ಹೆತ್ತಬ್ಬೆಗೆ ಚಿಕಿತ್ಸೆಯಿತ್ತ ವೈದ್ಯನ ವಿರುದ್ಧ ಗೆದ್ದ ಪುತ್ರಿ

ವೈದ್ಯರು ಸೂಕ್ತ ಸಲಹೆ ನೀಡದ್ದರಿಂದ ಕಾಣಿಸಿಕೊಂಡ ಬೆನ್ನೆಲುಬಿನ ಸಮಸ್ಯೆ

Team Udayavani, Dec 3, 2021, 6:50 AM IST

ಹೆತ್ತಬ್ಬೆಗೆ ಚಿಕಿತ್ಸೆಯಿತ್ತ ವೈದ್ಯನ ವಿರುದ್ಧ ಗೆದ್ದ ಪುತ್ರಿ

ಲಂಡನ್‌: “ಅಯ್ಯೋ ಅಮ್ಮಾ ನನ್ನೇಕೆ ಹುಟ್ಟಿಸಿದೆ?’ ಹೀಗೆಂದು ಹೆತ್ತಮ್ಮನನ್ನು ಪ್ರಶ್ನಿಸುವವರಿದ್ದಾರೆ. ಹಾಗೆಂದು ಕೋರ್ಟ್‌ಗೆ ಹೋಗಿ ದಾವೆ ಹೂಡಿದವರು ಭಾರತದಲ್ಲಿ ಇಲ್ಲ. ಆದರೆ ಲಂಡನ್‌ನಲ್ಲಿ ಇವಿ ಟೊಂಬೆಸ್‌ (20) ಎಂಬ ಯುವತಿ ವೈದ್ಯರು ತಾಯಿಗೆ ತಪ್ಪು ಮಾಹಿತಿ ನೀಡಿದ್ದರಿಂದಲೇ ತನ್ನ ಹುಟ್ಟಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ದಾವೆ ಹೂಡಿ, ಗೆದ್ದಿದ್ದಾಳೆ.

ಜಗತ್ತಿನಲ್ಲಿ ಇದೊಂದು ಅತ್ಯಂತ ಅಪರೂಪದ ಪ್ರಕರಣ ಎಂದು ವಿಶ್ಲೇಷಿಸಲಾಗುತ್ತಿದೆ. ಇವಿ ಅವರಿಗೆ ಹುಟ್ಟಿನಿಂದಲೇ ಬೆನ್ನೆಲುಬಿನ ಸಮಸ್ಯೆ ಉಂಟಾಗಿದೆ. ತನ್ನ ತಾಯಿ ಕ್ಯಾರೊ ಲೈನ್‌ ಅವರ ವೈದ್ಯ ಡಾ| ಫಿಲಿಪ್‌ ಮೈಕೆಲ್‌ ತನಗೆ ಬೆನ್ನೆಲುಬಿನ ಸಮಸ್ಯೆ ಉಂಟಾಗದಂತೆ ಸೂಕ್ತ ರೀತಿ ಯಲ್ಲಿ ಔಷಧ ಸೇವಿಸಲು ಸೂಚಿಸುವಲ್ಲಿ ವಿಫ‌ಲರಾಗಿ ದ್ದಾರೆ. ಹೀಗಾಗಿ ನನ್ನ ಜನನವಾಯಿತು ಎಂದು ದೂರಿದ್ದಾಳೆ. ಅದರಿಂದಾಗಿ ತಾನು 24 ಗಂಟೆಗಳ ಕಾಲ ಮೂಗಿನಲ್ಲಿ ನಳಿಕೆ ಇರಿಸಿಕೊಂಡೇ ಇರಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದ್ದಾಳೆ.

ತಾಯಿ ಕ್ಯಾರೊಲೈನ್‌ ಗರ್ಭಿಣಿ ಯಾಗಿದ್ದಾಗ ಫಾಲಿಕ್‌ ಆ್ಯಸಿಡ್‌ ಅನ್ನು ಸೂಕ್ತ ರೀತಿಯಲ್ಲಿ ಸೇವಿಸುವಂತೆ ವೈದ್ಯಕೀಯ ಸಲಹೆ ನೀಡಲಿಲ್ಲ ಎಂದು ಆರೋಪಿಸಿದ್ದಾಳೆ. ಈ ಬಗ್ಗೆ ಲಂಡನ್‌ ಹೈಕೋರ್ಟ್‌ನಲ್ಲಿ ಇವಿ ಟೊಂಬೆಸ್‌ ದಾವೆ ಹೂಡಿದ್ದರು. ಅದನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್‌ ಯುವತಿಯ ಪರವಾಗಿ ನ್ಯಾ| ರೊಸಾಲಿಂಡ್‌ ಅವರ ಪರವಾಗಿ ಯೇ ಆದೇಶ ತೀರ್ಪು ನೀಡಿ ನಗದು ಪರಿಹಾರ ನೀಡುವಂತೆಯೂ ಆದೇಶ ನೀಡಿದೆ.

