ಡಾಡುತ್ತಿರುವ ಚಿರತೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದಾಗಿ ವರದಿ ಹೇಳಿದೆ.
ವಿಡಿಯೋ ಕೃಪೆ: ಟಿವಿ9
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