ಸುಗಮ ಸಂಚಾರ ಸಮಸ್ಯೆಗೆ ಸಿಗಬೇಕಿದೆ ಮುಕ್ತಿ

ಅಡ್ಡಾ ದಿಡ್ಡಿಯಾಗಿ ವಾಹನಗಳು ಒಡಾಡುತ್ತಿರುವುದರಿಂದ ಈ ವೃತ್ತದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ.

Team Udayavani, Dec 2, 2021, 6:17 PM IST

ಸುಗಮ ಸಂಚಾರ ಸಮಸ್ಯೆಗೆ ಸಿಗಬೇಕಿದೆ ಮುಕ್ತಿ

ಇಂಡಿ: ಸುಮಾರು 45ರಿಂದ 50 ಸಾವಿರ ಜನಸಂಖ್ಯೆ ಹೊಂದಿದ ಇಂಡಿ ಪಟ್ಟಣದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಗ್ರಾಮಿಣ ಭಾಗದಿಂದ ಬರುವ ಜನರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಅಲ್ಲದೆ ಬಸವೇಶ್ವರ ವೃತ್ತದಲ್ಲಿರುವ ಸಿಗ್ನಲ್‌ ಸಹ ಕಾರ್ಯ ನಿರ್ವಹಿಸದೇ ಇರುವ ಕಾರಣ ವಾಹನ ಸವಾರರು ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿದ್ದಾರೆ.

ಪಟ್ಟಣದ ಹೃದಯ ಭಾಗ ಎಂದೆ ಕರೆಸಿಕೊಳ್ಳುವ ಜಗಜ್ಯೋತಿ ಬಸವೇಶ್ವರ ವೃತ್ತ ಪ್ರಮುಖ ಮಾರ್ಗಗಳಿಂದ ಕೂಡಿದ್ದು ಸುತ್ತವರಿದು ವಾಹನಗಳು ಹಾದು ಹೊಗಬೇಕು. ಪಟ್ಟಣದಲ್ಲಿ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಬೇಕಾಗಿದೆ.

ಬಸವೇಶ್ವರ ವೃತ್ತ ಪ್ರಮುಖ ಮಾರ್ಗಗಳಿಂದ ಕೂಡಿದ್ದು ಲಾರಿ, ಭಾರಿ ಗಾತ್ರದ ಹೈವಾ, ಟ್ರ್ಯಾಕ್ಟರ್‌, ಬಸ್‌, ಕಾರು, ಜಿಪು, ದ್ವಿಚಕ್ರ ವಾಹನ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ನಿತ್ಯ ವಾಹನಗಳು ಓಡಾಡುತ್ತವೆ. ಅಡ್ಡಾ ದಿಡ್ಡಿಯಾಗಿ ವಾಹನಗಳು ಒಡಾಡುತ್ತಿರುವುದರಿಂದ ಈ ವೃತ್ತದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ.

ಆದರೆ ಈ ವೃತ್ತದ ಮೂಲಕ ವಿಜಯಪುರ, ಝಳಕಿ, ಕಲಬುರಗಿ, ಅಕ್ಕಲಕೊಟ, ಸೊಲ್ಲಾಪುರ, ಪಂಢರಪುರ, ಗಾಣಗಾಪುರ, ಲಿಂಗಸಸೂರು ಸೇರಿದಂತೆ ನೆರೆಯ ಮಹಾರಾಷ್ಟ್ರ, ಆಂಧ್ರ ಕಡೆ ಹಾದು ಹೋಗಬೇಕು. ಹೀಗಾಗಿ ನಾನಾ ಭಾಗಗಳಿಂದ ಹೋಗಿ ಬರುವ ಎಲ್ಲ ವಾಹನಗಳು ಈ ವೃತ್ತದ ಮೂಲಕ ಸಂಚರಿಸುತ್ತಿರುವುದರಿಂದ ವಾಹನ ದಟ್ಟಣೆ ಹಾಗೂ ಪಕ್ಕದಲ್ಲಿ ಬಸ್‌ ನಿಲ್ದಾಣ ಇರುವುದರಿಂದ ಜನ ದಟ್ಟಣೆ ಕೂಡಾ ಹೆಚ್ಚಾಗಿದೆ. ಅಲ್ಲದೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ಸಿಗ್ನಲ್‌ ಬಲ್ಬ್ಗಳು ಪೊಲೀಸರಿಗೆ ಸಹಕಾರಿಯಾಗಿದ್ದು ಸಿಗ್ನಲ್‌ ಬಲ್ಬ್ ಗಳ ನಿರ್ವಹಣೆ ಮಾಡಬೇಕಾದ ಪುರಸಭೆಯವರು ಹಾಗೂ ಪೊಲೀಸ್‌ ಇಲಾಖೆಯವರು ಕೈ ಕಟ್ಟಿ ಕುಳಿತಿದ್ದಾರೆ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಈ ಕುರಿತು ಈಗಾಗಲೆ ಪುರಸಭೆಯವರ ಗಮನಕ್ಕೆ ತರಲಾಗಿದೆ. ಶಾಸಕರ ಅನುದಾನದಲ್ಲಿ ನಿರ್ಮಾಣ ಮಾಡಲಾಗಿದೆ. ಹಾಗಾಗಿ ಇದರ ನಿರ್ವಹಣೆ, ರಿಪೇರಿ ವೆಚ್ಚ ಏನಿದ್ದರೂ ಪುರಸಭೆಯವರು ನೋಡಿಕೊಳ್ಳಬೇಕು.
ಭೀಮನಗೌಡ ಬಿರಾದಾರ,
ಸಿಪಿಐ ಶಹರ ಠಾಣೆ, ಇಂಡಿ

ವಿಜಯಪುರ ಜಿಲ್ಲೆಯ ಯಾವ ತಾಲೂಕು ಕೇಂದ್ರದಲ್ಲಿ ಇಲ್ಲದೆ ಇರುವ ಸಿಗ್ನಲ್‌ ಬಲ್ಬ್ಗಳನ್ನು ಪಟ್ಟಣದಲ್ಲಿ ಅಳವಡಿಸಲಾಗಿದೆ. ಇದರ ಕೀರ್ತಿ ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸಲ್ಲಬೇಕು. ಶಾಸಕರು ಮುತುವರ್ಜಿ ವಹಿಸಿ ಅನುದಾನ ಕೊಡಿಸಿದ್ದರಿಂದ ಸಿಗ್ನಲ್‌ ಅಳವಡಿಸಲು ಸಾಧ್ಯವಾಗಿದೆ. ಆದರೆ ಇಂದು ಅದೇ ಸಿಗ್ನಲ್‌ ಬಲ್ಬ್ಗಳು ಸ್ಥಗಿತಗೊಂಡು ಜನರ ಅಪಹಾಸ್ಯಕೆ ಈಡಾಗಿದ್ದು ಸಂಬಂಧಿಸಿದವರು ತ್ವರಿತವಾಗಿ ಸಿಗ್ನಲ್‌ ಆರಂಭಿಸಬೇಕು.
ಲಕ್ಷ್ಮಣ ಕರಕ್ಕಿ, ಇಂಡಿ ನಿವಾಸಿ

ಯಲಗೊಂಡ ಬೇವನೂರ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.