ಲಸಿಕೆ ಪಡೆಯದಿದ್ದರೂ ಸಕ್ಸಸ್‌ಫುಲ್‌ ಸಂದೇಶ!

ಲಸಿಕೆ ಗುರಿ ತಲುಪಲು ಜಿಲ್ಲಾಡಳಿತ ನಾನಾ ಪ್ರಯಾಸ ಪಟ್ಟಿದ್ದನ್ನು ನೋಡಿದ್ದೇವೆ

Team Udayavani, Dec 2, 2021, 5:32 PM IST

ಲಸಿಕೆ ಪಡೆಯದಿದ್ದರೂ ಸಕ್ಸಸ್‌ಫುಲ್‌ ಸಂದೇಶ!

ರಾಯಚೂರು: ಕೋವಿಡ್‌ ಲಸಿಕೆ ಶೇ.100ರಷ್ಟು ಗುರಿ ಸಾಧಿಸಲು ಸರ್ಕಾರ ಆರೋಗ್ಯ ಇಲಾಖೆಗೆ ಹಿಂದೆಯೇ ಗುರಿ ನೀಡಿತ್ತು. ಗುರಿ ತಲುಪಲು ಅಧಿಕಾರಿಗಳು ನಾನಾ ಕಸರತ್ತು ನಡೆಸಿದ್ದರೆ; ಈಗ 2ನೇ ಡೋಸ್‌ ಲಸಿಕೆ ಪಡೆಯದವರಿಗೂ ಸಕ್ಸಸ್‌ಫುಲ್‌ ಸಂದೇಶಗಳು ಬರುತ್ತಿರುವುದು ಅನುಮಾನಕ್ಕೆಡೆ ಮಾಡಿವೆ.

ಲಸಿಕೆ ಗುರಿ ತಲುಪಲು ಜಿಲ್ಲಾಡಳಿತ ನಾನಾ ಪ್ರಯಾಸ ಪಟ್ಟಿದ್ದನ್ನು ನೋಡಿದ್ದೇವೆ. ಗ್ರಾಮೀಣ ಭಾಗದಲ್ಲಿ ಲಸಿಕೆ ಪಡೆಯಲು ಜನ ಅಸಹಕಾರ ತೋರಿದ್ದರಿಂದ ಜಿಲ್ಲಾಡಳಿತಕ್ಕೆ ತಲೆ ನೋವಾಗಿತ್ತು. ಇ ದಕ್ಕಾಗಿ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಲಸಿಕೆ ಪಡೆಯುವಂತೆ ಮನವೊಲಿಸುವ ಪರಿಸ್ಥಿತಿ ಬಂದರೆ, ಹೊಲಗಳಿಗೆ ತೆರಳಿ ಅಲ್ಲಿಯೇ ಲಸಿಕೆ ನೀಡಿದ ಘಟನೆಗಳು ನಡೆದವು.

ಈಗ ಮೊದಲನೇ ಡೋಸ್‌ ಪಡೆದವರಿಗೆ 84 ದಿನಗಳು ಮುಗಿಯುತ್ತಿದ್ದಂತೆ 2ನೇ ಡೋಸ್‌ ಪಡೆಯದಿದ್ದರೂ ಸಂದೇಶ ಬರುತ್ತಿವೆ. ನಾವು ಲಸಿಕೆಯನ್ನು ಪಡೆದಿಲ್ಲ. ಆದರೂ ಸಂದೇಶ ಯಾಕೆ ಬಂದಿದೆ ಎಂಬ ಆತಂಕ ಜನರಲ್ಲಿ ಮೂಡುತ್ತಿದೆ. ಜಿಲ್ಲೆಯಲ್ಲಿ ಈವರೆಗೆ ಮೊದಲನೇ ಡೋಸ್‌ ಲಸಿಕೆ ಶೇ.83ರಷ್ಟು ಜನರಿಗೆ ನೀಡಿದ್ದರೆ, ಶೇ.52ರಷ್ಟು ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ. ಅಂದರೆ 11,53,451 ಜನರಿಗೆ ಮೊದಲ ಡೋಸ್‌, 6,75,267 ಜನರಿಗೆ 2ನೇ ಡೋಸ್‌ ಲಸಿಕೆ ನೀಡಲಾಗಿದೆ.

