ಕೆಎಫ್‌ಡಿ ನಿಯಂತ್ರಣಕ್ಕೆ ಕೊರೊನಾ ಲಸಿಕೆ ಅಡ್ಡಿ

ಲಸಿಕೆ ಪಡೆದವರು ಮಂಗನಕಾಯಿಲೆ ಲಸಿಕೆ ಪಡೆಯಲು ಹಿಂದೇಟು

Team Udayavani, Dec 2, 2021, 4:30 PM IST

covid

ಶಿವಮೊಗ್ಗ: ಮಲೆನಾಡನ್ನೇ ತಲ್ಲಣಗೊಳಿಸುವ ಕೆಎಫ್‌ಡಿ ವೈರಸ್‌ ಕಡಿವಾಣಕ್ಕೆ ಈಗ ಕೊರೊನಾ ವ್ಯಾಕ್ಸಿನೇಷನ್‌ ಅಡ್ಡಿಯಾಗಿದೆ. ಕೋವಿಡ್‌ ಲಸಿಕೆ ಪಡೆದವರು ಮಂಗನಕಾಯಿಲೆ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದು ಲಸಿಕಾಕರಣ ಗುರಿ ತಲುಪುತ್ತಿಲ್ಲ.

ಸಾಮಾನ್ಯವಾಗಿ ಡಿಸೆಂ ಬರ್‌ನಿಂದ ಜೂನ್‌ವರೆಗೆ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌) ಅಥವಾ ಮಂಗನ ಕಾಯಿಲೆ ಇರುತ್ತದೆ. 2019ರಲ್ಲಿ ಕೆಎಫ್‌ಡಿ ಪ್ರಕರಣಗಳು ಉಲ½ಣಗೊಂಡು ಅಪಾರ ಸಾವು- ನೋವು ಸಂಭವಿಸಿದ್ದವು. ನಂತರ ಹಲವು ಉಪಕ್ರಮಗಳು ವೈರಸ್‌ ಕಡಿವಾಣಕ್ಕೆ ಕಾರಣವಾಗಿತ್ತು. ಅದರಲ್ಲಿ ವ್ಯಾಕ್ಸಿನೇಷನ್‌ ಕೂಡ ಒಂದು. ಕೆಎಫ್‌ಡಿ ಬಾಧಿತ ಗ್ರಾಮಗಳಲ್ಲಿ ಮೊದಲಿನಿಂದಲೂ ಲಸಿಕೆ ನೀಡಲಾಗುತ್ತಿದೆ. ಎರಡು ಡೋಸ್‌ ಲಸಿಕೆ ಹಾಗೂ ಒಂದು ಬೂಸ್ಟರ್‌ ಡೋಸ್‌ ಪಡೆದ ವ್ಯಕ್ತಿಗಳು ಕೆಎಫ್‌ಡಿ ಸೋಂಕಿಗೆ ಒಳಗಾಗುತ್ತಿರಲಿಲ್ಲ. ಮೊದಲು ಸಾಕಷ್ಟು ಹಿಂಜರಿಕೆ ಕಾರಣ ಗುರಿ ಮುಟ್ಟಲು ಆಗುತ್ತಿರಲಿಲ್ಲ. 2019ರ ಭೀಕರತೆ ನಂತರ ಜನರು ಲಸಿಕೆ ಪಡೆಯಲು ಮುಂದಾಗಿದ್ದರು. ಆದರೆ ಈ ವರ್ಷ ಕೋವಿಡ್‌ ಲಸಿಕೆ ನೀಡುತ್ತಿರುವ ಪರಿಣಾಮ ಜನರು ಕೆಎಫ್ಡಿ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ.

