ಹಾಸನಕ್ಕೆ ಐಐಟಿ: ಮತ್ತೆ ಚಿಗುರೊಡೆದ ಕನಸು


Team Udayavani, Dec 2, 2021, 3:18 PM IST

PM with DEVEGAWDA

ಹಾಸನ: ಐಐಟಿ ಸ್ಥಾಪನೆಯಾಗಬೇಕೆಂಬ ಹಾಸನ ಜಿಲ್ಲೆಯ ಜನರ ಕನಸು ಮತ್ತೆ ಚಿಗುರೊಡೆದಿದೆ. ಎರಡೂವರೆ ದಶಕಗಳ ಹಿಂದೆ ಎಚ್‌.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಹಾಸನಕ್ಕೆ ಐಐಟಿ ಮಂಜೂರಾತಿಯ ಪ್ರಯತ್ನ ನಡೆದಿತ್ತು. ರಾಜಕೀಯ ಕಾರಣಗಳಿಂದಾಗಿ ಹಾಸನಕ್ಕೆ ಮರೀಚಿಕೆಯಾಗಿದ್ದ ಐಐಟಿ ಕನಸು ನನಸಾಗುವ ಆಶಯ ಮೂಡಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಭೇಟಿಯಾಗಿ ಹಾಸನಕ್ಕೆ ಐಐಟಿ ಮಂಜೂರು ಮಾಡಬೇಕೆಂದು ಮನವಿ ಮಾಡಿದ್ದಾರೆ. ನನ್ನ ಕನಸಿನ ಯೋಜನೆಯನ್ನು ಮಂಜೂರು ಮಾಡಬೇಕು ಎಂಬ ಗೌಡರ ಬೇಡಿಕೆಗೆ ಪ್ರಧಾನಿ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂಬದು ಹಾಸನದವರ ಪಾಲಿಗೆ ಸದ್ಯಕ್ಕೆ ಸಿಹಿ ಸುದ್ದಿ.

ಕನಸು ಕನಸಾಗಿಯೇ ಉಳಿದಿತ್ತು: 1996ರಲ್ಲಿ ಎಚ್‌ .ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಹಾಸನದಲ್ಲಿ ಐಐಟಿ ಸ್ಥಾಪನೆಯ ಪ್ರಯತ್ನ ನಡೆದಿತ್ತು. ಹಾಸನ – ಬೆಂಗಳೂರು ನೂತನ ರೈಲು ಮಾರ್ಗ ನಿರ್ಮಾಣಕ್ಕೆ ವಿಶೇಷ ಆಸಕ್ತಿ ವಹಿಸಿ ಯಶಸ್ವಿಯಾಗಿದ್ದ ದೇವೇಗೌಡರ ಪುತ್ರ, ಅಂದಿನ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರು ಐಐಟಿ ಸ್ಥಾಪನೆಗೂ ಪ್ರಸ್ತಾವನೆ ಸಿದ್ಧಪಡಿಸಿದ್ದರು.

ಇದನ್ನೂ ಓದಿ:- ನೂತನ ಕಾಂಗ್ರೆಸ್ ಕಚೇರಿ ಉದ್ಘಾಟನೆ

ಅಂದು ದೇವೇಗೌಡರ ಸಚಿವ ಸಂಪುಟದಲ್ಲಿ ಎಸ್‌.ಆರ್‌.ಬೊಮ್ಮಾಯಿ ಅವರು ಮಾನವ ಸಂಪನ್ಮೂಲ ಸಚಿವರಾಗಿದ್ದರಿಂದ ಕರ್ನಾಟಕಕ್ಕೆ ಅದರಲ್ಕೂ ಹಾಸನಕ್ಕೆ ಐಐಟಿ ಮಂಜೂರಾತಿ ಆಗಿಯೇ ಬಿಟ್ಟಿತು ಎನ್ನುವಷ್ಟರಲ್ಲಿ ಗೌಡರು ಪ್ರಧಾನಿ ಹುದ್ದೆಯಿಂದ ಇಳಿದರು. ಹಾಗಾಗಿ ಹಾಸನದ ಐಐಟಿ ಕನಸು ಕನಸಾಗಿಯೇ ಉಳಿದಿತ್ತು.

 ಐಐಟಿಗಾಗಿ 1,050 ಎಕರೆ ಸ್ವಾಧೀನ: ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗಲೂ ದೇವೇಗೌಡರು ನಡೆಸಿದ್ದ ಪ್ರಯತ್ನ ಸಫ‌ಲವಾಗಿರಲಿಲ್ಲ. ಆನಂತರ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಐಐಟಿ ಮಂಜೂ ರಾತಿಯ ಪ್ರಯತ್ನವನ್ನು ದೇವೇಗೌಡರು ಮತ್ತು ರೇವಣ್ಣ ಅವರು ಮುಂದುವರಿಸಿದ್ದರು.

2004ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಹಾಸನದಲ್ಲಿ ಐಐಟಿ ಸ್ಥಾಪನೆಯ ಪ್ರಯತ್ನ ಮರುಜೀವ ಪಡೆಯಿತು. ಅಂದು ಕೇಂದ್ರ ಸರ್ಕಾರದಲ್ಲಿ ಮಾನವ ಸಂಪನ್ಮೂಲ ಸಚಿವರಾಗಿದ್ದ ಅರ್ಜುನ್‌ಸಿಂಗ್‌ ಅವರು ಹಾಸನಕ್ಕೆ ಐಐಟಿ ಮಂಜೂರಾತಿಯ ಖಚಿತ ಭರವಸೆ ನೀಡಿದ್ದರಿಂದ ಹಾಸನದಲ್ಲಿ ಐಐಟಿಗಾಗಿ 1,050 ಎಕರೆಯನ್ನೂ ಸ್ವಾಧೀನಪಡಿಸಿಕೊಳ್ಳಲಾಯಿತು.