ಇದನ್ನೂ ಓದಿ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಡಾ| ಫಿಲಿಪ್‌ ಮೈಕೆಲ್‌ ಬಳಿ ವೈದ್ಯಕೀಯ ಸಲಹೆ ಪಡೆಯುವ ಸಂದರ್ಭದಲ್ಲಿ ಇವಿ ಅವರ ತಾಯಿ ಗರ್ಭಿಣಿಯಾಗಿ ರಲಿಲ್ಲ. ಅನಂತರದ ಸಂದರ್ಭಗಳಲ್ಲಿ ವೈದ್ಯರು ಯುವತಿಯ ತಾಯಿಗೆ ಗರ್ಭಧಾರಣೆಯ ಮೊದಲ 12 ವಾರಗಳಲ್ಲಿ ಫಾಲಿಕ್‌ ಆಮ್ಲದ ಮಾತ್ರೆಗಳನ್ನು ತೆಗೆದುಕೊಳ್ಳಲು ಸೂಚಿಸುತ್ತಿದ್ದರೆ ಅರ್ಜಿದಾರರಿಗೆ ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ. ಹೀಗಾಗಿ ಅವರಿಗೆ ಪರಿಹಾರ ನೀಡಬೇಕಾದ ಅಗತ್ಯವಿದೆ ಎಂದು ನ್ಯಾಯಮೂರ್ತಿ ತೀರ್ಪಿನಲ್ಲಿ ಆದೇಶಿಸಿದ್ದಾರೆ.

ಆರೋಪ ನಿರಾಕರಣೆ: ಯುವತಿ ಇವಿ ತಮ್ಮ ಮೇಲೆ ಹೊರಿಸಿದ ಆರೋಪಗಳನ್ನು ಡಾ| ಮೈಕೆಲ್‌ ಫಿಲಿಪ್‌ ನಿರಾಕರಿಸಿದ್ದಾರೆ. ಅವರ ತಾಯಿ ಕ್ಯಾರೊ ಲೈನ್‌ ಅವರಿಗೆ ಸೂಕ್ತ ರೀತಿಯಲ್ಲಿಯೇ ವೈದ್ಯಕೀಯ ಸಲಹೆ ನೀಡಿದ್ದಾಗಿ ಹೇಳಿದ್ದಾರೆ. ತಾಯಿ ಕ್ಯಾರೊ ಲೈನ್‌ ಕೂಡ ಪ್ರತಿಕ್ರಿಯೆ ನೀಡಿ, ವೈದ್ಯರು ಫಾಲಿಕ್‌ ಆ್ಯಸಿಡ್‌ ಮಾತ್ರೆ ತೆಗೆದುಕೊಳ್ಳುವ ಅಗತ್ಯವಿಲ್ಲ. ಉತ್ತಮ ಆಹಾರ ಪದ್ಧತಿ ಅನುಸರಿಸಿದರೆ ಸಾಕಾಗು ತ್ತದೆ ಎಂದು ಹೇಳಿದ್ದರು ಎಂದು ತಿಳಿಸಿದ್ದಾರೆ.

ನೋವಿನಲ್ಲೂ ಸಾಧನೆ ಬೆನ್ನೆಲುಬಿನ ಸಮಸ್ಯೆ ಇದ್ದಾಗಿಯೂ ಇವಿ ಟೊಂಬೆಸ್‌ ಕುದುರೆ ಸವಾರಿಯಲ್ಲಿ ಉತ್ತಮ ಪರಿಣತಿಯನ್ನು ಪಡೆದುಕೊಂಡಿದ್ದಾರೆ. ಅದರಲ್ಲಿಯೇ ಯಶಸ್ಸು ಸಾಧಿಸಿರುವ ಅವರು, ಹಲವು ಪ್ರಶಸ್ತಿಗಳನ್ನೂ ಗೆದ್ದುಕೊಂಡಿದ್ದಾರೆ.

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.