ತಾಂತ್ರಿಕ ದೋಷ ಕಾರಣ?: ಆರೋಗ್ಯ ಇಲಾಖೆ ಅಧಿ ಕಾರಿಗಳ ಪ್ರಕಾರ ಈ ರೀತಿ ಸಂದೇಶ ರವಾನೆಯಾಗುವುದಕ್ಕೆ ತಾಂತ್ರಿಕ ದೋಷ ಕಾರಣ ಎನ್ನುತ್ತಿದ್ದಾರೆ. ಪೋರ್ಟಲ್‌ ಸರಿಯಾಗಿ ಕೆಲಸ ಮಾಡದಿರುವುದೇ ಇದಕ್ಕೆ ಕಾರಣವಾಗಿದೆ. ಮೊದಲ ಡೋಸ್‌ ಹಾಕಿದ 84 ದಿನಗಳ ಬಳಿಕ ಎರಡನೇ ಡೋಸ್‌ ನೀಡಲಾಗುತ್ತದೆ. ಆರಂಭದಲ್ಲಿ ಒಂದರ ಬಳಿಕ ಮತ್ತೂಂದು ಲಸಿಕೆ ನೀಡಲು ಅವಧಿ ಕಡಿಮೆಯಿತ್ತು. ಬಳಿಕ ಆ ಅವ ಧಿಯನ್ನು 84 ದಿನಗಳಿಗೆ ವಿಸ್ತರಿಸಲಾಯಿತು. 84 ದಿನ ಆಗುವವರೆಗೆ ಇಲಾಖೆಯ ಪೋರ್ಟಲ್‌ನಲ್ಲಿ ಹೆಸರು ಸ್ವೀಕರಿಸುತ್ತಿರಲಿಲ್ಲ. ಈಗ ಅದು ಸರಿಯಾಗಿ ಕೆಲಸ ಮಾಡದ ಕಾರಣ ಇಲಾಖೆ ಅ ಧಿಕಾರಿಗಳೇ ಲಸಿಕೆ ಅವಧಿ  ಮುಗಿದವರಿಗೆ ಕರೆ ಮಾಡಿ ತಿಳಿಸುತ್ತಿದ್ದಾರೆ. ಆದರೆ, ಕೆಲವರಿಗೆ ಮಾತ್ರ ನಿಮ್ಮ ಎರಡನೇ ಡೋಸ್‌ ಲಸಿಕೆ ಯಶಸ್ವಿಯಾಗಿದೆ ಎಂಬ ಸಂದೇಶ ಬರುತ್ತಿರುವುದು ಅನುಮಾನಕ್ಕೆಡೆ ಮಾಡಿದಂತಾಗಿದೆ.

ಕಟ್ಟೆಚ್ಚರಕ್ಕೆ ಸೂಚನೆ
ಅಕ್ಕಪಕ್ಕದ ಜಿಲ್ಲೆಗಳಲ್ಲಿ 3ನೇ ಅಲೆ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಿದ್ದರೆ, ಜಿಲ್ಲೆಯಲ್ಲಿ ಮಾತ್ರ ಯಾವುದೇ ಮುನೆಚ್ಚರಿಕೆ ವಹಿಸಿರಲಿಲ್ಲ. ಆರೋಗ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ  ಅನಿಲ್‌ ಕುಮಾರ್‌ ಅಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದ್ದು, ಕೂಡಲೇ ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಗಡಿ ಭಾಗದ ಏಳು ಚೆಕ್‌ ಪೋಸ್ಟ್‌ಗಳನ್ನು ಮತ್ತೆ ಕಾರ್ಯೋನ್ಮುಖಗೊಳಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಅಲ್ಲದೇ, ಎರಡು ಡೋಸ್‌ ಲಸಿಕೆ ಪಡೆದಿದ್ದು, ಆರ್‌ ಟಿಪಿಸಿಆರ್‌ ಪರೀಕ್ಷೆಗೆ ಒಳಪಟ್ಟವರಿಗೆ ಮಾತ್ರ ಪ್ರವೇಶ ನೀಡಲು ಸೂಚಿಸಿದ್ದು, ರೋಗ ಲಕ್ಷಣಗಳಿದ್ದಲ್ಲಿ ತಪಾಸಣೆ ಮಾಡುವಂತೆ ತಿಳಿಸಲಾಗಿದೆ. ಇನ್ನೂ ವಿವಿಧ ವಸತಿ ನಿಲಯಗಳಲ್ಲಿ ವಾಸಿಸುವ, ಕಾಲೇಜುಗಳಲ್ಲಿ ಓದುತ್ತಿರುವ ಕೇರಳ, ಮಹಾರಾಷ್ಟ್ರದ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಕೋವಿಡ್‌ 19 ಎರಡನೇ ಡೋಸ್‌ ಲಸಿಕೆ ಹಾಕಿಸಿಕೊಳ್ಳದವರಿಗೆ ನಾವೆ ಕರೆ ಮಾಡಿ ತಿಳಿಸುತ್ತಿದ್ದೇವೆ. ಆದರೆ, ಕೆಲವರಿಗೆ ಸಕ್ಸಸ್‌ಫುಲ್‌ ಸಂದೇಶಗಳು ಹೋಗುತ್ತಿರುವ ದೂರುಗಳು ಬಂದಿವೆ. ಇಂಟರ್‌ನೆಟ್‌ ಪೋರ್ಟಲ್‌ ಸಮಸ್ಯೆಯಿಂದ ಈ ರೀತಿ ಸಂದೇಶಗಳು ಹೋಗುತ್ತಿವೆ. ಸಂದೇಶ ಬಂದವರು ಆತಂಕ ಪಡೆದೆ ಸಮೀಪದ ಆರೋಗ್ಯ ಕೇಂದ್ರಗಳಿಗೆ ಹೋಗಿ 2ನೇ ಡೋಸ್‌ ಲಸಿಕೆ ಪಡೆಯಬಹುದು. ಇನ್ನೂ 84 ದಿನಗಳಾಗಿದ್ದರೆ ಕೂಡಲೇ ಲಸಿಕೆ ಪಡೆಯಬೇಕು.
∙ಡಾ| ರಾಮಕೃಷ್ಣ,
ಜಿಲ್ಲಾ ಆರೋಗ್ಯಾಧಿಕಾರಿ

*ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.