ಕೋವಿಡ್‌ ಲಸಿಕೆ ಪಡೆದವರಲ್ಲಿ ಹಲವು ದಿನಗಳವರೆಗೆ ಮೈ ಕೈ ನೋವು ಕಾಣಿಸಿಕೊಳ್ಳುತ್ತಿದೆ. ಕೋವಿಡ್‌ ಲಸಿಕೆ ಪಡೆದ ಮೇಲೆ ಎರಡನೇ ಡೋಸ್‌ ಪಡೆಯಲೇಬೇಕು. ಇತ್ತ ಕೆಎಫ್‌ಡಿ ಲಸಿಕೆ ಕೂಡ ತಿಂಗಳ ಅಂತರದಲ್ಲಿ ಮೂರು ಬಾರಿ ಪಡೆಯಬೇಕು. ಕೆಎಫ್‌ಡಿ ಲಸಿಕೆ ಪಡೆದವರಲ್ಲೂ ಉರಿ ಕಾಣಿಸಿಕೊಳ್ಳುವುದು ಸಾಮಾನ್ಯ. ಸರಕಾರ ಕೋವಿಡ್‌ ಲಸಿಕೆ ಪಡೆಯಲು ಜಾಗೃತಿ ಮೂಡಿಸುತ್ತಿದ್ದು ಗ್ರಾಮೀಣ ಭಾಗದಲ್ಲಿ ಹೆಚ್ಚೆಚ್ಚು ಲಸಿಕಾಕರಣ ಕಾರ್ಯಕ್ರಮ ನಡೆಯುತ್ತಿರುವುದರಿಂದ ಕೆಎಫ್‌ಡಿ ಲಸಿಕೆ ಪಡೆಯಬೇಕಿದ್ದ ಜನರು ಕೋವಿಡ್‌ ಲಸಿಕೆ ಪಡೆಯುತ್ತಿದ್ದಾರೆ. ಇದೇ ಕಾರಣಕ್ಕೆ ಕೆಎಫ್‌ಡಿ ಲಸಿಕೆ ಗುರಿ ಮುಟ್ಟುತ್ತಿಲ್ಲ. ಕೋವಿಡ್‌ ಲಸಿಕೆ ಪಡೆದ 14 ದಿನಗಳ ನಂತರ ಕೆಎಫ್‌ಡಿ ಲಸಿಕೆ ಹಾಕಿಸಿಕೊಳ್ಳಬಹುದು. ಯಾವುದೇ ಆರೋಗ್ಯ ತೊಂದರೆ ಕಾಣಿಸಿಕೊಳ್ಳಲ್ಲ ಎಂದು ತಜ್ಞರು ಮನವರಿಕೆ ಮಾಡುತ್ತಿದ್ದರೂ ಜನರಿಂದ ಸ್ಪಂದನೆ ವ್ಯಕ್ತವಾಗುತ್ತಿಲ್ಲ. ಡಿಸೆಂಬರ್‌ದೊಳಗೆ ಗುರಿ ತಲುಪಿದರೆ ಮುಂಬರುವ ದಿನಗಳಲ್ಲಿ ಪ್ರತಿಕಾಯ ವೃದ್ಧಿಯಾಗುತ್ತದೆ. ಡಿಸೆಂಬರ್‌ದೊಳಗೆ ಗುರಿ ತಲುಪಲು ಅರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಪ್ರಕರಣ ಕುಸಿತ

2018-19ನೇ ಸಾಲಿನಲ್ಲಿ 445 ಮಂದಿಗೆ ಪಾಸಿಟಿವ್‌ ಬಂದಿದ್ದು 15 ಮಂದಿ ಮೃತಪಟ್ಟಿದ್ದರು. 2019-20ರಲ್ಲಿ 255 ಮಂದಿಗೆ ಪಾಸಿಟಿವ್‌ ಬಂದಿದ್ದು ಐವರು ಮೃತಪಟ್ಟಿದ್ದರು. 2020-21ರಲ್ಲಿ 25 ಮಂದಿಗೆ ಪಾಸಿಟಿವ್‌ ಬಂದಿದ್ದು ಶೂನ್ಯ ಮರಣ ದಾಖಲಾಗಿತ್ತು. ಜನರಲ್ಲಿ ಲಸಿಕೆ ಹಾಕಿಸಿಕೊಂಡರೆ ಉತ್ತಮ ಎಂಬ ಭಾವನೆ ಮೂಡುತ್ತಿಲ್ಲ. ಈವರೆಗಿನ ಕೆಎಫ್‌ಡಿ ಇತಿಹಾಸದಲ್ಲಿ 2012ರಿಂದ 2015ರವರೆಗೆ ಯಾವುದೇ ಮರಣ ಕಂಡು ಬಂದಿಲ್ಲ. ನಂತರದ ದಿನಗಳಲ್ಲಿ ವೈರಸ್‌ ಉಲ್ಬಣಗೊಂಡಿದೆ. ಹಾಗಾಗಿ ಜನರು ಉದಾಸೀನ ಮಾಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎನ್ನುತ್ತಾರೆ ತಜ್ಞರು