ಆದರೆ, ಅರ್ಜುನ್‌ಸಿಂಗ್‌ ಅವರಿಂದ ಮಾನವ ಸಂಪನ್ಮೂಲ ಖಾತೆ ಬದಲಾಯಿತು. ಹಾಸನದ ಐಐಟಿ ಕನಸೂ ಕನಸಾಗಿಯೇ ಉಳಿಯಿತು. ಹಾಸನ ಹೆಸರು ನಮೂದಿಸದೆ ತಪ್ಪಿತ್ತು ಐಐಟಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರವೂ ಐಐಟಿ ಮಂಜೂರಾತಿಯ ಪ್ರಯತ್ನ ಮುಂದುವರಿಯಿತು. ಆ ಪ್ರಯತ್ನದ ಫ‌ಲವಾಗಿ ಕರ್ನಾಟಕಕ್ಕೆ ಐಐಟಿ ಮಂಜೂರಾತಿಯೂ ಆಯಿತು.

ಆದರೆ, ಉತ್ತರ ಕರ್ನಾಟಕದಲ್ಲಿಯೇ ಐಐಟಿ ಸ್ಥಾಪನೆಯಾಗಬೇಕೆಂಬ ಹೋರಾಟ ಹಾಗೂ ಅಂದು ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ರಾಜಕೀಯ ಕಾರಣಕ್ಕೆ ಹಾಸನವನ್ನು ಕಡೆಗಣಿಸಿದ್ದರಿಂದ ಐಐಟಿ ಧಾರವಾಡದ ಪಾಲಾಯಿತು. ಅಂದು ರಾಜ್ಯ ಸರ್ಕಾರ ಐಐಟಿ ಸ್ಥಾಪನೆಯ ಸ್ಥಳ ಆಯ್ಕೆಯಲ್ಲಿ ಧಾರವಾಡ ಮತ್ತು ಮೈಸೂರು ಹೆಸರಿನೊಂದಿಗೆ ಹಾಸನದ ಹೆಸರನ್ನೂ ಸೇರಿದ್ದರೆ, ಅಂದು ಹಾಸನಕ್ಕೆ ಐಐಟಿ ಮಂಜೂರಾಗುವ ಸಾಧ್ಯತೆ ಇತ್ತು.

ಆದರೆ, ಅಂದು ರಾಜ್ಯ ಸರ್ಕಾರ ಧಾರವಾಡ ಮತ್ತು ಮೈಸೂರನ್ನು ಮಾತ್ರ ನಮೂದಿಸಿದ್ದರಿಂದ ಐಐಟಿ ಹಾಸನಕ್ಕೆ ತಪ್ಪಿತ್ತು. ಆದರೆ, ಐಐಟಿಗಾಗಿ ಹಾಸನದಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಭೂಮಿ ಇಂದಿಗೂ ಐಐಟಿಗಾಗಿಯೇ ಮೀಸಲಾಗಿ ಉಳಿದಿದೆ. ಹಾಸನಕ್ಕೆ ಮಂಜೂರು ಮಾಡಲು ಮನವಿ: ಈಗ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಹಾಸನಕ್ಕೆ ಐಐಟಿಗಾಗಿ ನಡೆಸಿದ ಹೋರಾಟವನ್ನು ವಿವರಿಸುವುದರ ಜೊತೆಗೆ ದೇಶದ ಕೆಲವು ರಾಜ್ಯಗಳಲ್ಲಿ ಎರಡು ಐಐಟಿ ಗಳಿವೆ.

ಅದನ್ನಾಧರಿಸಿ ಕರ್ನಾಟಕಕ್ಕೆ ಮತ್ತೂಂದು ಐಐಟಿಯನ್ನು ಹಾಸನಕ್ಕೆ ಮಂಜೂರು ಮಾಡಿ ಎಂದು ಮನವಿ ಮಾಡಿದ್ದಾರೆ. ಭೂ ಸ್ವಾಧೀನದ ಸಮಸ್ಯೆ ಇಲ್ಲದಿರುವುದರಿಂದ ಹಾಗೂ ದಕ್ಷಿಣ ಕರ್ನಾಟಕಕ್ಕೂ ಒಂದು ಐಐಟಿ ಅವಶ್ಯಕತೆಯನ್ನು ಕೇಂದ್ರ ಸರ್ಕಾರ ಮನಗಂಡು ಹಾಸನಕ್ಕೆ ಐಐಟಿ ಮಂಜೂರು ಮಾಡಬಹುದೆಂಬ ಹಾಸನ ಜಿಲ್ಲೆಯ ಜನರ ಕನಸು ಮತ್ತೆ ಚಿಗುರೊಡೆದಿದೆ. ಈಗಲಾದರೂ ಕನಸು ನನಸಾಗಲಿ ಎಂಬ ಅಶಯ ಜಿಲ್ಲೆಯ ಜನರದ್ದು.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.