ಲಸಿಕೆ ಪ್ರಮಾಣ ಇಳಿಕೆ
2019ರ ಹಿಂದಿನ ವರ್ಷಗಳಲ್ಲಿ ಶೇ.50 ಗುರಿ ತಲುಪುವುದು ಕಷ್ಟವಾಗಿತ್ತು. 2019ರಲ್ಲಿ ಕಂಡು ಬಂದ ಭೀಕರತೆಗೆ ಜನರು ಹೆದರಿ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಿದ್ದರು. ಕಳೆದ ಎರಡು ವರ್ಷಗಳಲ್ಲಿ ಶೇ.70ಕ್ಕಿಂತ ಹೆಚ್ಚು ವ್ಯಾಕ್ಸಿನೇಷನ್‌ ಅಗಿದೆ. 11 ಜಿಲ್ಲೆಗಳಲ್ಲಿ ಮೂರು ಲಸಿಕೆ ನೀಡಲಾಗಿದೆ. ಈ ಬಾರಿ ನವೆಂಬರ್‌ ಮುಗಿಯುತ್ತ ಬಂದರೂ ಲಸಿಕೆ ಗುರಿ ಶೇ.50ರಷ್ಟು ತಲುಪಿಲ್ಲ

ಕೋವಿಡ್‌ ಲಸಿಕೆ ನೀಡುತ್ತಿರುವ ಕಾರಣ ಕೆಎಫ್‌ಡಿ ಲಸಿಕೆ ನೀಡಲು ತೊಂದರೆಯಾಗುತ್ತಿದೆ. ಜನರು ಎರಡೆರಡು ಲಸಿಕೆ ಪಡೆಯಲು ನಿರಾಕರಿಸುತ್ತಿದ್ದಾರೆ. ಕೊರೊನಾ ಲಸಿಕೆ ಪಡೆದ 14 ದಿನಗಳ ನಂತರ ಕೆಎಫ್‌ಡಿ ಲಸಿಕೆ ಪಡೆದರೆ ಯಾವುದೇ ತೊಂದರೆ ಆಗಲ್ಲ. ಈ ಬಗ್ಗೆ ಜನರು ಗಾಬರಿಗೊಳ್ಳುವುದು ಬೇಡ. ಕೆಎಫ್‌ಡಿ ಲಸಿಕೆ ಕೆಎಫ್‌ಡಿ ವೈರಸ್‌ನ ನಿಷ್ಕ್ರಿಯ ಭಾಗಗಳನ್ನು ಬಳಸಿ ಮಾಡಲಾಗಿರುತ್ತದೆ. ಅದಕ್ಕೂ ಕೋವಿಡ್‌ ಲಸಿಕೆಗೂ ಸಂಬಂಧವಿಲ್ಲ. ಕೆಎಫ್‌ಡಿಗೂ ಕೋವಿಡ್‌ ಲಸಿಕೆ ಪಡೆದರೆ ಸಾಕು ಎಂಬ ಮನೋಭಾವ ಬೇಡ.
ಡಾ|ರಘುನಂದನ್‌, ಉಪ ನಿರ್ದೇಶಕ ವಿಡಿಎಲ್‌ ಲ್ಯಾಬ್‌

ಶರತ್‌ ಭದ್ರಾವತಿ

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.